ಮೊದಲ ಬಾರಿಗೆ ವೇದಿಕೆ ಮೇಲೆ ಮಾತನಾಡಿದ ಧ್ರುವನಾರಾಯಣ್ ಮಗ ರಾಜಕೀಯ ಬಗ್ಗೆ ಹೇಳಿದ್ದೇನು..?

ಮೈಸೂರು: ಮಾಜಿ ಸಂಸದ ಆರ್ ಧ್ರುವನಾರಾಯಣ್ ಇತ್ತಿಚೆಗೆ ಅನಾರೋಗ್ಯದಿಂದ ಎಲ್ಲರನ್ನು ಬಿಟ್ಟು ಅಗಲಿದ್ದಾರೆ. ನಂಜನಗೂಡು ಕ್ಷೇತ್ರಕ್ಕೆ ಅವರ ಮಗ ದರ್ಶನ್ ಧ್ರುವನಾರಾಯಣ್ ಅವರಿಗೆ ಟಿಕೆಟ್ ನೀಡಬೇಕೆಂಬ ಡಿಮ್ಯಾಂಡ್ ಕಾರ್ಯಕರ್ತರಿಂದ ಶುರುವಾಗಿತ್ತು. ಅದು ಸತ್ಯವಾಗುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ. ಅದಕ್ಕೂ ಮುನ್ನ ದರ್ಶನ್ ಧ್ರುವನಾರಾಯಣ್ ಮೊದಲ ಬಾರಿಗೆ ವೇದಿಕೆ ಮೇಲೆ ಮಾತನಾಡಿದ್ದಾರೆ.

ಇಂದು ಎಚ್ ಡಿ ಕೋಟೆ ಕ್ರೀಡಾಂಗಣದಲ್ಲಿ ದಿವಂಗತ ಧ್ರುವನಾರಾಯಣ್ ಅವರಿಗೆ ನಮನ ಸಲ್ಲಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ದರ್ಶನ್ ಧ್ರುವನಾರಾಯಣ್, “ತಂದೆಯವರ ಅಂತಿಮ ದರ್ಶನಕ್ಕೆ ರಾಜ್ಯಾದ್ಯಂತ ಜನ ಬಂದಿದ್ದರು. ಕುಟುಂಬಕ್ಕೆ ಸಾಂತ್ವನ ಹೇಳಿದರು, ಧೈರ್ಯ ತುಂಬಿದರು. ಸಿದ್ದರಾಮಯ್ಯ, ಜಾರಕಿಹೊಳಿ ಸೇರಿದಂತೆ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ” ಎಂದು ಆ ದಿನಗಳನ್ನು ನೆನೆದರು.

ಇನ್ನು ಇದೆ ವೇಳೆ ರಾಜಕೀಯದ ಬಗ್ಗೆ ಮಾತನಾಡಿ, ನಮ್ಮ ತಂದೆ ಯಾವತ್ತೂ ಕೂಡ ನಮಗೆ ರಾಜಕೀಯದ ವಿಚಾರವನ್ನು ಹೇಳಿಕೊಡಲಿಲ್ಲ. ಅವರ ಜನಸೇವೆಯನ್ನು ನೋಡಿ ಬೆಳೆದವರು ನಾವೂ. ಅವರು ದೈಹಿಕವಾಗಿ ನಮ್ಮ ಜೊತೆ ಇಲ್ಲದೆ ಇರಬಹುದು. ಆದರೆ ಮಾನಸಿಕವಾಗಿ ಇದ್ದಾರೆ. ನಮ್ಮ ಇಡೀ ಕುಟುಂಬ ಜನ ಸೇವೆ ಮಾಡುತ್ತಾ ಬಂದಿದ್ದೇವೆ. ಇನ್ನಷ್ಟು ಪ್ರಾಮಾಣಿಕ ಪ್ರಯತ್ನ ಮಾಡುವ ಆಶೀರ್ವಾದ ನಮ್ಮ ಕುಟುಂಬದ ಮೇಲಿರಲಿ ಎಂದು ಕೇಳಿಕೊಂಡಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago