Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಿಂಗಾಲೇಶ್ವರ ಶ್ರೀಗಳ ಸ್ಪರ್ಧೆ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು..?

ಡಿಕೆ ಶಿವಕುಮಾರ್
---Advertisement---

ಬೆಂಗಳೂರು: ಬಿಜೆಪಿಯಿಂದ ಮತ್ತೆ ಪ್ರಹ್ಲಾದ್ ಜೋಶಿಯವರಿಗೆ ಟಿಕೆಟ್ ನೀಡಿದ್ದು, ದಿಂಗಾಲೇಶ್ವರ ಶ್ರೀಗಳು ವಿರೋಧ ವ್ಯಕ್ತಪಡಿಸಿದ್ದರು. ಅಭ್ಯರ್ಥಿ ಬದಲಾಯಿಸುವಂತೆ ಒತ್ತಾಯಿಸಿದ್ದರು. ಆದರೂ ಬಿಜೆಪಿ ಹಠ ಬಿಡಲಿಲ್ಲ. ಇದೀಗ ದಿಂಗಾಲೇಶ್ವರ ಶ್ರೀಗಳು ಜೋಶಿ ಅವರನ್ನು ಸೋಲಿಸಲೇಬೇಕೆಂಬ ಹಠದಿಂದ ಅವರೇ ಸ್ಪರ್ಧೆಗೆ ಇಳಿದಿದ್ದಾರೆ. ಶ್ರೀಗಳಿಗೆ ಕಾಂಗ್ರೆಸ್ ನಿಂದ ಟಿಕೆಟ್ ನೀಡಿ ಎಂದು ಒತ್ತಾಯಿಸುತ್ತಿದ್ದಾರೆ.

ದಿಂಗಾಲೇಶ್ವರ ಶ್ರೀಗೆ ಕೈ ಟಿಕೆಟ್ ವಿಚಾರವಾಗಿ ಮಾತನಾಡಿದ ಡಿಕೆ ಶಿವಕುಮಾರ್, ಶ್ರೀಗಳು ಹೋರಾಟದ ಮೂಲಕ ಬಂದವರು. ಅವರು ಏನೋ ಕೇಳ್ತಿದ್ದಾರೆ. ಆದರೆ ಅಂತಹ ಸ್ಥಿತಿ ಈಗಿಲ್ಲ. ಹಿಂದೆ ವೀರಶೈವರಿಗೆ ಟಿಕೆಟ್ ಕೊಟ್ಟಿದ್ದೆವು. ಈ ಬಗ್ಗೆ ಚರ್ಚೆ ಮಾಡ್ತೇವೆ. ಬಹಳ ಜನ ಒತ್ತಡ ಮಾಡ್ತಿದ್ದಾರೆ. ಎಐಸಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಸಿಎಂ, ಜಿಲ್ಲಾ ಉಸ್ತುವಾರಿಗಳ ಜೊತೆ ಮಾತನಾಡಬೇಕು. ಮೊದಲೇ ಬಂದಿದ್ದರೆ ನೋಡಬಹುದಿತ್ತೇನೋ ಎಂದು ದಿಂಗಾಲೇಶ್ವರ ಶ್ರೀ ಟಿಕೆಟ್ ಬಗ್ಗೆ ಡಿಕೆಶಿ ಸ್ಪಷ್ಟನೆ ನೀಡಿದ್ದಾರೆ.

ತೇಜಸ್ವಿ ರಮೇಶ್ ಅವರು ಕೂಡ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದು, ಆ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್, ತೇಜಸ್ವಿ ರಮೇಶ್ ವಾಪಸ್ ಬಂದಿದ್ದಾರೆ. ಅವರಿಗೆ ಬಿಜೆಪಿ ಬೇಡವಾಗಿದೆ. 10 ವರ್ಷಗಳ ನಂತರ ಮತ್ತೆ ಬಂದಿದ್ದಾರೆ. ಕೇರಳದಲ್ಲಿ ನಾನು ಪ್ರಚಾರ ಮಾಡಿದ್ದೆ. ಎರಡು ಕ್ಷೇತ್ರಗಳಲ್ಲಿ ಪ್ರಚಾರ ಪ್ರಾರಂಭಿಸಿದ್ದೆ. ಕಳೆದ ಬಾರಿ 9 ಸೀಟು ಯುಡಿಎಫ್ ಗೆದ್ದಿತ್ತು. ಈ ಭಾರಿ 20 ಸೀಟು ಗೆಲ್ಲಬಹುದು. ಬೆಂಗಳೂರು ಗ್ರಾಮಾಂತರದಲ್ಲಿ ಬಿಎಸ್ ಪಿ ವಿಥ್ ಡ್ರಾ ಮಾಡಿದ್ದಾರೆ. ಕಾಂಗ್ರೆಸ್ ಜೊತೆ ಸೇರಿದ್ದಾರೆ. ನಮ್ಮಲ್ಲಿ ಯಾವ ಭಿನ್ನಮತವಿಲ್ಲ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment