Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೇವರಾಜು ಅರಸು ದಾಖಲೆ ಮುರಿದ ಸಿದ್ದರಾಮಯ್ಯ ಬಗ್ಗೆ ಡಿಕೆಶಿ ಆಪ್ತ ಇಕ್ಬಾಲ್ ಏನಂದ್ರು..?

---Advertisement---

ಬೆಂಗಳೂರು : ಇಂದಿಗೆ ಸಿಎಂ ಸಿದ್ದರಾಮಯ್ಯ ಅವರು ದೇವರಾಜು ಅರಸು ಅವರ ದಾಖಲೆಯನ್ನ ಬ್ರೇಕ್ ಮಾಡಿದ್ದಾರೆ. ಡಿಕೆ ಶಿವಕುಮಾರ್ ಅವರು ಈ ಅವಧಿಯಲ್ಲಿಯೇ ಸಿಎಂ ಆಗಲಿ ಅಂತ ಸಾಕಷ್ಟು ಅವರ ಬೆಂಬಲಿಗರು ಬಯಸುತ್ತಿದ್ದಾರೆ. ಅದರಲ್ಲೂ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರ ಆಸೆ ಕೂಡ ಹೌದು. ಅದನ್ನ ಬಹಿರಂಗವಾಗಿಯೇ ಸಾಕಷ್ಟು ಸಲ ಹೇಳಿದ್ದಾರೆ. ಇದೀಗ ಸಿದ್ದರಾಮಯ್ಯ ಅವರ ದಾಖಲೆ ಬಗ್ಗೆ ಮಾತನ್ನಾಡಿ, ಡಿಕೆ ಶಿವಕುಮಾರ್ ಬಗೆಗಿನ ಆಸೆಯನ್ನು ಹೇಳಿದ್ದಾರೆ.

 

ಈ ಬಗ್ಗೆ ಮಾತನ್ನಾಡಿದ ಇಕ್ಬಾಲ್, ನೆಚ್ಚಿನ ನಾಯಕರು, ಅಲ್ಪಸಂಖ್ಯಾತರ ಮೇಲೆ ಕಾಳಜಿ ಇರುವ ನಾಯಕರು ಸಿದ್ದರಾಮಯ್ಯ. ಅತಿಹೆಚ್ಚು ಅವಧಿ ಸಿಎಂ ಆಗಿ ಕೆಲಸ ಮಾಡಿದ್ದಾರೆ. ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ನನ್ನ ಕ್ಷೇತ್ರದ ಜನತೆಯ ಪರವಾಗಿ ಸಿಎಂ ಸಿದ್ದರಾಮಯ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹಿಂದುಳಿದ ವರ್ಗದ ಬಗ್ಗೆ ಹೆಚ್ಚು ಚಿಂತನೆ ಮಾಡುವ ನಾಯಕ. ನಮ್ಮ ಪಕ್ಷದ ಆಸ್ತಿಯಾಗಿ ಕೆಲಸ ಮಾಡ್ತಿದ್ದಾರೆ. ಎಲ್ಲಾ ಶೋಷಿತ ವರ್ಗದ ಮೇಲೆ ವಿಶೇಷ ಕಾಳಜಿಯಿಂದ ಆಡಳಿತ ಮಾಡ್ತಿದ್ದಾರೆ. ದೇವರು ಅವರಿಗೆ ಆಯಸ್ಸು, ಆರೋಗ್ಯ ನೀಡಲಿ ಎಂದು ಪ್ರಾರ್ಥನೆ ಮಾಡ್ತೇನೆ ಎಂದಿದ್ದಾರೆ.

ಇನ್ನು ಇದೇ ದಿನ ಅಂದ್ರೆ ಜನವರಿ 6ಕ್ಕೆ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ ಅಂತ ಶಾಸಕ ಇಕ್ಬಾಲ್ ಅವರು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿ,  ನನ್ನದು ಎರಡು ಡೇಟ್ ಇದೆ, ಒಂದು ಜನವರಿ  6 ಇನ್ನೊಂದು ಜನವರಿ  9.  ಈಗ ಜನವರಿ  6 ಮುಗಿದಿದೆ, ಇನ್ನೂ  ಜನವರಿ 9 ನೇ ತಾರೀಖು ಬಾಕಿ ಇದೆ. ಹೈಕಮಾಂಡ್ ಈ ಬಗ್ಗೆ ತೀರ್ಮಾನ ಮಾಡುತ್ತೆ.  ವರಿಷ್ಠರ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ.  ಈಗಾಗಲೇ ಡಿಕೆಶಿ ಹಾಗೂ ಸಿದ್ದರಾಮಯ್ಯ ಇಬ್ಬರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದಿದ್ದಾರೆ .

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...