Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೈಲಿನಿಂದ ಬಿಡುಗಡೆಯಾದ ಎಂಎಲ್ಸಿ ಸೂರಜ್ ರೇವಣ್ಣ ಹೇಳಿದ್ದೇನು..?

Facebook
Twitter
Telegram
WhatsApp

 

 

ಬೆಂಗಳೂರು: ಅಸಹಜ ಲೈಂಗಿಕ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಿಂದ ಸೂರಜ್ ರೇವಣ್ಣ ಹೊರ ಬರುತ್ತಿದ್ದಂತೆ ಅವರ ಬೆಂಬಲಿಗರು ಜೈಕಾರ ಹಾಕಿದ್ದಾರೆ. ಜೈಲಿನಿಂದ ಸದ್ಯ ಸೂರಜ್ ರೇವಣ್ಣ ಮನೆಗೆ ತಲುಪಿದ್ದಾರೆ.

ಅದಕ್ಕೂ ಮುನ್ನ ಮಾತನಾಡಿದ ಸೂರಜ್ ರೇವಣ್ಣ, ನಾನೇನು ತಪ್ಪು ಮಾಡಿಲ್ಲ. ತನಿಖಾಧಿಕಾರಿಗಳಿಗೆ ಸಹಕಾರ ಕೊಟ್ಟಿದ್ದೀವಿ. ಇದು ನಮ್ಮ‌ವಿರುದ್ಧ ಮಾಡಿರುವ ಷಡ್ಯಂತ್ರ. ದೂರು ಕೊಟ್ಟಿರುವ ಶಿವಕುನಾರ್ ನನ್ನ ಆಪ್ತನಲ್ಲ. ನಮಗೆ ಈ ರೀತಿಯ ಕಾರು ಚಾಲಕರು ಯಾರೂ ಇಲ್ಲ. ಎರಡ್ಮೂರು ದಿನವಾಗಲಿ, ಆಮೇಲೆ ಮಾತನಾಡುತ್ತೇನೆ. ಹಾಸನದಲ್ಲಿ ರಾಜಕೀಯವಾಗಿ ನಮ್ಮ ಮೇಲೆ ಪಿತೂರಿ ಮಾಡಿದ್ದಾರೆ. ಇದು ಪೀತೂರಿಯಿಂದಾದ ಕೆಲಸವಷ್ಟೇ ಎಂದಿದ್ದಾರೆ.

ನಮ್ಮ ಕುಟುಂಬದ ಮೇಲೆ ತೇಜೋವಧೆ ಮಾಡಿದ್ದಾರೆ. ಸತ್ಯವನ್ನು ಯಾರೂ ಕೂಡ ಜಾಸ್ತಿ ದಿನ ಮುಚ್ಚಿಡುವುದಕ್ಕೆ ಆಗುವುದಿಲ್ಲ. ತೇಜೋವಧೆ ಮಾಡುವ ಉದ್ದೇಶದಿಂದ ದೂರು ನೀಡಿ ಪ್ರಕರಣ ದಾಖಲಿಸಿದ್ದಾರೆ‌. ನಾವೂ ಯಾವುದಕ್ಕೂ ಹೆದರಿಕೊಂಡು, ಎಲ್ಲಿಯೂ ಓಡಿ ಹೋಗುವುದಿಲ್ಲ. ಎರಡು ಮೂರು ದಿನದಲ್ಲಿ ಎಲ್ಲದಕ್ಕೂ ಸ್ಪಷ್ಟನೆ ನೀಡುತ್ತೇನೆ. ತಪ್ಪು ಮಾಡಿಲ್ಲ ಎಂಬ ವಿಶ್ವಾಸ ನನಗಿದೆ. ಹಾಗೇ ಕಾನೂನು ನ್ಯಾಯಾಂಗದ ಮೇಲೆ ಸಂಪೂರ್ಣ ವಿಶ್ವಾಸವೂ ಇದೆ.

ಇದು ಕೇಸ್ ಅಲ್ಲ ಷಡ್ಯಂತ್ರ.. ಕುತಂತ್ರದ ಕೆಲಸ. ಇದರಿಂದ ಸಂಪೂರ್ಣವಾಗಿ ಹೊರಗೆ ಬರ್ತೀನಿ. ಹಾಸನದಲ್ಲಿ ರೇವಣ್ಣ ಅವರಿಗಾಗಲೀ ನಮಗೆ ಆಗಲಿ ಒಂದು ಕಪ್ಪು ಚುಕ್ಕೆಯೂ ಇಲ್ಲ. ರಾಜಕೀಯವಾಗಿ ಹಾಸನದಲ್ಲಿ ನಮ್ಮನ್ನು ಕುಗ್ಗಿಸುವ ತಂತ್ರ ಅಷ್ಟೇ ಇದು ಎಂದು ಸೂರಜ್ ರೇವಣ್ಣ ಜಾಮೀನು ಸಿಕ್ಕ ಬಳಿಕ ಹೊರಗೆ ಬಂದು ಮಾತನಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!