Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಮಾರ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ‌ ಮಧು‌ ಬಂಗಾರಪ್ಪ ಹೇಳಿದ್ದೇನು..?

Facebook
Twitter
Telegram
WhatsApp

 

 

ಬೆಂಗಳೂರು: ಹಲವು ದಿನಗಳಿಂದ ಬಿಜೆಪಿ‌ ಮತ್ತು ಜೆಡಿಎಸ್ ನಲ್ಲಿರುವವರು ಕೂಡ ಕಾಂಗ್ರೆಸ್ ಸೇರಲಿದ್ದಾರೆ ಎಂಬ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ನಿಂದ ಹೋದವರು‌ ಕೂಡ ಕಾಂಗ್ರೆಸ್ ಅನ್ನೇ ಸೇರುತ್ತಾರೆ ಎಂಬ ಮಾತಿದೆ. ಈ ಮಧ್ಯೆ ಜೆಡಿಎಸ್ ಬಿಟ್ಟು ಕುಮಾರ ಬಂಗಾರಪ್ಪ ಕಾಂಗ್ರೆಸ್ ಗೆ ಬರಲಿದ್ದಾರಾ ಎಂಬ ಚರ್ಚೆಯ ನಡುವೆ ಮಧು ಬಂಗಾರಪ್ಪ ಪರೋಕ್ಷವಾಗಿ ಉತ್ತರ ನೀಡಿದ್ದಾರೆ.

ಇಡೀ ರಾಜ್ಯದಲ್ಲಿ ಯಾರೇ ಕಾಂಗ್ರೆಸ್ ಗೆ ಬಂದರೂ ನನಗಂತೂ ಯಾವ ಅಭ್ಯಂತರವೂ ಇಲ್ಲ. ಸಿಎಂ ಮತ್ತು ಡಿಸಿಎಂ ನಿರ್ಧಾರ ಮಾಡ್ತಾರೆ ಯಾರೂ ಬರಬೇಕು ಎಂಬುದನ್ನು. ನಾನೊಬ್ಬ ಓಬಿಸಿ ಘಟಕದ ಅಧ್ಯಕ್ಷನಾಗಿ ಹೇಳ್ತೇನೆ. ಇಡೀ ರಾಜ್ಯದಲ್ಲಿ ಪಕ್ಷ ಬೆಳೆಯಬೇಕು. ಸೊರಬ ಸೇರಿದಂತೆ ರಾಜ್ಯದ ಯಾವ ಮೂಲೆಯಿಂದ ಪಕ್ಷಕ್ಕೆ ಬಂದರೂ ಅಭ್ಯಂತರವಿಲ್ಲ.

ನಿರ್ಧಾರದ ಕೀಲಿ ಕೈ ನನ್ನ ಬಳಿ ಇಲ್ಲ. ಅಧ್ಯಕ್ಷರ ಕೈನಲ್ಲಿ ಕೀಲಿ‌ಇದೆ. ಅವರ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ. ಬರುವವರೆಲ್ಲಾ‌ ಬರಲಿ. ಹಬ್ಬ ಮಾಡೋಣಾ. ಕೆಲಸ ಮಾಡೋಣಾ. ರಾಜ್ಯಕ್ಕೆ ಸೇವೆ ಸಲ್ಲಿಸೋಣಾ. ಎಲ್ಲವೂ ಚೆನ್ನಾಗಿ ಆಗಲಿ ಎಂದು ಹಾರೈಸಿದ್ದಾರೆ.

ಸದ್ಯ ಲೋಕಸಭಾ‌ ಚುನಾವಣೆಯೇ ಕಾಂಗ್ರೆಸ್ ನ ಟಾರ್ಗೆಟ್ ಆಗಿದೆ. ಈಗಾಗಲೇ ಸಾಕಷ್ಟು ತಯಾರಿಯನ್ನು ನಡೆಸಿರುವ ಕಾಂಗ್ರೆಸ್ ಜೊತೆಗೆ ವಿಪಕ್ಷಗಳ ಒಟ್ಟಾಗಿವೆ. ಈ ಬಾರಿ ಕಾಂಗ್ರೆಸ್ ಸೇರಿದಂತೆ ಎಲ್ಲಾ ವಿಪಕ್ಷಗಳಿಗೂ ಬಿಜೆಪಿಯೇ ಟಾರ್ಗೆಟ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!