Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತಿರುಪತಿಗೆ ನಂದಿನಿ ತುಪ್ಪ ನಿಲ್ಲಿಸಿದ್ದಕ್ಕೆ ಶಿವಣ್ಣ ಹೇಳಿದ್ದೇನು..?

---Advertisement---

ಬೆಂಗಳೂರು: ಮೊದಲಿಗೆ ಅಣ್ಣಾವ್ರು, ನಂತರ ಅಪ್ಪು ಕೆಎಂಎಫ್ ನ ರಾಯಭಾರಿಯಾಗಿದ್ದರು. ಅದು ಒಂದು ಪೈಸೆಯನ್ನು ತೆಗೆದುಕೊಳ್ಳದೆ. ಈಗ ಶಿವಣ್ಣ ಕೆಎಂಎಫ್ ನ ರಾಯಭಾರಿಯಾಗಿದ್ದಾರೆ. ಶಿವಣ್ಣ ಕೂಡ ಹಣವನ್ನು ನಿರೀಕ್ಷೆ ಮಾಡಿಲ್ಲ. ಇಂದಿನಿಂದ ರಾಯಭಾರಿಯಾದ ಶಿವಣ್ಣ ತಿರುಪತಿಯ ಲಡ್ಡು ಪ್ರಸಾದಕ್ಕೆ ತುಪ್ಪ ಕಳುಹಿಸುವ ಟೆಂಡರ್ ನಿಲ್ಲಿಸಿದ್ದರ ಬಗ್ಗೆ ಮಾತನಾಡಿದ್ದಾರೆ.

ನಂದಿನಿ ಎಂಬ ಹೆಮ್ಮೆಯನ್ನು ಬೆಳೆಸಬೇಕು. ನಂದಿನಿ ಭಾರತದ ಹೆಮ್ಮೆ. ಅದನ್ನು ಉಳಿಸಿಕೊಳ್ಳಬೇಕು. ನಾನು ರಾಯಭಾರಿಯಾಗಿದ್ದು ತುಂಬಾ ಖುಷಿ ಇದೆ. ಯಾಕಂದ್ರೆ ಇದು ರೈತರಿಗೆ ಸಂಬಂಧಿಸಿದ ವಿಚಾರ. ಸದ್ಯದಲ್ಲಿಯೇ ನಂದಿನಿ ಪ್ರಾಡಕ್ಟ್ ನ ಜಾಹೀರಾತು ಶೂಟ್ ಆಗುತ್ತೆ.

ಇನ್ನು ತಿರುಪತಿಯಲ್ಲಿ ನಂದಿನಿ ತುಪ್ಪ ಪೂರೈಕೆ ನಿಲ್ಲಿಸಿದ ಬಗ್ಗೆ ಪ್ರತಿಕ್ರಿಯಿಸಿದ ಶಿವಣ್ಣ, ನಂದಿನಿ ಬೇಡಿಕೆ ಯಾವತ್ತೂ ಕಡಿಮೆ ಆಗಲ್ಲ. ನಾವು ಪ್ರತಿ ದಿನ ನಂದಿನಿ ಪ್ರಾಡಕ್ಟ್ ಅನ್ನೇ ಬಳಸುತ್ತೇವೆ. ಇದು ನಮ್ಮ ಸರ್ಕಾರದ್ದು, ನಮ್ಮ ಪ್ರಾಡಕ್ಟ್. ನಮ್ಮ ರೈತರಿಗೋಸ್ಕರ ಯಾವಾಗಲೂ ಜೊತೆಯಲ್ಲಿರುತ್ತೇನೆ. ಇದು ನಮ್ಮ ತ್ಯಾಗ ಅಲ್ಲ ನಮ್ಮ ಕರ್ತವ್ಯ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...