Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸೋಲಿನ ಬಳಿಕ ಚಿಕ್ಕಬಳ್ಳಾಪುರದ ಜನತೆಗೆ ಸುಧಾಕರ್ ಹೇಳಿದ್ದೇನು..?

---Advertisement---

ಚಿಕ್ಕಬಳ್ಳಾಪುರ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಘಟಾನುಘಟಿ ಬಿಜೆಪಿ ನಾಯಕರೇ ತಲೆ ಕೆಳಗಾಗಿದ್ದಾರೆ. ಹೀನಾಯವಾಗಿ ಸೋಲನ್ನು ಕಂಡಿದ್ದಾರೆ. ಅದರಲ್ಲೂ ಕೆ ಸುಧಾಕರ್ ಸೋತಿದ್ದು ಎಲ್ಲರಿಗೂ ಅತ್ಯಾಶ್ಚರ್ಯವಾಗಿದೆ. ಪ್ರದೀಪ್ ಈಶ್ವರ್, ಸುಧಾಕರ್ ಎದುರು ಗೆಲುವು ಕಂಡಿದ್ದಾರೆ. ಸೋಲಿನ ಬಳಿಕ ಚಿಕ್ಕಬಳ್ಳಾಪುರದ ಜನತೆಗೆ ಸುಧಾಕರ್ ಪತ್ರ ಬರೆದಿದ್ದಾರೆ.

“ಕಳೆದ 10 ವರ್ಷಗಳಿಂದ ಚಿಕ್ಕಬಳ್ಳಾಪುರದ ಜನಪ್ರತಿನಿಧಿಯಾಗಿ, ನಿಮ್ಮೆಲ್ಲರ ಮಗನಾಗಿ, ಸಹೋದರನಾಗಿ ನಿಮ್ಮೆಲ್ಲರ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ.ಚಿಕ್ಕಬಳ್ಳಾಪುರದ ಅಭಿವೃದ್ಧಿಗಾಗಿ ನಾನು ಪಟ್ಟ ಶ್ರಮದ ಬಗ್ಗೆ, ನನ್ನ ಬದ್ಧತೆ, ಕೆಲಸದ ಬಗ್ಗೆ ನನಗೆ ಸಂಪೂರ್ಣ ತೃಪ್ತಿಯಿದೆ. ಆದರೂ ಎಲ್ಲೋ ಒಂದು ಕಡೆ ನಿಮ್ಮ ನಿರೀಕ್ಷೆಯನ್ನು ತಲುಪಲು ನನ್ನಿಂದ ಸಾಧ್ಯವಾಗಿಲ್ಲ ಎನಿಸುತ್ತದೆ. ಪ್ರಜಾಪ್ರಭುತ್ವದಲ್ಲಿ ಮತದಾರರೇ ಪ್ರಭುಗಳು. ನಿಮ್ಮ ತೀರ್ಪನ್ನು ತಲೆಬಾಗಿ ಸ್ವೀಕರಿಸುತ್ತೇನೆ.

ಕೋವಿಡ್ ಕಾಲದಿಂದ ಆರಂಭವಾಗಿ ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಸಚಿವನಾಗಿ ಜವಬ್ದಾರಿವಹಿಸಿಕೊಂಡ ನಂತರ 3-4 ವರ್ಷ ನನ್ನ ಕುಟುಂಬಕ್ಕೆ ಸಮಯ ನೀಡಲು ಸಾಧ್ಯವಾಗಿರಲಿಲ್ಲ. ಇನ್ನು ಸ್ವಲ್ಪ ಸಮಯ ಹೆಂಡತಿ, ಮಕ್ಕಳಿಗೆ ಸಮಯ ನೀಡಿ, ಬಳಿಕ ಎಂದಿನಂತೆ ಚಿಕ್ಕಬಳ್ಳಾಪುರ ಕ್ಷೇತ್ರದ ಜನರ ಸೇವೆಗೆ ಮರಳುತ್ತೇನೆ. ಈ ಬಾರಿ ನೀವೂ ಆಯ್ಕೆ ಮಾಡಿದ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ನಾನು ಅಭಿನಂದನೆ ತಿಳಿಸುತ್ತೇನೆ. ಚಿಕ್ಕಬಳ್ಳಾಪುರದ ಅಭಿವೃದ್ಧಿಯನ್ನು ಹಳಿ ತಪ್ಪಿಸದೆ ಇನ್ನಷ್ಟು ಮುಂದೆ ಕೊಂಡೊಯ್ಯಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...