ಬೆಂಗಳೂರಿನಲ್ಲಿ ನಟ-ನಟಿಯರ ರೇವ್ ಪಾರ್ಟಿಯಲ್ಲಿ ಸಿಕ್ಕಿದ್ದೇನು..?

 

ಬೆಂಗಳೂರು: ಇಂದು ಬೆಳಗಿನ ಜಾವ 3 ಗಂಟೆ ವೇಳೆಗೆ ಎಲೆಕ್ಟ್ರಾನಿಕ್ ಸಿಟಿ ಬಳಿಯ ಫಾರ್ಮ್ ಹೌಸ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ತೆಲುಗು ಮತ್ತು ಕನ್ನಡದ ನಟ, ನಟಿಯರು, ಮಾಡೆಲ್ ಗಳು, ಡಿಜೆಗಳು ಪತ್ತೆಯಾಗಿದ್ದರೆ.‌ ಸಿಸಿಬಿ ಪೊಲೀಸರು ಕೆಲವರನ್ನು ಬಂಧಿಸಿದ್ದಾರೆ.

ಕಾನ್ ಕಾರ್ಡ್ ಮಲೀಕ ಗೋಪಾಲ ರೆಡ್ಡಿ ಎಂಬುವವರ ಮಾಲೀಕತ್ವದ ಜಿ.ಆರ್ ಫಾರ್ಮ್ ಹೌಸ್ ನಲ್ಲಿ ವಾಸು ಎಂಬಾತ ಬರ್ತ್ ಡೇ ಪಾರ್ಟಿ ಹೆಸರಲ್ಲಿ ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿ ತಡರಾತ್ರಿ 3 ಗಂಟೆಯಾದರೂ ಅಂತ್ಯವಾಗಿರಲಿಲ್ಲ. ನಿಯಮ ಉಲ್ಲಂಘಿಸಿ, ಅವಧಿ ಮೀರಿ ಪಾರ್ಟಿ ಮಾಡಲಾಗಿತ್ತು. ಆದ್ದರಿಂದ ಸಿಸಿಬಿಯ ಆಂಟಿ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಡ್ರಗ್ಸ್ ಕೂಡ ಪತ್ತೆಯಾಗಿದೆ. ಸಿಸಿಬಿ ಪೊಲೀಸರ ದಾಳಿ ವೇಳೆ 17 ಎಂಡಿಎಂಎ ಮಾತ್ರೆಗಳು, ಕೊಕೇನ್ ಕಂಡು ಬಂದಿದೆ. ಆಂಧ್ರ, ಬೆಂಗಳೂರು ಮೂಲದ 100ಕ್ಕೂ ಹೆಚ್ಚು ಜನ ಮತ್ತು 25ಕ್ಕೂ ಹೆಚ್ಚು ಯುವತಿಯರು ಈ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು ಎಂಬುದು ತಿಳಿದು ಬಂದಿದೆ.

ಇನ್ನು ಈ ಪಾರ್ಟಿಯಲ್ಲಿ ಶಾಸಕರೊಬ್ಬರ ಪಾಸ್ ಕೂಡ ಕಂಡು ಬಂದಿದೆ. ಆಂಧ್ರ ಮೂಲದ ಕಾಕನಿ ಶಾಸಕ ಗೋವರ್ಧನ ರೆಡ್ಡಿ ಹೆಸರಿನ ಪಾಸ್ ಅದಾಗಿದೆ. ಮರ್ಸಿಡಿಸ್, ಬೆನ್ಜ್, ಜಾಗ್ವಾರ್, ಆಡಿ ಕಾರು ಸೇರಿದಮನತೆ ಹದಿನೈದಕ್ಕೂ ಹೆಚ್ಚು ಐಷರಾಮಿ ಕಾರುಗಳು ಕಂಡು ಬಂದಿವೆ. 30-50 ಲಕ್ಷ ಖರ್ಚು ಮಾಡಿ ಈ ಪಾರ್ಟಿ ಆಯೋಜನೆಗೆ ಖರ್ಚಾಗಿತ್ತು ಎನ್ನಲಾಗುತ್ತಿದೆ. ಸದ್ಯ ಸಿಸಿಬಿ ಪೊಲೀಸರು ನಾರ್ಕೊಟಿಕ್ಸ್ ಸ್ನಿಫರ್ ಡಾಗ್ ಗಳಿಂದ ಪರಿಶೀಲನೆ ನಡೆಸುತ್ತಿದ್ದಾರೆ.

suddionenews

Recent Posts

ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ರೇಟ್ ಎಷ್ಟಿದೆ ?

    ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 25 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಮಂಗಳವಾರ, ಫೆಬ್ರವರಿ. 25 ) ಹತ್ತಿ…

5 hours ago

ಮೂತ್ರಪಿಂಡದ ಕಲ್ಲಿನ ಸಮಸ್ಯೆ ಇರುವವರು ಆಹಾರಗಳನ್ನು ಅಪ್ಪಿತಪ್ಪಿಯೂ ತಿನ್ನಬಾರದು…!

ಸುದ್ದಿಒನ್ :ಭಾರತದಲ್ಲಿ ಮೂತ್ರಪಿಂಡದಲ್ಲಿ ಕಲ್ಲುಗಳ ಸಮಸ್ಯೆ ಹೆಚ್ಚುತ್ತಿದೆ. ಹೆಚ್ಚಿನ ಸಂಖ್ಯೆಯ ಜನರು ಇದಕ್ಕೆ ಬಲಿಯಾಗುತ್ತಿದ್ದಾರೆ. ಮೂತ್ರಪಿಂಡಗಳು ನಮ್ಮ ದೇಹದಲ್ಲಿ ಬಹಳ…

10 hours ago

ಅಂತೂ ಇಂತೂ ಈ ರಾಶಿಯವರದು ಮದುವೆಯಾಯಿತು

ಅಂತೂ ಇಂತೂ ಈ ರಾಶಿಯವರದು ಮದುವೆಯಾಯಿತು, ಈ ರಾಶಿಯವರಿಗೆ ಉದ್ಯೋಗದ ವರ್ಗಾವಣೆಯಿಂದ ಸಂತಸ, ಮಂಗಳವಾರದ ರಾಶಿ ಭವಿಷ್ಯ 25 ಫೆಬ್ರವರಿ…

12 hours ago

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

23 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

23 hours ago