Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಗನ ಸಂಸದ ಸ್ಥಾನ ಅನರ್ಹತೆ ಬಗ್ಗೆ ಹೆಚ್ ಡಿ ರೇವಣ್ಣ ಹೇಳಿದ್ದೇನು..?

Facebook
Twitter
Telegram
WhatsApp

ಹಾಸನ: ಪ್ರಜ್ವಲ್ ರೇವಣ್ಣ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಇನ್ನು ಆರು ವರ್ಷಗಳ ಕಾಲ ಚುನಾವಣೆಯಲ್ಲಿ ನಿಲ್ಲುವಂತೆ ಇಲ್ಲ. ಆದ್ರೆ ಇನ್ನು ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆಯೂ ಬರ್ತಾ ಇದೆ. ಈ ಬೆನ್ನಲ್ಲೇ ಇಂಥದ್ದೊಂದು ಬೆಳವಣಿಗೆ ನಡೆದಿರೋದು ದೊಡ್ಡ ಗೌಡರ ಕುಟುಂಬಕ್ಕೆ ಆಘಾತ ತಂದಿದೆ.

ಈ ಸಂಬಂಧ ಮಾತನಾಡಿರುವ ಹೆಚ್ ಡಿ ರೇವಣ್ಣ, ಯಾರೇ ಆಗಲಿ ಕಾನೂನಿಗೆ ತಲೆ ಬಾಗಲೇಬೇಕು. ನಾವೂ ಹೈಕೋರ್ಟ್ ತೀರ್ಪನ್ನು ಗೌರವಿಸುತ್ತೇವೆ. ನನಗೆ ಇನ್ನೂ ಹೈಕೋರ್ಟ್ ತೀರ್ಪಿನ ಪ್ರತಿ ಸಿಕ್ಕಿಲ್ಲ. ಯಾರೇ ಆಗಲಿ ಕಾನೂನಿಗೆ ಗೌರವ ನೀಡಲೇಬೇಕು. ಸರಿಯಾದ ಮಾಹಿತಿ ತಿಳಿದುಕೊಂಡು ಮಾತನಾಡುತ್ತೇನೆ ಎಂದಿದ್ದಾರೆ.

ಇನ್ನು ಶಾಸಕ ಎ ಮಂಜು ಈ ಮೊದಲು ಬಿಜೆಪಿಯಲ್ಲಿದ್ದಾಗ ಇದಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ್ದರು. ಈಗ ಜೆಡಿಎಸ್ ನಿಂದ ಶಾಸಕರಾಗಿದ್ದಾರೆ. ಈ ಬಗ್ಗೆಯೂ ಮಾತನಾಡಿರುವ ರೇವಣ್ಣ ಅವರು, ಯಾರೂ ಯಾವ ವಿಚಾರಕ್ಕೆ ಏನು ಮಾಡಿದರೋ ಗೊತ್ತಿಲ್ಲ. ಎ ಮಂಜು ಏನು ಹೇಳಿದ್ದಾರೋ ಗೊತ್ತಿಲ್ಲ. ಪ್ರಜ್ವಲ್ ರೇವಣ್ಣ ಅವರ ವಕೀಲರಿದ್ದಾರೆ. ಅವರೇ ಈ ಸಂಬಂಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!