Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಸರಾ ಉದ್ಘಾಟನೆ ಬಗ್ಗೆ ಹಂಸಲೇಖಾ ಅವರು ಏನುಂದ್ರು..?

Facebook
Twitter
Telegram
WhatsApp

 

ಬೆಂಗಳೂರು: ಈ ಬಾರಿಯ ನಾಡಹಬ್ಬ ದಸರಾ ಉದ್ಘಾಟನೆಯನ್ನು ಸಂಗೀತ ನಿರ್ದೇಶಕ ಹಂಸಲೇಖ ಅವರು ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಈ ವಿಚಾರವನ್ನು ತಿಳಿಸಿದ್ದಾರೆ. ಈ ಸಂಬಂಧ ಹಂಸಲೇಖ ಅವರು ಅತೀವ ಸಂತಸ ವ್ಯಕ್ತಪಡಿಸಿದ್ದು, ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಹಂಸಲೇಖ ಅವರು, ಈ ಸುದ್ದಿ ಕೇಳಿ ತುಂಬಾ ಖುಷಿ ಆಯ್ತು. ದಸರಾ ಅನ್ನೋದು ನಾಲ್ವಡಿ‌ಕೃಷ್ಣರಾಜ ಒಡೆಯರ್ ಅವರ ಕನಸು. ಉದ್ಘಾಟನೆ ಮಾಡುವುದಕ್ಕೆ ನನ್ನನ್ನು ಆಯ್ಕೆ ಮಾಡಿದ ರಾಜ್ಯ ಸರ್ಕಾರಕ್ಕೆ ಎಲ್ಲಾ ಕಲಾವಿದರ ಪರವಾಗಿ ಧನ್ಯವಾದ ಅರ್ಪಿಸುತ್ತೇನೆ.

ನಾನು ಕಲಾಪ್ರತಿನಿಧಿಯಾಗಿದ್ದು, ಅವರ ಪರವಾಗಿ ದಸರಾ ದೀಪವನ್ನು ಹಚ್ಚುತ್ತೇನೆ. ಈಗ ದಸರ ಬಗ್ಗೆ ಒಂದು ಹಾಡು ಮಾಡೋಕೆ ಬಹಳ ಉತ್ಸುಕನಾಗಿದ್ದೇನೆ. ಸದ್ಯಕ್ಕೆ ಒಂದು ಸಾಲು ದಸರ ಬಗ್ಗೆ ಹಾಡುತ್ತೇನೆ. ‘ಬದುಕಿದ್ದು ಕನ್ನಡ ಭಿಕ್ಷೆ ಸಮರಸವೇ ನಮ್ಮ ರಕ್ಷೆ’ ಎಂದು ದಸರ ಹಬ್ಬದ ಸಂಭ್ರದಲ್ಲಿರುವ ಹಂಸಲೇಖಾ ಅವರು ಈ ಸಾಲನ್ನು ಹಾಡಿದ್ದಾರೆ.

ನಾನು ದಸರಾ ನೋಡೋದಕ್ಕೆ ಹೋಗ್ತಾ ಇದ್ದೆ. ಆಗ ನಮ್ಮಪ್ಪನ ಹೆಗಲ‌ ಮೇಲೆ ಕೂರುತ್ತಿದ್ದೆ. ಅವೆಲ್ಲ ನನ್ನ ಅದ್ಭುತವಾದ ನೆನಪುಗಳು. ಜಯ ಹೇ ನಾಲ್ವಡಿ ಎಂಬ ಕಾರ್ಯಕ್ರಮ ಮಾಡಬೇಕೆಂಬ ಆಸೆ ಇದೆ. ಅದರಲ್ಲಿ ನನ್ನ ಸಾಹಿತ್ಯ ಸಂಗೀತವಿರುತ್ತದೆ. ಅದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅನುಮತಿ ಕೊಡಬೇಕು ಅಷ್ಟೇ. ನಾನು ಅನಾರೋಗ್ಯದಲ್ಲಿದ್ದಾಗಲೂ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ನನ್ನ ಆರೋಗ್ಯ ವಿಚಾರಿಸಿದ್ರು. ಈ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದಗಳು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!