Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶೂ ಹಾಕಿದ, ಹಾಕದೆ ಇರುವ ವಿದ್ಯಾರ್ಥಿ ಫೋಟೋ ಹಾಕಿ ಸಿದ್ದರಾಮಯ್ಯ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ವಿಧ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ಹಂಚಿಕೆ ವಿಚಾರದಲ್ಲಿ ಆಡಳಿತ ಮತ್ತು ವಿಪಕ್ಷ ನಾಯಕರ ನಡುವೆ ಟ್ವೀಟ್ ವಾರ್ ಮುಂದುವರೆದಿದೆ. ಶಾಲೆಯಲ್ಲಿ ಶೂ ಹಾಕಿರುವ ಒಬ್ಬ ವಿಧ್ಯಾರ್ಥಿ ಹಾಗೂ ಶೂ ಹಾಕದೇ ಇರೋ ಮತ್ತೊಬ್ಬ ವಿಧ್ಯಾರ್ಥಿನಿಯ ಫೋಟೋ ಹಾಕಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಶಿಕ್ಷಣ ಇಲಾಖೆಯ ಸಚಿವರಿಗೆ ಜನರ ಅಗತ್ಯಗಳ ಬಗ್ಗೆ ಕಾಳಜಿ ಇಲ್ಲ. ವಿಧ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಧರಿಸುವ ಬಗ್ಗೆ ಸಚಿವರು ತಾತ್ಸರದಿಂದ ಮಾತನಾಡ್ತಾರೆ. ಕಾಂಗ್ರೆಸ್, ರಾಜ್ಯ ಸರ್ಕಾರಕ್ಕೆ ಸತ್ಯಾಂಶ ಮನವರಿಕೆ ಮಾಡಿಕೊಟ್ಟಿದೆ. ರಾಜ್ಯದ ಒಳಿತಿಗಾಗಿ ಸಿಎಂ ರಾಜೀನಾಮೆ ಕೊಡುವುದು ಒಳಿತು ಎಂದಿದ್ದಾರೆ.

ಈ ಸಂಬಂಧ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡಿದ್ದು, ಸರ್ಕಾರಕ್ಕೆ ಸತ್ಯಾಂಶ ಮನವರಿಕೆ ಮಾಡಿಕೊಡುವ ಕೆಲಸ ಕಾಂಗ್ರೆಸ್ ಮಾಡಿದೆ. ಕೊನೆಗೆ ಸಿಎಂ ಬಸವರಾಜ ಬೊಮ್ಮಾಯಿ‌ ನಿದ್ರೆಯಿಂದ ಎದ್ದಿದ್ದಾರೆಂದು, ಟ್ವೀಟ್ ಮಾಡಿ ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಶೂ,ಸಾಕ್ಸ್ ಬಗ್ಗೆ ಸಚಿವರ ಹೇಳಿಕೆ ವಿಚಾರದಲ್ಲಿ ಪ್ರತಿಕ್ರಿಯಿಸಿ, ಸಾಕ್ಸ್ , ಶೂ ಕೊಡ್ತಿದ್ದವರು ನಾವು. ಬಡಮಕ್ಕಳಿಗೆ ಅನುಕೂಲ ಆಗಲಿ ಅಂತ ಕೊಡ್ತಿದ್ದೆವು. ಸಮಾನಮನೋಭಾವ ಇರಲಿ ಎಂದು ಕೊಡ್ತಿದ್ವಿ. ಇವರು ನಿಲ್ಲಿಸೋಕೆ ಹೊರಟ್ರು. ನಾವು ಒತ್ತಾಯ ಮಾಡಿದ ಮೇಲೆ ಕೊಡ್ತೇವೆ ಅಂದ್ರು. ಶಾಲೆಗಳು ಶುರುವಾಗಿವೆ. ಶೂ,ಯೂನಿಫಾರಂ ಕೊಡಬೇಕಿತ್ತು. ಆದರೆ ಇನ್ನೂ ಯಾವುದನ್ನೂ ಕೊಟ್ಟಿಲ್ಲ. ಇಮಿಡಿಯಟ್ಲಿ ಕೊಡಬೇಕು. ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಅಮರನಾಥ್ ಯಾತ್ರೆ ಅವಘಡ ವಿಚಾರವಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದ್ದು, ಕೂಡಲೇ ಅವರನ್ನ ರಕ್ಷಣೆ ಮಾಡಬೇಕು. ಸಿಲುಕಿದವರನ್ನ ಸುರಕ್ಷಿತವಾಗಿ ಕರೆತರಬೇಕು. ರಾಜ್ಯದಲ್ಲೂ ಮಳೆಯಿಂದ ಹಾನಿ‌ ವಿಚಾರದಲ್ಲಿ, ಉಸ್ತುವಾರಿಗಳು ಜಿಲ್ಲೆಗೆ ಹೋಗ್ತಿಲ್ಲ. ಜನರ ಕಷ್ಟ ಸುಖಗಳನ್ನ ಕೇಳಬೇಕಲ್ಲ. ಇಲ್ಲಿ ಬರಿ ಮೀಟಿಂಗ್ ಮಾಡಿದ್ರೆ ಸಾಕಾ?. ಚೀಫ್ ಮಿನಿಸ್ಟರ್ ವಿಸಿಟ್ ಮಾಡಬೇಕು. ನರೇಂದ್ರ ಮೋದಿ ಪರಿಹಾರ ಕೊಟ್ಟಿದ್ದಾರೇನ್ರೀ.‌ಸಾವಿರಾರು ಕೋಟಿ ಕೊಟ್ಟಿದ್ದೇವೆ ಅಂತಾರಲ್ಲ ಎಂದು ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ.

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ. ಗುರುವಾರ- ರಾಶಿ ಭವಿಷ್ಯ ಮೇ-9,2024 ಸೂರ್ಯೋದಯ: 05:50, ಸೂರ್ಯಾಸ್ತ : 06:35 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

error: Content is protected !!