Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಾತಿಗಣತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

Facebook
Twitter
Telegram
WhatsApp

ಮೈಸೂರು: ಬಿಹಾರದಲ್ಲಿ ಜಾತಿಗಣತಿ ವರದಿ ಸಲ್ಲಿಕೆಯಾದ ಮೇಲೆ ಕರ್ನಾಟಕದಲ್ಲೂ ಜಾತಿಗಣತಿ ವರದಿಗೆ ಒತ್ತಾಯ ಹೆಚ್ಚಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನವೆಂಬರ್ ತಿಂಗಳಲ್ಲಿ ವರದಿ ನನ್ನ ಕೈಸೇರಬಹುದು ಎಂದಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂತರಾಜು ಅಧ್ಯಕ್ಷರಾಗಿದ್ದಂತ ಸಂದರ್ಭದಲ್ಲಿ ಕುಮಾರಸ್ವಾಮಿ ಅವರಿಗೆ ವರದಿ ನೀಡಲಾಗಿತ್ತು. ಆದರೆ ಅವರು ಸ್ವೀಕರಿಸಿರಲಿಲ್ಲ. ಈಗ ಹೊಸ ಅಧ್ಯಕ್ಷರಿಗೆ ವರದಿ ನೀಡಲು ಕಾಂತರಾಜುಗೆ ಸೂಚನೆ ನೀಡಲಾಗಿದ್ದು, ನವೆಂಬರ್ ನಲ್ಲಿ ನನ್ನ ಕೈ ತಲುಪಬಹುದು. ಜಾತಿಗಣತಿ ವರದಿ ನನಗೆ ತಲುಪಿದ ಬಳಿಕ, ಅದನ್ನು ಪರಿಶೀಲಿಸಿ ತೀರ್ಮಾನ ಮಾಡಲಾಗುವುದು ಎಂದಿದ್ದಾರೆ.

ಜಾತಿ ಗಣತಿ ಸಮಾಜಕ್ಕೆ‌ ಮಾರಕವಲ್ಲ, ಅದು ಸಮಾಜವನ್ನು ವಿಭಜಿಸುವುದಿಲ್ಲ. ಯಾವ ಸಮುದಾಯಗಳು ಎಷ್ಟಿದೆ ಎಂಬ ವರದಿ ಸರ್ಕಾರಕ್ಕೆ ಬೇಕು‌. ಯೋಜನೆಗಳನ್ನು ಸಿದ್ಧಪಡಿಸುವುದಕ್ಕೂ ಇದು ಅತ್ಯವಶ್ಯಕ. ಆರ್ಥಿಕವಾಗಿ ಹಿಂದುಳಿದವರ ಅಭಿವೃದ್ಧಿಗೂ ಇದು ಅನುಕೂಲವಾಗಲಿದೆ ಎಂದಿದ್ದಾರೆ

ಇನ್ನು ರಾಜ್ಯದಲ್ಲಿ ಬರದ ಸ್ಥಿತಿ ಉಂಟಾಗಿದ್ದು, ಕೇಂದ್ರದಿಂದ ಬರ ಪರಿಶೀಲನೆಗೆ ತಂಡವನ್ನು ಕರೆಸಿದ್ದಾರೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಮಸ್ಯೆಯನ್ನು ಸರಿಯಾಗಿ ಆಲಿಸಿ ಎಂದು ಅಧಿಕಾರಿಗಳಿಗೆ ಹೇಳಿದ್ದೇನೆ. ಬರ ಪ್ರವಾಸದ ಬಗ್ಗೆ ಕೇಂದ್ರ ಅಧಿಕಾರಿಗಳೇ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಹೀಗಾಗಿ ನಾನು ಅವರಿಗೆ ಆ ಕಡೆ ಈ ಕಡೆ ಅಂತ ನಿರ್ದೇಶನ ಮಾಡುವುದಕ್ಕೆ ಆಗಲ್ಲ. ಕೇಂದ್ರದ ಬಳಿ ಬರಪರಿಹಾರವಾಗೊ 4,500 ಕೋಟಿ ಪರಿಹಾರ ಕೇಳಿದ್ದೇವೆ. ಈಗ ಕೇಂದ್ರ ತಂಡದ ವರದಿ ಆಧರಿಸಿ, ಪರಿಹಾರದ ಹಣ ತೀರ್ಮಾನವಾಗುತ್ತದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!