Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದರ್ಶನ್ ಭೇಟಿಯಾದ ರಕ್ಷಿತಾ-ಪ್ರೇಮ್ ಹೇಳಿದ್ದೇನು..?

Facebook
Twitter
Telegram
WhatsApp

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅಂಡ್ ಗ್ಯಾಂಗ್ ಜೈಲುಪಾಲಾಗಿದ್ದಾರೆ. ಈ ಪ್ರಕರಣ ಸಂಬಂಧ ಆರಂಭದಲ್ಲಿ ಇಂಡಸ್ಟ್ರಿಯವರು ಯಾರೂ ಕೂಡ ಮಾತನಾಡುತ್ತಿರಲಿಲ್ಲ. ಈಗ ಒಬ್ಬೊಬ್ಬರೇ ಮಾತನಾಡುವುದಕ್ಕೆ ಶುರು ಮಾಡಿದ್ದಾರೆ. ದರ್ಶನ್ ಪರ ಮಾತನಾಡುವುದು, ದರ್ಶನ್ ಪರ ಧ್ವನಿ ಎತ್ತುವುದನ್ನು ಮಾಡುತ್ತಿದ್ದಾರೆ. ಆ ಸಾಲಿಗೆ ನಟಿ ರಕ್ಷಿತಾ, ನಿರ್ದೇಶಕ ಪ್ರೇಮ್ ಕೂಡ ಸೇರಿದ್ದಾರೆ.

ನಟಿ ರಕ್ಷಿತಾ ಹಾಗೂ ದರ್ಶನ್ ಜೋಡಿಯಲ್ಲಿ ಬಂದ ಸಿನಿಮಾಗಳು ಸೂಪರ್ ಡೂಪರ್ ಹಿಟ್ ಆಗಿದ್ದವು. ಇಬ್ಬರ ನಡುವೆ ಒಳ್ಳೆಯ ಫ್ರೆಂಡ್ಶಿಪ್ ಕೂಡ ಇದೆ. ಪ್ರೇಮ್ ಜೊತೆಗೂ ದರ್ಶನ್ ಒಡನಾಟ ಇಟ್ಟುಕೊಂಡಿದ್ದಾರೆ. ಮುಂದೆ ಸಿನಿಮಾ ಮಾಡುವುದಾಗಿಯೂ ಘೋಷಣೆ ಮಾಡಿಕೊಂಡಿದ್ದರು. ಸದ್ಯಕ್ಕೆ ನಿರ್ದೇಶಕ ಪ್ರೇಮ್ ಕೆಡಿ ಸಿನಿಮಾವನ್ನು ಮಾಡುತ್ತಿದ್ದಾರೆ. ಕೆಡಿ ಸಿನಿಮಾದ ಸೆಟ್ ಗೂ ದರ್ಶನ್ ಒಮ್ಮೆ ಭೇಟಿ ನೀಡಿದ್ದರು. ಇದೀಗ ದರ್ಶನ್ ಕೊಲೆ ಕೇಸಿನಲ್ಲಿ ಜೈಲಿನಲ್ಲಿರುವಾಗ ಪ್ರೇಮ್ ಹಾಗೂ ರಕ್ಷಿತಾ ಜೈಲಿಗೆ ಭೇಟಿ ನೀಡಿ ಬಂದಿದ್ದಾರೆ.

 

ದರ್ಶನ್ ಭೇಟಿ ಬಳಿಕ ಮಾತನಾಡಿದ ನಟಿ ರಕ್ಷಿತಾ, ಹದಿನೈದು ಇಪ್ಪತ್ತು ದಿನದಿಂದ ಆಗಿರುವುದು ದುರದೃಷ್ಟಕರ. ನಮಗೆ ಈ ಪ್ರಕರಣದ ಬಗ್ಗೆ ಬೇಜಾರು ಇದೆ ಎಂದರು. ಬಳಿಕ ಮಾತನಾಡಿದ ಪ್ರೇಮ್, ಪ್ರಕರಣ ನ್ಯಾಯಾಲಯದಲ್ಲಿದೆ. ಈ ಸಮಯದಲ್ಲಿ ನಾವೂ ಮಾತನಾಡುವುದು ಸರಿಯಲ್ಲ. ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ ಕಾನೂನಿಗಿಂತ ದೊಡ್ಡವರು ಯಾರು ಇಲ್ಲ ಎಂದರು.

ಇನ್ನು ಕೊಲೆಯಾದ ರೇಣುಕಾಸ್ವಾಮಿ ಮದುವೆಯಾಗಿ ಇತ್ತಿಚೆಗಷ್ಟೇ ವರ್ಷ ತುಂಬಿದೆ. ಅಶ್ಲೀಲ ಮೆಸೇಜುಗಳ ಗೀಳಿಗೆ ಬೀಳದೆ ಇದ್ದಿದ್ದರೆ ರೇಣುಕಾಸ್ವಾಮಿ ತನ್ನ ಮುದ್ದಾದ ಹೆಂಡತಿಯೊಂದಿಗೆ ಇಂದು ಸುಖ ಸಂಸಾರ ಮಾಡುತ್ತಿದ್ದ. ಮುಂದೆ ಹುಟ್ಟುವ ಮಗುವಿನ ಮುಖವನ್ನು ನೋಡದಂತೆ ಆಗಿ ಹೋಯ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜುಲೈ 15ರಿಂದ ಆರಂಭವಾಗಲಿದೆ ಮುಂಗಾರು ಅಧಿವೇಶನ : ವಿಪಕ್ಷಗಳ ಫ್ಲ್ಯಾನ್ ಏನು..?

ಬೆಂಗಳೂರು: ಹತ್ತು ದಿನಗಳ ಕಾಲ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಜುಲೈ 15 ರಿಂದ ಜುಲೈ 26ರ ತನಕ ಮುಂಗಾರು ಅಧಿವೇಶನ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರು ಅಧಿವೇಶನದ ದಿನಾಂಕವನ್ನು ಫೈನಲ್ ಮಾಡಿದ್ದಾರೆ. ಈ

ಭದ್ರಾ ಮೇಲ್ದಂಡೆ, ನೇರ ರೈಲ್ವೆ ಯೋಜನೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಚಿವ ಡಿ.ಸುಧಾಕರ್ ಸೂಚನೆ

  ಚಿತ್ರದುರ್ಗ. ಜುಲೈ.01:   ಭದ್ರಾ ಮೇಲ್ದಂಡೆ ಯೋಜನೆ ಹಾಗೂ ದಾವಣಗೆರೆ-ತುಮಕೂರು ನೇರ ರೈಲ್ವೆ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ

ವೈದ್ಯರು ನಿಷ್ಠೆ, ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಿ : ಡಾ. ಬಸವಕುಮಾರ ಸ್ವಾಮೀಜಿ

ಸುದ್ದಿಒನ್, ಚಿತ್ರದುರ್ಗ, ಜು.01 : ವೈದ್ಯಕೀಯ ಪದವಿಯನ್ನು ಪೂರೈಸಲು ಜೀವನದ ಅರ್ಧ ಹಾದಿಯನ್ನು ಸವೆಸಬೇಕಾಗುತ್ತದೆ. ಹಾಗಾಗಿ ವೈದ್ಯರು ನಿಷ್ಠೆ, ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಡಾ. ಬಸವಕುಮಾರ ಸ್ವಾಮಿಗಳು ಹೇಳಿದರು. ನಗರದ ಬಸವೇಶ್ವರ

error: Content is protected !!