Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೇವೇಗೌಡ್ರನ್ನ ಸೋಲಿಸಿದ್ದು ನಾನೇ ಎನ್ನುವ ಕೆ.ಎನ್.ರಾಜಣ್ಣ ತುಮಕೂರು ಸೋಲಿನ ಬಗ್ಗೆ ಹೇಳಿದ್ದೇನು..?

---Advertisement---

ಹಾಸನ: ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರವೂ ಗಮನ ಸೆಳೆದಿತ್ತು. ವಿಧಾನಸಭಾ ಚುನಾವಣೆಯಲ್ಲಿ ಮೈಸೂರು, ಚಾಮರಾಜನಗರ ಜನತೆ ಸೋಲಿಸಿದ್ದ ವಿ.ಸೋಮಣ್ಷ ಅವರನ್ನು ತುಮಕೂರು ಜನತೆ ಕೈ ಹಿಡಿದಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಿ.ಸೋಮಣ್ಣ ಗೆದ್ದಿದ್ದಾರೆ. ಹಾಸನ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಸೋಲಿನ ಬಗ್ಗೆ ಮಾತನಾಡಿದ್ದಾರೆ. ನಾನು ಹಾಸನ ಜಿಲ್ಲಾ ಉಸ್ತುವಾರಿ. ಅಲ್ಲಿನ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ನನ್ನ ಮೇಲಿತ್ತು ಎಂದಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ತುಮಕೂರಿನಲ್ಲಿ ನನ್ನ ಪಾತ್ರ ಹೆಚ್ಚಿರಲಿಲ್ಲ. ನನಗರ ಹಾಸನದ ಚುನಾವಣೆಯ ಜವಾಬ್ದಾರಿಯನ್ನು ಕೊಟ್ಟಿದ್ದರು. ತುಮಕೂತಿಹೆ ನಾನು, ಪರಮೇಶ್ವರ್ ಮಂತ್ರಿಗಳಾಗಿದ್ದೇವೆ. ತುಮಕೂರು ಚುನಾವಣೆ ಬಗ್ಗೆ ನಾನು ಹೆಚ್ಚು ತಲೆ ಕೆಡಿಸಿಕೊಳ್ಳಲು ಹೋಗಲಿಲ್ಲ. ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲಿಲ್ಲ ಎಂದರೆ ಹಾಸನಕ್ಕೆ ಬರಲ್ಲ ಎಂದು ಹೇಳಿದ್ದೆ. ಗೆಲ್ಲಿಸಿಕೊಟ್ಟಿದ್ದಾರೆ ಎಂದಿದ್ದಾರೆ.

ಜಿಲ್ಲೆಯಲ್ಲಿ ಎಲ್ಲರು ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ, ಎಲ್ಲಾ ಪಕ್ಷ, ಜಾತಿಯವರು ಮತ ಹಾಕಿದ್ದಾರೆ. ಪುಟ್ಟಸ್ವಾಮಿಗೌಡರ ಹೆಸರಿನ ಆಧಾರದ ಮೇಲೆ ಹೆಚ್ಚಿನ ಬಹುಮತ ಬರಲು ಸಾಧ್ಯವಾಗಿದೆ. ಈ ಕ್ಷೇತ್ರದ ಜನರು ಗೆಲ್ಲಿಸಿದ್ದಾರೆ ಎಂದು ಅವರಿಗೆ ಅಭಿನಂದನೆ ಸಲ್ಲಿಸಬೇಕು. ನಾನೇ ಗೆಲ್ಲಿಸಿದ್ದೀನಿ ಅಂತಾ ಹೇಳಿದ್ರೆ, ಅದು ದುರಂಹಕಾರದ ಮಾತಾಗುತ್ತೆ. ಕಳೆದ ಚುನಾವಣೆಯಲ್ಲಿ ದೇವೇಗೌಡರನ್ನು ಸೋಲಿಸಿದ್ದು ನಾನೇ, ಅದರಲ್ಲಿ ಅನುಮಾನ ಏನು ಇಲ್ಲ. ನಮ್ಮ ಕ್ಷೇತ್ರದಲ್ಲಿ ಬಿಜೆಪಿ ಎರಡು ಸಾವಿರ ಓಟು ಇರಲಿಲ್ಲ, ನಾನು ಅವರಿಗೆ ಎಂಭತ್ತು ಸಾವಿರ ಓಟು ಕೊಡಿಸಿದ್ದೆ. ಅದಕ್ಕೆ ಅವರು ಸೋತರು. ದೇವೇಗೌಡರು ಸೋಲಲು ನಾನೇ ಕಾರಣ, ನಾನೇ ಸೋಲಿಸಿದ್ದು ಅದರಲ್ಲಿ ಅನುಮಾನ ಏನಿಲ್ಲ ಎಂದು ಮತ್ತೆ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment