ರಕ್ಷಿತಾ ಶೆಟ್ಟಿಗೆ ಕರೆ ಮಾಡಿದ ವರ್ತೂರು ಸಂತೋಷ ಹೇಳಿದ್ದೇನು 

1 Min Read

ಬಿಗ್‌ಬಾಸ್​ 10ರ ಸ್ಪರ್ಧಿ ವರ್ತೂರು ಸಂತೋಷ್, ಈ ಬಾರಿ ಬಿಗ್ ಬಾಸ್ ರನ್ನರ್ ಅಪ್‌ಗೆ ಬಹುಮಾನ ನೀಡುವುದಾಗಿ ಘೋಷಿಸಿದ್ದರು. ಈಗ

ಮೊದಲ ರನ್ನರ್ ಅಪ್ ಆದ ರಕ್ಷಿತಾ ಶೆಟ್ಟಿಗೆ ಕರೆ ಮಾಡಿ 2 ಲಕ್ಷ ರೂಪಾಯಿ ನೀಡುವುದಾಗಿ ಹೇಳಿದ್ದಾರೆ.

ಬಿಗ್​ಬಾಸ್​ 10ರಲ್ಲಿ  ವರ್ತೂರು ಸಂತೋಷ್​ ಇದ್ದರು. ನಾಲ್ಕನೆಯ ರನ್ನರ್​ ಅಪ್​ ಆಗಿದ್ದರು. ಬಿಗ್ ಬಾಸ್ ನಲ್ಲಿ ಕೊನೆಯ ಕ್ಷಣದವರೆಗೆ ಬಂದು, ಗೆಲುವು ಸಾಧಿಸಿಲ್ಲ ಎಂದರೆ ತುಂಬಾ ನೋವಾಗುತ್ತದೆ. ಆದ್ದರಿಂದ 2ನೇ ರನ್ನರ್​ ಅಪ್​ಗೆ ಹಣವನ್ನು ನೀಡಲು ಆಸೆ ಪಟ್ಟಿದ್ದೇನೆ ಎಂದು ಹೇಳಿದ್ದರು. ಆದರೆ , ಬಿಗ್​ಬಾಸ್​ ವೇದಿಕೆಯ ಮೇಲೆ ನನ್ನನ್ನು ಕರೆಯಬೇಕು. ಅಲ್ಲಿ 2ನೇ ರನ್ನರ್​ ಅಪ್​ಗೆ ಹಣವನ್ನು ನೀಡುತ್ತೇನೆ.  ಬಿಗ್​ಬಾಸ್​​ ವೇದಿಕೆ ಮೇಲೆ ನನ್ನನ್ನು ಕರೆದಿಲ್ಲ ಎಂದರೆ, ರನ್ನರ್​ ಅಪ್​ಗೆ ಏನು ಸಹಾಯ ಬೇಕೋ ಅದನ್ನು ಮಾಡುತ್ತೇನೆ ಎಂದಿದ್ದರು.

ಇದೀಗ ರಕ್ಷಿತಾ ಶೆಟ್ಟಿ ಅವರಿಗೆ ಕರೆ ಮಾಡಿ ಹಣವನ್ನು ನೀಡುವುದಾಗಿ ಹೇಳಿದ್ದಾರೆ ವರ್ತೂರು ಸಂತೋಷ್. ಮನೆಗೆ ಬಂದಾಗ, ಮೀನು ತರಿಸಿ ಇಡುತ್ತೇನೆ. ಫ್ರೈ ಮಾಡಿಕೊಡಬೇಕು ಎಂದು ಹೇಳಿದ್ದಾರೆ ವರ್ತೂರು ಸಂತೋಷ.

Share This Article
Enable Notifications OK No thanks