ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ರಾಮನಗರ: ಸಿದ್ದರಾಮಯ್ಯ ನಂತರದಲ್ಲಿ ಸಿಎಂ ಆಗುವವರು ಡಿಕೆ ಶಿವಕುಮಾರ್ ಎಂಬುದು ಎಲ್ಲರಿಗೂ ತಿಳಿದಿರುವ ಸತ್ಯ. ಆದ್ರೆ ಮತ್ತೊಂದು ಚುನಾವಣೆಗೆ ಕಾಯುವ ತಾಳ್ಮೆಗಿಂತ ಈ ಆಡಳಿತದಲ್ಲಿಯೇ ಡಿಸಿಎಂ, ಸಿಎಂ ಆಗುವ ಕಾತುರದಲ್ಲಿದ್ದಾರೆ. ಹೀಗಾಗಿಯೇ ಸಿಎಂ ಬದಲಾವಣೆ ವಿಚಾರ ಸಿಕ್ಕಾಪಟ್ಟೆ ಚರ್ಚೆಗೆ ಬರುತ್ತಾ ಇರುತ್ತದೆ. ಆದರೆ ಸಾರ್ವಜನಿಕವಾಗಿ ನಾನು ಸಿಎಂ ಆಗಬೇಕು ಎಂಬುದನ್ನ ಡಿಕೆ ಶಿವಕುಮಾರ್ ಸಹ ಹೇಳಲ್ಲ. ಇದೀಗ ಇದೇ ಪ್ರಶ್ನೆಗೆ ಅವರ ಸಹೋದರ ಡಿಕೆ ಸುರೇಶ್ ಅವರು ಉತ್ತರಿಸಿದ್ದಾರೆ.
ಮಾಧ್ಯಮದವರು ಕೇಳಿದ ಸಿಎಂ ಬದಲಾವಣೆ ಪ್ರಶ್ನೆಗೆ ಉತ್ತರ ಕೊಟ್ಟಿದ್ದು ಹೀಗೆ, ಏನಿಲ್ಲ ಸದ್ಯಕ್ಕೆ. ಕಾಂಗ್ರೆಸ್ ಸರ್ಕಾರಕ್ಕೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂದಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಪಕ್ಷದಲ್ಲಿಯೇ ಶಾಸಕರು ಅಸಮಾಧಾನ ಹೊರ ಹಾಕಿರುವುದರ ಬಗ್ಗೆ ಮಾತನಾಡಿದ ಡಿಕೆ ಸುರೇಶ್ ಅವರು, ಅವರ ಪಕ್ಷದಲ್ಲಿಯೇ, ಅವರಲ್ಲಿಯೇ ಸಾಕಷ್ಟು ಗೊಂದಲಗಳು, ಸಮಸ್ಯೆಗಳು ಇದಾವೆ. ಇಂಥ ಸಂದರ್ಭದಲ್ಲಿ ಅವರು ಬೇರೆಯವರ ಮೇಲೆ ಬೊಟ್ಟು ಮಾಡುವಂಥದ್ದು ಎಷ್ಟು ಸರಿ ಅನ್ನೋದು ಬಹಳ ಪ್ರಮುಖವಾದ ವಿಚಾರ. ಅವರ್ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ. ಸರ್ಕಾರ ಹಾಗೂ ಪಕ್ಷ ಎರಡು ಕೂಡ ಸಮರ್ಥವಾಗಿದೆ. ಏನೇ ಸಮಸ್ಯೆ ಇದ್ದರು ಕೂಡ ಅದನ್ನು ನಿಭಾಯಿಸುತ್ತದೆ ಎಂದಿದ್ದಾರೆ.
ಇಂಥ ಹೇಳಿಕೆಗಳಿಂದ ಪಕ್ಷಕ್ಕೆ ಮುಜುಗರವಾಗುತ್ತದೆಯಾ ಎಂಬ ಪ್ರಶ್ನೆಗೆ, ಅವರು ಕೂಡ ಸಾರ್ವಜನಿಕ ಜೀವನದಲ್ಲಿ ಇದ್ದಾರೆ ಶಾಸಕರು. ಅವರ ಅಹವಾಲುಗಳನ್ನ ಸಹಾನುಭೂತಿಯಿಂದ ಪರಿಶೀಲನೆ ಮಾಡಬೇಕಿರುವುದು ಸಹ ಆಡಳಿತದಲ್ಲಿರುವ ಕರ್ತವ್ಯ. ಇವರು ಒತ್ತಡದಲ್ಲಿರ್ತಾರೆ ಅವರು ಸಮಸ್ಯೆಯಲ್ಲಿರ್ತಾರೆ. ಸರ್ಕಾರ ನಡೆಸುವವರು ಸಮಸ್ಯೆಯನ್ನು ಬಗೆಹರಿಸುತ್ತಾರೆ ಎಂಬ ವಿಶ್ವಾಸ ಇದೆ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್