Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೋಲ ನಡೆಸಿದ ಖಾದರ್ ನರಕಕ್ಕೆ ಹೋಗಲಿ ಎಂಬ ವ್ಯಕ್ತಿಗೆ ಖಾದರ್ ಹೇಳಿದ್ದೇನು..?

Facebook
Twitter
Telegram
WhatsApp

ಮಂಗಳೂರು ಕಡೆಯೆಲ್ಲಾ ದೈವ, ಕೋಲದ ಪದ್ದತಿ ಇದೆ. ವಿಧಾನಸಭಾ ಅಧ್ಯಕ್ಷ ಯುಟಿ ಖಾದರ್ ಕೂಡ ಇತ್ತಿಚೆಗೆ ಹರಕೆ ಕೋಲದಲ್ಲಿ ಭಾಗಿಯಾಗಿದ್ದರು. ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಮುಖಂಡ ಸಾಲೇತ್ತೂರು ಫೈಜಿ ಆಕ್ರೋಶ ಹೊರ ಹಾಕಿದ್ದರು. ಕೊರಗಜ್ಜನ ಭಕ್ತ ಯುಟಿ ಖಾದರ್ ನನ್ನು ಮುಸ್ಲಿಮರು ಕೇವಲ ರಾಜಕಾರಣಿಯಾಗಿ ಕಂಡರೆ ಸಾಕು. ಧಾರ್ಮಿಕ ಮುಖಂಡರಾಗಿ ಕಾಣುವುದು ಬೇಡ. ಖಾದರ್ ಕೊರಗಜ್ಜನಿಗೂ, ಕಲ್ಲುರ್ಟಿ, ಪಂಜುರ್ಲಿಗೂ ಆರಾಧಿಸಲಿ. ಪ್ರಸಾದ ತೆಗೆದುಕೊಂಡು ತಲೆಗೆ ಮೆತ್ತಿಕೊಂಡು ನರಕಕ್ಕೆ ಹೋಗಲಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಯುಟಿ ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಗೀಚುವವರನ್ನು ಇತಿಹಾಸ ನೆನಪಿಟ್ಟುಕೊಳ್ಳುವುದಿಲ್ಲ. ಪ್ರಶ್ನೆ ಕೇಳುವವರನ್ನು ನೆನಪಿಟ್ಟುಕೊಳ್ಳುವುದಿಲ್ಲ. ಬದಲಿಗೆ ಯಾರು ಕೆಲಸ ಮಾಡುತ್ತಾರೆ, ಯಾರು ಉತ್ತರ ಕೊಡುತ್ತಾರೆ ಅಂಥವರನ್ನು ಮಾತ್ರ ನೆನಪಿಟ್ಟುಕೊಳ್ಳುತ್ತದೆ.

 

ನಮ್ಮ ಪ್ರಾಚೀನ ಆಚರಣೆ ಅನುಗುಣವಾಗಿ ಅವರು ಹರಕೆ ಇಟ್ಟುಕೊಂಡಿದ್ರು. ಅದಕ್ಕೆ ಹೋಗುವುದು, ಗೌರವ ಕೊಡುವುದು ನಮ್ಮ ಸಂಸ್ಕೃತಿ. ಹೀಗಾಗಿ ನಾನು ಹೋಗಿದ್ದೆ. ಯಾರೋ ಒಬ್ಬ ಗೀಚಿದ್ರೆ , ನೂರು ಜನ ಒಪ್ಪಿಕೊಳ್ಳಲ್ಲ. ಅದಕ್ಕೆಲ್ಲ ನಾವು ಇಂಪಾರ್ಟೆಂಟ್ ಕೊಡಬಾರದು ಎಂದು ಯುಟಿ ಖಾದರ್ ಸ್ಪಷ್ಟ ಉತ್ತರ ನೀಡಿದ್ದಾರೆ.

ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್  ಶ್ರೀ ಕ್ಷೇತ್ರ ಪಣೋಲಿ ಬೈಲ್​ಗೆ ಭೇಟಿ ನೀಡಿ ಹರಕೆ ಕೋಲ ನೆರವೇರಿಸಿದ್ದರು. ಬಳಿಕ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಆಶೀರ್ವಾದ ಪಡೆದರು. ಅವರೊಂದಿಗೆ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜಾವ ಮತ್ತಿತ್ತರು ಭಾಗಿಯಾಗಿದ್ದರು. ಆದರೆ ಯು ಟಿ ಖಾದರ್​ ಮುಸ್ಲಿಂ ಪಂಗಡಕ್ಕೆ ಸೇರಿದವರಾಗಿದ್ದು, ಅವರ ನಡತೆಯನ್ನು ವಿರೋಧಿಸಿ ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ ಸಾಮಾಜಿಕ ಜಾಲತಾಣದಲ್ಲಿ ಬರೆದು ಹಾಕುವ ಮೂಲಕ ವಿರೋಧಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

ಭಾಷಣದಲ್ಲಿ ಯಡವಟ್ಟು : ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕುಮಾರಸ್ವಾಮಿ ದೂರು.. ಎಫ್ಐಆರ್ ದಾಖಲು..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರಕ್ಕೆ ಬಿಜೆಪಿ ಅದ್ಯಾವಾಗ ಮತ್ತೆ ಪ್ರಹ್ಲಾದ್ ಜೋಶಿ ಅವರಿಗೇನೆ ಟಿಕೆಟ್ ಕೊಟ್ಟಿತೇ ಅಂದಿನಿಂದಾನೇ ದಿಂಗಾಲೇಶ್ವರ ಸ್ವಾಮೀಜಿಗೆ ಬೇಸರ ಉಂಟಾಗಿತ್ತು. ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮನವಿ ಕೂಡ ಅಭ್ಯರ್ಥಿಯ ಬದಲಾವಣೆ

error: Content is protected !!