Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಬಸ್ ದುರಂತದ ಬಗ್ಗೆ ಸಿಎಂ – ಡಿಸಿಎಂ ಏನಂದ್ರು..?

---Advertisement---

 

ಬೆಂಗಳೂರು: ಚಿತ್ರದುರ್ಗದ ಹಿರಿಯೂರು ಬಳಿ ಸಂಭವಿಸಿದ ಬಸ್ ದುರಂತದಕ್ಕೆ 9 ಜನ ಸಜೀವ ದಹನವಾಗಿದ್ದಾರೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಯಾಣಿಜರ ಸಜೀವ ದಹನ ದುಃಖ ತಂದಿದೆ. ಮೃತರ ಕುಟುಂಬಸ್ಥರ ಜೊತೆಗೆ ಸರ್ಕಾರದ ಇದೆ ಎಂದು ಡಿಕೆ ಶಿವಕುಮಾರ್ ಸಾಂತ್ವಾನ ತಿಳಿಸಿದ್ದಾರೆ.

ಈ ರೀತಿಯ ದುರಂತಗಳು ಆಗಬಾರದಿತ್ತು. ಕುಟುಂಬಸ್ಥರಿಗೆ ಸರ್ಕಾರ ದುಃಖವನ್ನ ವ್ಯಕ್ತಪಡಿಸ್ತಾ ಇದೆ. ಅವರ ಆತ್ಮಗಳಿಗೆ ಶಾಂತಿ ಸಿಗಲಿ. ಏನಾಗಿದೆ ಎಂಬ ವರದಿಯನ್ನ ಅಧಿಕಾರಿಗಳು ಕಲೆ ಹಾಕಿದ್ದಾರೆ ಎಂದಿದ್ದಾರೆ.

ಇದೇ ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಪರಿಹಾರ ಘೋಷಣೆ ಮಾಡಿದ್ದು, ಸಾಂತ್ವಾನವನ್ನು ವ್ಯಕ್ತೊಡಿಸಿದ್ದಾರೆ. ಪ್ರಯಾಣಿಕರ ಸಜೀವ ದಹನ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ ಮಸ್ ರಜೆಗೆ ಊರಿಗೆ ಹೋಗುತ್ತಿದ್ದವರ ದುರಂತ ಅಂತ್ಯ ನಿಜಕ್ಕೂ ವಿಷಾದನೀಯ ಎಂದಿದ್ದಾರೆ. ಚಿತ್ರದುರ್ಗದಲ್ಲಿ‌ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು.

ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ‌ ಲಭಿಸಲಿ‌ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಕ್ರಿಸ್ ಮಸ್ ರಜೆಯನ್ನ ಎಂಜಾಯ್ ಮಾಡೋಣಾ ಎಂದು ಹೋಗುತ್ತಿದ್ದ ಹಲವರಿಗೆ ಇಂದು ಕೊನೆ ದಿನ ಎಂಬುದು ಗೊತ್ತೆ ಇರಲಿಲ್ಲ. ದುರಂತ ಅಂತ್ಯ ಕಾಣುವಂತಾಯ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now