Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೋಲಿನ ಬಳಿಕ ಚಿಕ್ಕಬಳ್ಳಾಪುರದ ಜನತೆಗೆ ಸುಧಾಕರ್ ಹೇಳಿದ್ದೇನು..?

Facebook
Twitter
Telegram
WhatsApp

ಚಿಕ್ಕಬಳ್ಳಾಪುರ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಘಟಾನುಘಟಿ ಬಿಜೆಪಿ ನಾಯಕರೇ ತಲೆ ಕೆಳಗಾಗಿದ್ದಾರೆ. ಹೀನಾಯವಾಗಿ ಸೋಲನ್ನು ಕಂಡಿದ್ದಾರೆ. ಅದರಲ್ಲೂ ಕೆ ಸುಧಾಕರ್ ಸೋತಿದ್ದು ಎಲ್ಲರಿಗೂ ಅತ್ಯಾಶ್ಚರ್ಯವಾಗಿದೆ. ಪ್ರದೀಪ್ ಈಶ್ವರ್, ಸುಧಾಕರ್ ಎದುರು ಗೆಲುವು ಕಂಡಿದ್ದಾರೆ. ಸೋಲಿನ ಬಳಿಕ ಚಿಕ್ಕಬಳ್ಳಾಪುರದ ಜನತೆಗೆ ಸುಧಾಕರ್ ಪತ್ರ ಬರೆದಿದ್ದಾರೆ.

“ಕಳೆದ 10 ವರ್ಷಗಳಿಂದ ಚಿಕ್ಕಬಳ್ಳಾಪುರದ ಜನಪ್ರತಿನಿಧಿಯಾಗಿ, ನಿಮ್ಮೆಲ್ಲರ ಮಗನಾಗಿ, ಸಹೋದರನಾಗಿ ನಿಮ್ಮೆಲ್ಲರ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ.ಚಿಕ್ಕಬಳ್ಳಾಪುರದ ಅಭಿವೃದ್ಧಿಗಾಗಿ ನಾನು ಪಟ್ಟ ಶ್ರಮದ ಬಗ್ಗೆ, ನನ್ನ ಬದ್ಧತೆ, ಕೆಲಸದ ಬಗ್ಗೆ ನನಗೆ ಸಂಪೂರ್ಣ ತೃಪ್ತಿಯಿದೆ. ಆದರೂ ಎಲ್ಲೋ ಒಂದು ಕಡೆ ನಿಮ್ಮ ನಿರೀಕ್ಷೆಯನ್ನು ತಲುಪಲು ನನ್ನಿಂದ ಸಾಧ್ಯವಾಗಿಲ್ಲ ಎನಿಸುತ್ತದೆ. ಪ್ರಜಾಪ್ರಭುತ್ವದಲ್ಲಿ ಮತದಾರರೇ ಪ್ರಭುಗಳು. ನಿಮ್ಮ ತೀರ್ಪನ್ನು ತಲೆಬಾಗಿ ಸ್ವೀಕರಿಸುತ್ತೇನೆ.

ಕೋವಿಡ್ ಕಾಲದಿಂದ ಆರಂಭವಾಗಿ ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಸಚಿವನಾಗಿ ಜವಬ್ದಾರಿವಹಿಸಿಕೊಂಡ ನಂತರ 3-4 ವರ್ಷ ನನ್ನ ಕುಟುಂಬಕ್ಕೆ ಸಮಯ ನೀಡಲು ಸಾಧ್ಯವಾಗಿರಲಿಲ್ಲ. ಇನ್ನು ಸ್ವಲ್ಪ ಸಮಯ ಹೆಂಡತಿ, ಮಕ್ಕಳಿಗೆ ಸಮಯ ನೀಡಿ, ಬಳಿಕ ಎಂದಿನಂತೆ ಚಿಕ್ಕಬಳ್ಳಾಪುರ ಕ್ಷೇತ್ರದ ಜನರ ಸೇವೆಗೆ ಮರಳುತ್ತೇನೆ. ಈ ಬಾರಿ ನೀವೂ ಆಯ್ಕೆ ಮಾಡಿದ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ನಾನು ಅಭಿನಂದನೆ ತಿಳಿಸುತ್ತೇನೆ. ಚಿಕ್ಕಬಳ್ಳಾಪುರದ ಅಭಿವೃದ್ಧಿಯನ್ನು ಹಳಿ ತಪ್ಪಿಸದೆ ಇನ್ನಷ್ಟು ಮುಂದೆ ಕೊಂಡೊಯ್ಯಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!