Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದರ್ಶನ್ ಹೊರ ಬರುವ ಸುಳಿವು ಕೊಟ್ರಾ ವಿಜಯಲಕ್ಷ್ಮೀ: ಅಭಿಮಾನಿಗಳಿಗೆ ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯವಾಗಿದೆ. ಫ್ಯಾಮಿಲಿ, ಫ್ರೆಂಡ್ಸ್, ಫ್ಯಾನ್ಸ್ ತುದಿಗಾಲಿನಲ್ಲಿ ನಿಂತು ನಮ್ಮ ಡಿ ಬಾಸ್ ಯಾವಾಗ ಬರ್ತಾರೆ ಅಂತ ಕಾಯ್ತಿದ್ದಾರೆ. ದಸರಾಗಾದರೂ ಬಂದೇ ಬರ್ತಾರೆ ಎಂಬ ನಂಬಿಕೆ ಇಟ್ಟುಕೊಂಡಿದ್ದರು. ಆದರೆ ಅದು ಕೂಡ ಸಾಧ್ಯವಾಗಲಿಲ್ಲ. ಈಗ ವಿಜಯಲಕ್ಷ್ಮೀ ಹಾಕಿರುವ ಒಂದು ಪೋಸ್ಟ್ ನಿಂದ ಅಭಿಮಾನಿಗಳ ಮನದಲ್ಲಿ ಒಂದಷ್ಟು ಪಾಸಿಟಿವ್ ಥಿಂಕಿಂಗ್ ಶುರುವಾಗಿದೆ.

ದರ್ಶನ್ ಪರ ವಕೀಲರು ಕೋರ್ಟ್ ನಲ್ಲಿ ಸಾಕಷ್ಟು ಸ್ಟ್ರಾಂಗ್ ಆಗಿನೇ ವಾದ ಮಂಡಿಸಿದ್ದಾರೆ. ಪೊಲೀಸರು ಚಾರ್ಜ್ ಶೀಟ್ ನಲ್ಲಿ ಉಲ್ಲೇಖ ಮಾಡಿರುವುದೆಲ್ಲ ಸುಳ್ಳು ಎಂಬ ವಾದ ಮಂಡಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಎಸ್ಪಿಪಿ ಪ್ರಸನ್ನ ಕುಮಾರ್ ಅವರು ಅಷ್ಟೇ ಸ್ಟ್ರಾಂಗ್ ಆಗಿ ವಾದ ಮಂಡಿಸಿದ್ದಾರೆ. ಸದ್ಯ ಅರ್ಜಿ ವಿಚಾರಣೆಯ ವಾದ – ಪ್ರತಿವಾದ ಮುಕ್ತಾಯವಾಗಿದ್ದು, ಜಾಮೀನು ಅರ್ಜಿಯ ತೀರ್ಪನ್ನು ಸೋಮವಾರಕ್ಕೆ ಕಾಯ್ದಿರಿಸಿದೆ. ಇದರ ಬೆನ್ನಲ್ಲೇ ವಿಜಯಲಕ್ಷ್ಮೀ ದರ್ಶನ್ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ.

ದರ್ಶನ್ ಜೈಲು ಸೇರಿದ ಮೇಲೆ ವಿಜಯಲಕ್ಷ್ಮೀ ತಮ್ಮ ಸೋಷಿಯಲ್ ಮೀಡಿಯಾದಲ್ಲಿನ ಎಲ್ಲಾ ಫೋಟೋಗಳನ್ನು ತೆಗೆದಿದ್ದರು. ಆಕ್ಟೀವ್ ಆಗಿರುವುದು ಕಡಿಮೆಯಾಗಿದೆ. ಆದರೆ ಇಂದು ದರ್ಶನ್ ಅಭಿಮಾನಿಗಳಿಗೆ ಆಯುಧ ಪೂಜೆ ಹಾಗೂ ದಸರಾ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದು, ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ನವಗ್ರಹ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದು, ಶೀಘ್ರವೇ ರಿಲೀಸ್ ಆಗಲಿದೆ ಎಂದಿದ್ದಾರೆ ಅದರ ಜೊತೆಗೆ ಪ್ರೀತಿಯ ಡಿಬಾಸ್ ಸೆಲೆಬ್ರಿಟೀಸ್.. ಪ್ರತಿಯೊಬ್ಬರ ಹೃದಯ ಗೆದ್ದಿರುವ ನವಗ್ರಹ ಸಿನಿಮಾ ಮತ್ತೊಮ್ಮೆ ಬಿಡುಗಡೆಯಾಗುತ್ತಿದೆ. ಈ ಬಾರಿ ಮತ್ತಷ್ಟು ಸ್ಪೆಷಲ್. ನಿಮ್ಮ ಹತ್ತಿರದ ಥಿಯೇಟರ್ ನಲ್ಲಿ ಸಿನಿಮಾ ನೋಡಲು ರೆಡಿಯಾಗಿ. ನಾಡದೇವತೆ ಚಾಮುಂಡೇಶ್ಚರಿಯ ಆಶೀರ್ವಾದ ನಿಮ್ಮ ಹಾಗೂ ನಿಮ್ಮ ಕುಟುಂಬದ ಮೇಲೆ ಇರಲಿ ಎಂದು ಸ್ಟೋರಿ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

error: Content is protected !!