Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮೋತ್ಸವ ವಿಚಾರಕ್ಕೆ ಬಿಜೆಪಿಗೆ ಹೊಟ್ಟೆ ಉರಿ ; ನಳೀನ್ ಕುಮಾರ್ ಕಟೀಲ್ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ಸಿದ್ದರಾಮೋತ್ಸವಕ್ಕೆ ಬಿಜೆಪಿಗೆ ಹೊಟ್ಟೆ ಉರಿ ಎಂಬ ವಿಚಾರವಾಗಿ ಬಿಜೆಪಿ ಕಚೇರಿಯಲ್ಲಿ ಮಾತನಾಡಿರುವ, ನಳೀನ್ ಕುಮಾರ್ ಕಟೀಲ್, ನನಗೆ ಬಹಳ ಖುಷಿಯಾಗುತ್ತಿದೆ. ಸಿದ್ದರಾಮಣ್ಣ ನಾಲ್ಕೈದು ಲಕ್ಷ ಜನ ಸೇರಿಸಬೇಕು. ನಾವು ಅವರಿಗೆ ಸಹಕಾರ ನೀಡುತ್ತೇವೆ ಎಂದಿದ್ದಾರೆ.

ನಮಗೇನು ಅದರಿಂದ ಹೊಟ್ಟೆಕಿಚ್ಚು ಇಲ್ಲ. ಸಿದ್ದರಾಮೋತ್ಸವ ಮಾಡ್ತಿರೋದು ಬಿಜೆಪಿ ವಿರುದ್ದ ಅಲ್ಲ. ಅದು ಡಿ.ಕೆ.ಶಿವಕುಮಾರ್ ವಿರುದ್ಧ, ಪಕ್ಷದಲ್ಲಿ ತನ್ನ ಅಸ್ತಿತ್ವ ವನ್ನು ಉಳಿಸಿಕೊಳ್ಳೋಕೆ. ಹೈಕಮಾಂಡ್ ಗೆ ತನ್ನ ಶಕ್ತಿ ತೋರಿಸಬೇಕು. ಮುಂದಿನ ಮುಖ್ಯಮಂತ್ರಿ ನಾನೇ ಅನ್ನೋದು. ಕಾಂಗ್ರೆಸ್ ಹೈಕಮಾಂಡ್ ಗೆ ಒತ್ತಡ ಹಾಕುವ ಪ್ರಯತ್ನವದು.

ಡಿ.ಕೆ.ಶಿವಕುಮಾರ್ ಮುಗಿಸುವ ಎರಡನೇ ಪ್ರಯತ್ನ ಇದು ಸಿದ್ದರಾಮಣ್ಣನ ತಂತ್ರಗಾರಿಕೆ. ಸಿದ್ದರಾಮಣ್ಣನವ್ರು ಮುಗಿಸಿಕೊಂಡೆ ಬಂದವ್ರು. ದೇವೇಗೌಡರನ್ನ ಮುಗಿಸಿದ್ರು,ಜನತಾ ದಳವನ್ನ ಮುಗಿಸಿದ್ರು. ಇಲ್ಲಿ ನಿಜವಾದ ಕಾಂಗ್ರೆಸ್ ನವ್ರನ್ನ ಹೊರಗಿಟ್ರು. ದಲಿತ ಸಿಎಂ ಅಭ್ಯರ್ಥಿ ಖರ್ಗೆ ಹೊರಹಾಕಿದ್ರು. ಮತ್ತೊಬ್ಬ ದಲಿತ ಪರಮೇಶ್ವರ್ ಸೋಲಿಸಿದ್ರು. ಈಗ ಡಿಕೆಶಿ ಮುಗಿಸುವ ತಂತ್ರಗಾರಿಕೆ ನಡಿತಿದೆ. ಇದರಿಂದ ನಮಗೆನೂ ಭಯ ಇಲ್ಲ. ಡಿ ಕೆ ಶಿವಕುಮಾರ್ ಗೆ ಭಯ ಅಷ್ಟೇ. ಡಿ.ಕೆ.ಶಿವಕುಮಾರ್ ನಿದ್ದೆಗೆಡಿಸುತ್ತದೆ. ಕಾಂಗ್ರೆಸಿಗರನ್ನ ನಿದ್ದೆಗೆಡಿಸುತ್ತದೆ. ನಾವು ಇನ್ನಷ್ಟು ಬೆಂಬಲ ಕೊಡ್ತೇವೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

ರಾತ್ರಿ ಮಲಗುವ ಮುನ್ನ ಈ ಚಿಕ್ಕ ಕೆಲಸ ಮಾಡಿದರೆ, ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗ ಗೊತ್ತಾ ?

ಸುದ್ದಿಒನ್ : ಯಾಂತ್ರಿಕ ಓಟದ ಬದುಕಿನಲ್ಲಿ ಹಲವು ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಹೀಗಾಗಿ ಆರೋಗ್ಯವಂತರಾಗಿರಲು ಈಗಿನಿಂದಲೇ ಹೆಜ್ಜೆ ಇಡಬೇಕು. ಮತ್ತು ಹೆಚ್ಚು ಗಮನ ಕೊಡಬೇಕು. ಜೀವನಶೈಲಿ, ಆಹಾರ ಪದ್ಧತಿ ಬದಲಿಸಿಕೊಳ್ಳಿ ಎಂದು ವೈದ್ಯಕೀಯ ತಜ್ಞರು

error: Content is protected !!