Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಈಡಿಗ ಸಮುದಾಯದ ಬೇಡಿಕೆಗಳ ಈಡೇರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

---Advertisement---

ಬೆಂಗಳೂರು: ಇಂದು ನಗರದ ಅರಮನೆ ಮೈದಾನದಲ್ಲಿ ಈಡಿಗ ಸಮುದಾಯದ ಬೃಹತ್ ಸಮಾವೇಶ ನಡೆದಿದೆ. ಈ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ತಾವು ಹಣಕಾಸು ಸಚಿವರಾಗಿದ್ದಾಗಿನ ಸಮಾವೇಶದ ಬಗ್ಗೆ ಮೆಲುಕು ಹಾಕಿದ್ದಾರೆ.

ಈಡಿಗ ಸಮುದಾಯದಿಂದ ಹಲವು ಬೇಡಿಕೆಗಳನ್ನು ಇಡಲಾಗಿದೆ. ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ ಕಾರಣ ಯಾವುದೇ ಭರವಸೆ ಕೊಡುವುದಕ್ಕೆ ಆಗಲ್ಲ. ಅಧಿವೇಶನ ಮುಗಿದ ಬಳಿಕ ಬಂದು ಕಾಣುವುದಕ್ಕೆ ಹೇಳಿದ್ದೇನೆ. ಅಂದು 1995ರಲ್ಲೂ ಈಡಿಗ ಸಮಾವೇಶ ನಡೆದಿತ್ತು. ನಾನು ಹಣಕಾಸು ಸಚಿವನಾಗಿದ್ದೆ. ಜಾಲಪ್ಪ ಅವರು ಸೇರಿದಂತೆ ಎಲ್ಲರೂ ಸೇರಿ ಅರ್ಥಪೂರ್ಣವಾಗಿ ಕಾರ್ಯಕ್ರಮ ನಡೆಸಿದ್ದರು. ಅಂದಿನ ಮುಖ್ಯಮಂತ್ರಿಯಾಗಿದ್ದ ದೇವೇಗೌಡರು ಕೂಡ ಭಾಗವಹಿಸಿದ್ದರು.

ನಾರಾಯಣ ಗುರುಗಳ ಜಯಂತೋತ್ಸವವನ್ನು ಸರ್ಕಾರವೇ ಮಾಡಬೇಕೆಂದು ಮನವಿ ಮಾಡಿದ್ದರು. ನಾನು ಅಂದು ಆಶ್ವಾಸನೆ ಕೊಟ್ಟಿದ್ದೆ. ಅದರಂತೆ ಸರ್ಕಾರವೇ ನಡೆಸುತ್ತಿದೆ. ಕೋಟಿ ಚನ್ನಯ್ಯ ಥೀಮ್ ಪಾರ್ಕ್ ಗೆ 5 ಕೋಟಿ ನೀಡಿದ್ದೆ. ಅಧ್ಯಯನ ಪೀಠ ಒಂದು ಮಾಡುವುದಕ್ಕೆ ಆಗಿಲ್ಲ. ಅದರ ಕಡೆಗೂ ಗಮನ ಹರಿಸುತ್ತೇವೆ.

ನಾರಾಯಣ ಗುರುಗಳು ಜಾತಿ ಬಗ್ಗೆ ಹೇಳಿದ್ದರು. ನಮ್ಮ ಸ್ವಾರ್ಥಕ್ಕಾಗಿ ಜಾತಿ ಮಾಡಿಕೊಂಡಿದ್ದೇವೆ. ಜಾತಿ ಬಗ್ಗೆ ಹೇಳಬೇಡ, ಕೇಳ ಬೇಡ, ಮಾಡಬೇಡ ಎಂದಿದ್ದರು‌ ಎಂದು ನಾರಾಯಣ ಗುರುಗಳ ಮಾತನ್ನು ನೆನೆದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...