Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟಿಕೆಟ್ ಫೈನಲ್ ಆಗಿದ್ದರು ಜೆಡಿಎಸ್ ಆಕಾಂಕ್ಷಿಗಳಿಗೆ ಕುಮಾರಸ್ವಾಮಿ ಹೇಳಿದ್ದೇನು..?

Facebook
Twitter
Telegram
WhatsApp

 

ತುಮಕೂರು: ಚುನಾವಣೆ ಹತ್ತಿರವಾಗುತ್ತಿದ್ದಂತೆ ಜೆಡಿಎಸ್ ಫುಲ್ ಆಕ್ಟೀವ್ ಆಗಿದೆ. ತನ್ನ ಪಂಚರತ್ನ ಯಾತ್ರೆಯ ಮೂಲಕ ಜಿಲ್ಲೆ ಜಿಲ್ಲೆಯಲ್ಲೂ ಸಂಚಾರ ನಡೆಸುತ್ತಿದೆ. ಇಂದು ಪಂಚರತ್ನ ಯಾತ್ರೆ ತುಮಕೂರು ಜಿಲ್ಲೆಗೆ ಸಾಗಿದ್ದು, ಜನರಿಗೆ ಹೊಸ ಭರವಸೆಯ ಜೊತೆಗೆ ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳಿಗೂ ಗುಡ್ ನ್ಯೂಸ್ ನೀಡಿದ್ದಾರೆ.

ತುಮಕೂರು ಜಿಲ್ಲೆಯ ಮಧುಗಿರಿಯ ದಂಡಿನ ಮಾರಮ್ಮ ದೇಗುಲದ ಬಳಿ ಮಾಜಿ ಸಿಎಂ ಕುಮಾರಸ್ವಾಮಿ, ಜನರನ್ನು ಉದ್ದೇಶಿಸಿ ಮಾತನಾಡಿದ್ದು, ಮಧುಗಿರಿ ತಾಲೂಕು ಅತ್ಯಂತ ಹಿಂದುಳಿದಿದೆ. ಉಪ ಚುನಾವಣೆಯಲ್ಲಿ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿಕೊಟ್ಟಿದ್ದೀರಿ. ನಿರೀಕ್ಷೆಗೆ ತಕ್ಕಂತೆ ನಾವೂ ಕೆಲಸ ಮಾಡಲು ಆಗಿಲ್ಲ. ಹೀಗಾಗಿ ಆ ಬಗ್ಗೆ ಕ್ಷಮೆ ಕೇಳುತ್ತೇನೆ. ಸದ್ಯ ತಾಲೂಕಿನಲ್ಲಿ ನಿರುದ್ಯೋಗ ಸಮಸ್ಯೆ ಇದೆ. ಅದಕ್ಕಾಗಿ ಕೈಗಾರಿಕೆಗಳನ್ನು ನಿರ್ಮಿಸುವಂತೆ ಶಾಸಕ ಎಂ ವೀರಭದ್ರಯ್ಯನವರಿಗೆ ಮನವಿ ಮಾಡಿದ್ದೇನೆ. ನನ್ನ ಸರ್ಕಾರ ಕೇವಲ 11 ತಿಂಗಳಷ್ಟೆ ಕೆಲಸ ಮಾಡಿದೆ.

ಅಂದು ನಾನು ತಾಲೂಕಿಗೆ ಕೊಟ್ಟ ಅನುದಾನ ಈಗಲೂ ಬಿಡುಗಡೆಯಾಗುತ್ತಿದೆ. ದೇವೇಗೌಡರವರ ಮೇಲೆ ನೀವೂ ಇಟ್ಟ ಅಭಿಮಾನ ಎಂದಿಗೂ ಮರೆಯಲಾರೆವು. ಈಗಾಗಲೇ ಜೆಡಿಎಸ್ ನಿಂದ ಟಿಕೆಟ್ ನೀಡಲಾದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆದರೆ ಅದೇ ಫೈನಲ್ ಅಲ್ಲ ಎನ್ನುವ ಮೂಲಕ ಆಕಾಂಕ್ಷಿಗಳಿಗೆ ನಮ್ಮ ಹೆಸರು ಬರಬಹುದೇನೋ ಎಂಬ ಸಂತಸ ಹೆಚ್ಚಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕಣ್ಣುಗಳ ಆರೋಗ್ಯಕ್ಕೆ ಹೀಗೆ ಮಾಡಿ…

ಸುದ್ದಿಒನ್ : ಕಣ್ಣಿನ ಉರಿಯು ಬೇಸಿಗೆಯಲ್ಲಿ ಯಾರನ್ನಾದರೂ ಬಾಧಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಸೂರ್ಯನ ಬಿಸಿಲು, ಧೂಳು ಮತ್ತು ವಾಯು ಮಾಲಿನ್ಯವು ಕಣ್ಣುಗಳ ಉರಿ, ಕಿರಿಕಿರಿ ಮತ್ತು ಕೆಂಪಗಾಗುವುದು ಆಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕಣ್ಣಿನ ಕಿರಿಕಿರಿಯನ್ನು

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ, ಈ ರಾಶಿಯ ಪ್ರೀತಿಸಿ ಮದುವೆ ಆದವರ ಗೋಳಾಟ ಕೇಳಲಾಗದು, ಮಂಗಳವಾರ ರಾಶಿ ಭವಿಷ್ಯ -ಏಪ್ರಿಲ್-23,2024 ಹನುಮಾನ ಜಯಂತಿ ಸೂರ್ಯೋದಯ: 05:58, ಸೂರ್ಯಾಸ್ತ :

ಬಿಜೆಪಿ ಪಕ್ಷದಿಂದ ಉಚ್ಛಾಟನೆಗೊಂಡ ಈಶ್ವರಪ್ಪ..!

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ ಎಸ್ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿದೆ. ತನ್ನ ಮಗನಿಗೆ ಸಿಗಲಿಲ್ಲ ಎಂಬ ಕಾರಣಕ್ಕೆ ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!