ಕುಮಾರ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ‌ ಮಧು‌ ಬಂಗಾರಪ್ಪ ಹೇಳಿದ್ದೇನು..?

 

 

ಬೆಂಗಳೂರು: ಹಲವು ದಿನಗಳಿಂದ ಬಿಜೆಪಿ‌ ಮತ್ತು ಜೆಡಿಎಸ್ ನಲ್ಲಿರುವವರು ಕೂಡ ಕಾಂಗ್ರೆಸ್ ಸೇರಲಿದ್ದಾರೆ ಎಂಬ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ನಿಂದ ಹೋದವರು‌ ಕೂಡ ಕಾಂಗ್ರೆಸ್ ಅನ್ನೇ ಸೇರುತ್ತಾರೆ ಎಂಬ ಮಾತಿದೆ. ಈ ಮಧ್ಯೆ ಜೆಡಿಎಸ್ ಬಿಟ್ಟು ಕುಮಾರ ಬಂಗಾರಪ್ಪ ಕಾಂಗ್ರೆಸ್ ಗೆ ಬರಲಿದ್ದಾರಾ ಎಂಬ ಚರ್ಚೆಯ ನಡುವೆ ಮಧು ಬಂಗಾರಪ್ಪ ಪರೋಕ್ಷವಾಗಿ ಉತ್ತರ ನೀಡಿದ್ದಾರೆ.

ಇಡೀ ರಾಜ್ಯದಲ್ಲಿ ಯಾರೇ ಕಾಂಗ್ರೆಸ್ ಗೆ ಬಂದರೂ ನನಗಂತೂ ಯಾವ ಅಭ್ಯಂತರವೂ ಇಲ್ಲ. ಸಿಎಂ ಮತ್ತು ಡಿಸಿಎಂ ನಿರ್ಧಾರ ಮಾಡ್ತಾರೆ ಯಾರೂ ಬರಬೇಕು ಎಂಬುದನ್ನು. ನಾನೊಬ್ಬ ಓಬಿಸಿ ಘಟಕದ ಅಧ್ಯಕ್ಷನಾಗಿ ಹೇಳ್ತೇನೆ. ಇಡೀ ರಾಜ್ಯದಲ್ಲಿ ಪಕ್ಷ ಬೆಳೆಯಬೇಕು. ಸೊರಬ ಸೇರಿದಂತೆ ರಾಜ್ಯದ ಯಾವ ಮೂಲೆಯಿಂದ ಪಕ್ಷಕ್ಕೆ ಬಂದರೂ ಅಭ್ಯಂತರವಿಲ್ಲ.

ನಿರ್ಧಾರದ ಕೀಲಿ ಕೈ ನನ್ನ ಬಳಿ ಇಲ್ಲ. ಅಧ್ಯಕ್ಷರ ಕೈನಲ್ಲಿ ಕೀಲಿ‌ಇದೆ. ಅವರ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ. ಬರುವವರೆಲ್ಲಾ‌ ಬರಲಿ. ಹಬ್ಬ ಮಾಡೋಣಾ. ಕೆಲಸ ಮಾಡೋಣಾ. ರಾಜ್ಯಕ್ಕೆ ಸೇವೆ ಸಲ್ಲಿಸೋಣಾ. ಎಲ್ಲವೂ ಚೆನ್ನಾಗಿ ಆಗಲಿ ಎಂದು ಹಾರೈಸಿದ್ದಾರೆ.

ಸದ್ಯ ಲೋಕಸಭಾ‌ ಚುನಾವಣೆಯೇ ಕಾಂಗ್ರೆಸ್ ನ ಟಾರ್ಗೆಟ್ ಆಗಿದೆ. ಈಗಾಗಲೇ ಸಾಕಷ್ಟು ತಯಾರಿಯನ್ನು ನಡೆಸಿರುವ ಕಾಂಗ್ರೆಸ್ ಜೊತೆಗೆ ವಿಪಕ್ಷಗಳ ಒಟ್ಟಾಗಿವೆ. ಈ ಬಾರಿ ಕಾಂಗ್ರೆಸ್ ಸೇರಿದಂತೆ ಎಲ್ಲಾ ವಿಪಕ್ಷಗಳಿಗೂ ಬಿಜೆಪಿಯೇ ಟಾರ್ಗೆಟ್ ಆಗಿದೆ.

suddionenews

Recent Posts

ಮೈಸೂರಿನ ಘಟನೆ ಮಾಸುವ ಮುನ್ನವೇ ವಿಸಿ ನಾಲೆಗೆ ಹಾರಿದ ಒಂದೇ ಕುಟುಂಬದ ಮೂವರು..!

ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…

1 hour ago

ಮಾರ್ಚ್ 01 ರಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…

2 hours ago

ನರೇಗಾ : ಕರ್ತವ್ಯಕ್ಕೆ ಗೈರಾದ ತಾಂತ್ರಿಕ ಸಹಾಯಕರ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…

3 hours ago

ಕರ ವಸೂಲಾತಿಯಲ್ಲಿ ನಿರ್ಲಕ್ಷ್ಯ : ಮೂವರು ಪಿಡಿಒ ಗಳ ವಾರ್ಷಿಕ ವೇತನ ಬಡ್ತಿಗೆ ತಡೆ

ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…

3 hours ago

ಮೈಸೂರಲ್ಲಿ ವಿಜಯೇಂದ್ರ : ಭೇಟಿಗೆ ಓಡಿ ಬಂದ ಪ್ರತಾಪ್ ಸಿಂಹ : ಇವರ್ಯಾರ ಬಣ ಎಂಬುದೇ ದೊಡ್ಡ ಪ್ರಶ್ನೆ..!

    ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…

3 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 24 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…

3 hours ago