Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೋಡ ಬಿತ್ತನೆ, ಬರಗಾಲದ ಘೋಷಣೆ ಬಗ್ಗೆ ಸಚಿವ ಚೆಲುವರಾಯಸ್ವಾಮಿ ಹೇಳಿದ್ದೇನು..?

---Advertisement---

 

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಸಮಯಕ್ಕೆ ಸರಿಯಾಗಿ ಬಂದಿಲ್ಲ. ಹೀಗಾಗಿ ರೈತರು ಆತಂಕದಲ್ಲಿ ಇದ್ದರು. ಮಳೆ ಬರದಿದ್ದರೆ ಈ ಬಾರಿಯ ಬೆಳೆಯ ಕಥೆ ಏನು ಎಂದು ಆತಂಕದಲ್ಲಿದ್ದರು. ಇದೀಗ ಮಳೆ ಎಲ್ಲಾ ಕಡೆ ಒಂದು ಹಂತಕ್ಕೆ ಆಗಮನವಾಗಿದೆ.

ಮಳೆ ಇಲ್ಲದ ಹಿನ್ನೆಲೆ ಮೋಡ ಬಿತ್ತನೆ ಮಾಡಲಾಗುತ್ತದೆಯಾ ಎಂಬ ಪ್ರಶ್ನೆಯೂ ಎಲ್ಲರಲ್ಲೂ ಕಾಡಿತ್ತು. ಇದೀಗ ಆ‌ ಸಂಬಂಧ ಸಚುವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಮೋಡ ಬಿತ್ತನೆ ಬಗ್ಗೆ ರಾಜ್ಯ ಸರ್ಕಾರ ಅಂತಿಮ ಹೆಜ್ಜೆ ಇಡಲಿದೆ. ಕ್ಯಾಬಿನೆಟ್ ಸಬ್ ಕಮಿಟಿ ಈಗಾಗಲೇ ಒಂದು ಸಭೆ ಮಾಡಿದೆ.

ಮಳೆ ಬರದಿದ್ರೆ ಬರಗಾಲ ಎಂದು ಘೋಷಣೆ ಮಾಡಲಾಗುವುದು. ಬರಗಾಲ ಎಂದು ಘೋಷಣೆ ಮಾಡುವುದಕ್ಕೆ ಕೆಲವು ಮಾನದಂಡಗಳು ಇದೆ. ಅದನ್ನೆಲ್ಲಾ ಅನುಸರಿಸಿ ನಂತರ ಬರಗಾಲ ಎಂದು ಘೋಷಣೆ ಮಾಡಲಾಗುತ್ತದೆ. ಈ ತಿಂಗಳು ಒಳಗೆ ಉತ್ತಮ ಮಳೆ ಯಾಗುವ ಬಗ್ಗೆ ವರದಿ ಇದೆ. ಮಳೆಗಾಗಿ ಚಿಕ್ಕಮಗಳೂರಿನಲ್ಲಿ ಪೂಜೆ ಮಾಡಿ ಬಂದಿದ್ದೇವೆ ಎಂದು ಮಂಡ್ಯದಲ್ಲಿ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಹೇಳಿಕೆ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment