ಶಿಕ್ಷಣ ಇಲಾಖೆಗೆ ಬಜೆಟ್ ನಿಂದ ಸಿಕ್ಕಿದ್ದೇನು..?

ಬೆಂಗಳೂರು; ಇಂದಿನ ರಾಜ್ಯ ಬಜೆಟ್ ನಲ್ಲಿ ಶಿಕ್ಷಣ ಇಲಾಖೆಗೆ ಸಿದ್ದರಾಮಯ್ಯ ಸರ್ಕಾರ ಸಾಕಷ್ಟು ಯೋಜನೆಗಳನ್ನ ಘೋಷಣೆ‌ ಮಾಡಿದೆ. ಅದರಲ್ಲಿ ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂ‍ಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್‌ ನೆರವಿನೊಂದಿಗೆ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.

 

* ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ. ಮನಮೋಹನ್‌ ಸಿಂಗ್‌ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲು ಯೋಜನೆ. ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು.

* ಮಹಿಳಾ ಉನ್ನತ ಶಿಕ್ಷಣದ ಬಲವರ್ಧನೆಗಾಗಿ 31 ಮಹಿಳಾ ಕಾಲೇಜುಗಳನ್ನು ಹಿಂದಿನ ವರ್ಷದಲ್ಲಿ ಉನ್ನತೀಕರಿಸಲು ಕ್ರಮ ಕೈಗೊಂಡಿದ್ದು, ಉಳಿದ 26 ಕಾಲೇಜುಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 26 ಕೋಟಿ ರೂ. ಒದಗಿಸಲಾಗುವುದು.

* ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್‌ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಖಾಲಿಯಿರುವ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು.

* ರಾಜ್ಯದ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು, ಪಾಲಿಟೆಕ್ನಿಕ್‌ ಸಂಸ್ಥೆಗಳು ಹಾಗೂ ಪದವಿ ಕಾಲೇಜುಗಳಿಗೆ ಒಟ್ಟಾರೆ 275 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು.

* ಹೊಸದಾಗಿ ಪ್ರಾರಂಭಿಸಲಾದ ಪಾಲಿಟೆಕ್ನಿಕ್‌ ಹಾಗೂ ಇಂಜಿನಿಯರಿಂಗ್‌ ಕಾಲೇಜುಗಳಿಗೆ 10 ಕೋಟಿ ರೂ. ವೆಚ್ಚದಲ್ಲಿ ಪೀಠೋಪಕರಣಗಳು, ಉಪಕರಣಗಳು, ಕಂಪ್ಯೂಟರ್‌ಗಳು ಹಾಗೂ ಪುಸ್ತಕಗಳನ್ನು ಒದಗಿಸಲಾಗುವುದು.

* ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರಿಗೆ ಇಂಗ್ಲೆಂಡ್‌ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ Chevening Karnataka Masters Fellowship ನೆರವಿನೊಂದಿಗೆ ಒಂದು ವರ್ಷದ ಸ್ನಾತಕೋತ್ತರ ಪದವಿ ಪಡೆಯುವ ಯೋಜನೆ ರೂಪಿಸಲಾಗಿದೆ.

* ರಾಜ್ಯದ 16 ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನದಿಂದ ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ವೃತ್ತಿಪರ ವಿಷಯ ತಜ್ಞರನ್ನು ʻProfessor of Practiceʼ ರನ್ನಾಗಿ ನೇಮಿಸಲು ಉದ್ದೇಶಿಸಲಾಗಿದೆ.

* ಉನ್ನತ ಶಿಕ್ಷಣ ಸಂಸ್ಥೆಗಳ ಸಮಗ್ರ ನಿರ್ವಹಣೆಗಾಗಿ ಜಾರಿಮಾಡಿರುವ UUCMS ತಂತ್ರಾಂಶವನ್ನು ಇನ್ನೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಒಟ್ಟಾರೆ 30 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಿಸಲಾಗುವುದು.

* ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜನ್ನು 150 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

* ಅಜೀಂ ಪ್ರೇಮ್‌ಜೀ ಫೌಂಡೇಶನ್‌ರವರ ಸಹಯೋಗದೊಂದಿಗೆ ಕಾಲೇಜು ಶಿಕ್ಷಣ ಇಲಾಖೆಯ ಎಲ್ಲಾ ಬೋಧಕರಿಗೆ ಬೋಧನೆ ಮತ್ತು ಕಲಿಕೆಯನ್ನು ಉತ್ತಮಪಡಿಸಲು ಮುಂದಿನ ಮೂರು ವರ್ಷದೊಳಗೆ ಪುನರ್‌ ಮನನ ತರಬೇತಿ ನೀಡಲಾಗುವುದು.

* ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾರುಕಟ್ಟೆ ಆಧಾರಿತ ಕೌಶಲ್ಯ ತರಬೇತಿಗಳನ್ನು ಒದಗಿಸಿ ಉದ್ಯೋಗಕ್ಕೆ ಸಜ್ಜುಗೊಳಿಸಲು ಕೈಗಾರಿಕೆಗಳ ಸಹಭಾಗಿತ್ವದಲ್ಲಿ Internship Program ಹಾಗೂ ವಿಶೇಷ ಕಾರ್ಪೋರೇಟ್‌ ತರಬೇತಿ ಯೋಜನೆಗಳನ್ನು ರೂಪಿಸಲಾಗುವುದು.

* KKRDB ವತಿಯಿಂದ 23,000 ವಿದ್ಯಾರ್ಥಿಗಳಿಗೆ ವಿಶೇಷ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.

* ಪ್ರೊ. ನಂಜುಂಡ ಸ್ವಾಮಿ ಸಂಶೋಧನಾ ಪೀಠವನ್ನು ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾರಂಭಿಸಲಾಗುವುದು.

suddionenews

Recent Posts

ಪಾಕಿಸ್ತಾನದಲ್ಲಿ ಭದ್ರತಾ ಪಡೆಗಳ ಮೇಲೆ ಬಾಂಬ್ ದಾಳಿ : 10 ಸೈನಿಕರು ಸಾವು

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಪಾಕಿಸ್ತಾನಿ ಸೈನಿಕರ ಬೆಂಗಾವಲು ಪಡೆಯ ಮೇಲೆ…

41 minutes ago

ಭೂಮಿಗೆ ಬರುತ್ತಿದ್ದಾರೆ ಸುನೀತಾ ವಿಲಿಯಮ್ಸ್.. ಬಾಹ್ಯಾಕಾಶ ನಿಲ್ದಾಣಕ್ಕೆ ಸೇರಿದ ಕ್ರೂ-10 ತಂಡ : ವಿಡಿಯೋ ನೋಡಿ…!

ಸುದ್ದಿಒನ್ : ಸುನೀತಾ ವಿಲಿಯಮ್ಸ್ ಭೂಮಿಗೆ ಮರಳಲು ವೇದಿಕೆ ಸಜ್ಜಾಗಿದೆ. ಇಡೀ ವಿಶ್ವವೇ ಕಾಯುತ್ತಿದ್ದ ಸಮಯ ಕೊನೆಗೂ ಬಂದಿದೆ. ಸುನೀತಾ…

1 hour ago

ಚಿತ್ರದುರ್ಗದ ಅನ್ವರ್ ಪಾಷಾಗೆ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನ ಮಿಸ್ ; ರಾಜೀನಾಮೆ ಕೊಡ್ತಾರಾ ಜಮೀರ್ ಖಾನ್..?

  ಬೆಂಗಳೂರು, ಮಾರ್ಚ್. 16 : ಕರ್ನಾಟಕ ವಕ್ಫ್ ಬೋರ್ಡ್ ಗೆ ನೂತನವಾಗಿ ಅಧ್ಯಕ್ಷರ ನೇಮಕವಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಇಬ್ಬರ…

2 hours ago

ಮಗಳಿಂದ ಡಿಜಿಪಿ ರಾಮಚಂದ್ರ ರಾವ್ ಗೆ ಶಿಕ್ಷೆ ನೀಡಿದ ಸರ್ಕಾರ ; ಸಿಬಿಐ ಮಧ್ಯಪ್ರವೇಶ ಮಾಡುತ್ತಾ..?

ಬೆಂಗಳೂರು; ಚಿನ್ನದ ಸ್ಮಗ್ಲಿಂಗ್ ವಿಚಾರದಲ್ಲಿ ಈಗ ಸಾಕಿದ ಮಗಳಿಂದಾನೇ ತಂದೆಗೂ ಸಂಕಟ ಎದುರಾಗಿದೆ. ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಡಿಜಿಪಿ ರಾಮಚಂದ್ರ…

3 hours ago

ಹೊಸದುರ್ಗ ಪೊಲೀಸರ ಕಾರ್ಯಾಚರಣೆ : ಇಬ್ಬರು ಅಂತರ್ ಜಿಲ್ಲಾ ಸರಗಳ್ಳರ ಬಂಧನ : 9 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಸುದ್ದಿಒನ್, ಹೊಸದುರ್ಗ, ಮಾರ್ಚ್. 16 : ತಾಲ್ಲೂಕಿನ ಜನರ ಹಾಗೂ ಪೊಲೀಸರ ನಿದ್ದೆಗೆಡಿಸಿದ್ದ ಸರಗಳ್ಳರು ಕೊನೆಗೂ ಪೊಲೀಸರ ಖೆಡ್ಡಾಗೆ ಬಿದ್ದಿದ್ದಾರೆ.…

5 hours ago

ತುಪ್ಪವನ್ನು ಈ ಆಹಾರ ಪದಾರ್ಥಗಳೊಂದಿಗೆ ಬೆರೆಸಬಾರದು…!

ಸುದ್ದಿಒನ್ : ಬಹಳಷ್ಟು ಜನರು ತುಪ್ಪವನ್ನು ಚಪಾತಿ ಮತ್ತು ಬೇಳೆ ಸಾರಿನೊಂದಿಗೆ ಬೆರೆಸಿಕೊಂಡು ತಿನ್ನುತ್ತಾರೆ. ಇದು ಭಕ್ಷ್ಯಗಳ ಪೌಷ್ಟಿಕಾಂಶದ ಮೌಲ್ಯವನ್ನು…

9 hours ago