Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಶಿಕ್ಷಕರ ನೇಮಕಾತಿ ಬಗ್ಗೆ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು..?

---Advertisement---

ಬೆಂಗಳೂರು: ಎಲ್ಲೆಡೆ ಶಾಲೆಗಳು ಆರಂಭವಾಗಿದೆ. ಮಕ್ಕಳು ಶಾಲೆಗೆ ಹೋಗುವುದಕ್ಕೆ ಆರಂಭಿಸಿದ್ದಾರೆ. ಇದರ ಮಧ್ಯೆ ಪಠ್ಯ ಪುಸ್ತಕ, ಸಮವಸ್ತ್ರದ ವಿಚಾರವೂ ಮುಖ್ಯವಾಗಿದೆ. ಜೊತೆಗೆ ಸಾಕಷ್ಟು ಕಡೆ ಶಿಕ್ಷಕರ ಕೊರತೆಯೂ ಇದೆ. ಈ ಸಂಬಂಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

ಬೇರೆ ಸಮಸ್ಯೆಗಳಿಗೆ ಹಂತ ಹಂತವಾಗಿ ಪರಿಹಾರ ಕಂಡುಕೊಳ್ಳೋಣಾ. ಮೊದಲು ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಸಮವಸ್ತ್ರವನ್ನು ಮೊದಲು ನೀಡಿ ಎಂದು ಸೂಚನೆ ನೀಡಿದ್ದೇನೆ. ಶಿಕ್ಷಕರ ನೇಮಕಾತಿಯೂ ಅಷ್ಟೇ ಹಂತ ಹಂತವಾಗಿ ನಡೆಯುತ್ತೆ. ಮೊದಲು ವರ್ಗಾವಣೆ ಗೊಂದಲ ಇತ್ತು. 87 ಸಾವಿರ ಅರ್ಜಿದಾರರು ಶಿಕ್ಷಕರ ಹುದ್ದೆಯನ್ನು ಬಯಸುತ್ತಿದ್ದಾರೆ. 20-25 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಿದ್ದೇನೆ. ಅದರ ಪ್ರಕ್ರಿಯೆ ಶೀಘ್ರವೇ ಆರಂಭವಾಗುತ್ತದೆ.

ಪಠ್ಯ ಪುಸ್ತಕದ ವಿಚಾರ ಮಕ್ಕಳಿಗೆ ಏನು ಬೇಕು ಎಂಬುದನ್ನು ನೋಡಿಕೊಂಡು ಅದನ್ನು ನೀಡುತ್ತೇವೆ. ನಮ್ಮ ಪ್ರಣಾಳಿಕೆಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆಯಾಗುತ್ತೆ ಅಂತ ಹೇಳಿದ್ವಿ. ಈಗಾಗಲೇ ಪಠ್ಯ ಪುಸ್ತಕಗಳು ಶಾಲೆಗೆ ಹೋಗಿದೆ. ಅದನ್ನು ತಡೆಯಲು ಆಗಿಲ್ಲ. ಮಕ್ಕಳ ಭವಿಷ್ಯಕ್ಕೆ ಯಾವ ವಿಚಾರ ಬೇಕು ಎಂಬುದನ್ನು ನೋಡಿಕೊಂಡು, ತಜ್ಞರ ಜೊತೆ ಚರ್ಚೆ ಮಾಡಿ ನಿರ್ಧಾರಕ್ಕೆ ಬರಲಾಗುವುದು ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...