ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಕಾಂಗ್ರೆಸ್ ಸರ್ಕಾರ ಒದಗಿಸಿಕೊಟ್ಟಿದೆ. ಉಚಿತ ಬಸ್ ಸೇವೆ ಒದಗಿಸಿದ ಬಳಿಕ ಓಡಾಟದ ಜನಸಂಖ್ಯೆಯೂ ಜಾಸ್ತಿಯಾಗಿದೆ. ಜೊತೆಗೆ ನೂಕು ನುಗ್ಗಲಿನಿಂದಾಗಿ ಬಸ್ ಗಳಿಗೂ ಹಾನಿಯಾಗಿದೆ. ಗದಗ ಜಿಲ್ಲೆಯಲ್ಲಿ ಬಸ್ ಬಾಗಿಲು ಕಿತ್ತುಕೊಂಡು ಬಂದ ಘಟನೆ ಬಗ್ಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.
ಗುಜರಿಗೆ ಹೋಗಬೇಕಾದ ಬಸ್ ಗಳನ್ನು ಪ್ರಯಾಣಕ್ಕೆ ಬಳಸಲ್ಲ. ಆದಷ್ಟು ಬೇಗ ಬಸ್ ಗಳನ್ನು ಬದಲಾಯಿಸಲಾಗುತ್ತದೆ. ಸಾರಿಗೆ ಬಸ್ ಗಳ ಕಂಡೀಷನ್ ಸರಿ ಇಲ್ಲ. ಅದನ್ನೆಲ್ಲಾ ಬಿಜೆಪಿಯೇ ಸರಿ ಮಾಡಬೇಕಿತ್ತು. ಹದಗೆಟ್ಟ ಬಸ್ ಗಳನ್ನು ಪರಿಶೀಲನೆ ಮಾಡಲಾಗುತ್ತದೆ.
ಕಾಲ ಕಾಲಕ್ಕೆ ಸರಿಯಾಗಿ ಸಾರಿಗೆ ಇಲಾಖೆಯಲ್ಲಿ ಹೊಸ ಬಸ್ ಗಳನ್ನು ಬಿಡಬೇಕು. ಈ ಮೊದಲು ಬಿಜೆಪಿಯವರು ಈ ಕೆಲಸ ಮಾಡಬೇಕಿತ್ತು. ಆದರೆ ಅವರು ಮಾಡಿಲ್ಲ. ನಾಲ್ಕು ಸಾವಿರ ಹೊಸ ಬಸ್ ಗಳನ್ನು ಹೊಸದಾಗಿ ಬಿಡಲಾಗುವುದು. ಮೆಕ್ಯಾನಿಕಲ್ ಕೊರತೆಯಿಂದ ಬಸ್ ಗಳ ಪರಿಸ್ಥಿತಿ ಬದಲಾಯಿಸಲು ಆಗಿಲ್ಲ. ಇದೀಗ ಹೊಸ ನೇಮಕಾತಿ ಮಾಡುತ್ತೇವೆ. ಗದಗ ಜಿಲ್ಲೆಯ ಬಸ್ ಗಳ ಪರಿಸ್ಥಿತಿಯನ್ನು ಅವಲೋಕಿಸುತ್ತೇವೆ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…