ಬೆಂಗಳೂರು: ಜೆಡಿಎಸ್ ಬಿಟ್ಟು ವೈ ಎಸ್ ವಿ ದತ್ತಾ ಅವರು ಕಾಂಗ್ರೆಸ್ ಸೇರುವುದು ಖಚಿತವಾಗಿದೆ. ಈ ಸಂಬಂಧ ವೈ ಎಸ್ ವಿ ದತ್ತಾ ಅವರು ಅಧಿಕೃತವಾಗಿ ತಿಳಿಸಿದ್ದಾರೆ. ಆದರೆ ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಅತ್ಯಾಪ್ತರಲ್ಲಿ ದತ್ತಾ ಕೂಡ ಒಬ್ಬರು. ದೇವೇಗೌಡ ಅವರು ಇರುವ ತನಕ ಜೆಡಿಎಸ್ ಬಿಡಲ್ಲ ಎಂದೇ ಹೇಳಿದ್ದರು.
ಈ ಬಗ್ಗೆ ಮಾತನಾಡಿರುವ ವೈ ಎಸ್ ವಿ ದತ್ತಾ ಅವರು, ಕಡೂರು ಜನತೆಯ ನಿರ್ಧಾರಕ್ಕೆ ನನ್ನ ರಾಜಕೀಯ ನಿವೃತ್ತಿಯನ್ನು ಬಿಟ್ಟಿದ್ದೇನೆ. ಯಾಕಂದ್ರೆ ನನಗೀಗ 70 ವರ್ಷ. ಈ ಚುನಾವಣೆಯೇ ನನ್ನ ಕೊನೆಯ ಚುನಾವಣೆಯಾಗಿರಲಿದೆ. ನನ್ನ ನಂಬಿಕೊಂಡು ಬೆಂಬಲಿಗರು ಇದ್ದಾರೆ. ಕಾರ್ಯಕರ್ತರ ಭವಿಷ್ಯವನ್ನು ನಿರ್ಧಾರ ಮಾಡಬೇಕಾಗುತ್ತದೆ. ನನ್ನ ಮತ್ತು ದೇವೇಗೌಡ ಅವರ ರಾಜಕೀಯ 50 ವರ್ಷಗಳ ಸುದೀರ್ಘ ಪಯಣವಾಗಿದೆ.
ನನಗೂ ಮತ್ತು ದೇವೇಗೌಡ ಅವರದ್ದು ತಂದೆ ಮಗನ ಸಂಬಂಧ. ದೇವೇಗೌಡ ಅವರು ಇರುವ ತನಕ ಜೊತೆಯಾಗಿಯೇ ಇರುತ್ತೀನಿ ಅಂತ ಹೇಳಿದ್ದೆ. ಆದರೆ ಕಾರ್ಯಕರ್ತರು ಕಾಂಗ್ರೆಸ್ ಸೇರುವಂತೆ ಒತ್ತಾಯಿಸಿದ್ದಾರೆ. ನನ್ನ ನಂಬಿ ಬಂದವರು ಇದ್ದಾರೆ. ಅವರಿಗೊಂದು ನೆಲೆಕೊಡಿಸಲು ನಾನು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…