Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ಸಿಎಂ ಸಿದ್ದರಾಮಯ್ಯ ಏನಂದ್ರು..?

---Advertisement---

 

ಹಾಸನ: ಈಗಾಗಲೇ ಬಿಜೆಪಿ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಸಹಜವಾಗಿಯೇ ಜನರಿಗೆ ಕುತೂಹಲವಿರುತ್ತದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಹಾಸನದಲ್ಲಿ ಕಾರ್ಯಕ್ರಮಕ್ಕೆ ಬಂದಿದ್ದ ಸಿಎಂ ಸಿದ್ದರಾಮಯ್ಯ ಲೋಕಸಭಾ ಚುನಾವಣೆಯ ಬಗ್ಗೆ ಮಾತನಾಡಿದ್ದು, ಅಭ್ಯರ್ಥಿ ಆಯ್ಕೆ ಮಾಡಲು ಸಮಸ್ಯೆ ಏನು ಇಲ್ಲ. ಲೋಕಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಆದಷ್ಟು ಬೇಗ ಬಿಡುಗಡೆ ಮಾಡುತ್ತೇವೆ ಎಂದಿದ್ದಾರೆ.

 

ಇದೇ ವೇಳೆ ಪಾಕ್ ಪರ ಘೋಷಣೆ ಕೂಗಿದ್ದರ ವಿಡಿಯೋವನ್ನು ಎಫ್ಎಸ್ಎಲ್ ವರದಿಗೆ ಕಳುಹಿಸಲಾಗಿದೆ. ಈಗಾಗಲೇ ವರದಿ ಬಂದಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್, ವಾಗ್ದಾಳಿ ನಡೆಸಿದ್ದರು. ಅದರ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವರದಿ ಬಂದ ಕೂಡಲೇ ಬಹಿರಂಗಪಡಿಸುತ್ತೇವೆ. ಈ ಸಂಬಂಧ ಯಾರೇ ತಪ್ಪು ಮಾಡಿದರು ಕಠಿಣ ಕ್ರಮ ಕೈಗೊಳ್ಳುತ್ತೇವೆ. ಭಾರತದಲ್ಲಿ ಇದ್ದುಕೊಂಡು ಬೇರೆ ದೇಶದ ಪರ ನಿಷ್ಠೆ ಹೊಂದಿರುವವರಿಗೆ ಶಿಕ್ಷೆ ಖಂಡಿತ ಎಂದಿದ್ದಾರೆ‌.

 

 

ಕಾಂಗ್ರೆಸ್ ಪಕ್ಷಕ್ಕೆ ದೇಶ ಭಕ್ತಿ ಹೇಳಿ ಕೊಡಬೇಕಾ? ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟವರು ಯಾರು? ಅವರು ರಾಜಕೀಯಕ್ಕೋಸ್ಕರ ಏನೋ ಹೇಳ್ತಾರೆ, ಅದು ಬೇರೆ ವಿಚಾರ. ಅವರು ಏನಾದರೂ ಆ ತರ ಕೂಗಿದ್ರೆ ಕಠಿಣವಾದ ಕ್ರಮ ತೆಗೆದುಕೊಳ್ತೇವೆ. ಜಾತಿಗಣತಿ ವರದಿ ಸಲ್ಲಿಸಿದೆ. ವರದಿಯಲ್ಲಿ ಏನಿದೆ ಎಂದು ಇನ್ನೂ ನೋಡಿಲ್ಲ ಎಂದು ಜಾತಿ ಗಣತಿ ವರದಿ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಅವರ ಸ್ಪಷ್ಟ ಹೇಳಿಕೆ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment