Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೇಂದ್ರದಲ್ಲಿ ತಂದೆಗೆ ಸ್ಥಾನ ಸಿಗುವ ಬಗ್ಗೆ ನಿಖಿಲ್ ಕುಮಾರಸ್ವಾಮಿ ಏನಂದ್ರು..?

---Advertisement---

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಜೆಡಿಎಸ್ ಎರಡು ಕ್ಷೇತ್ರಗಳಲ್ಲಿ ಗೆದ್ದಿದೆ. ಕುಮಾರಸ್ವಾಮಿ ಗೆದ್ದು ಬೀಗಿದರೆ ಈ ಬಾರಿ ಕೇಂದ್ರ ಸರ್ಕಾರದಲ್ಲಿ ಮಂತ್ರಿಯಾಗುತ್ತಾರೆ ಎಂಬ ಮಾತು ಕೇಳಿ ಬಂದಿತ್ತು. ಬಿಜೆಪಿ ಹೈಕಮಾಂಡ್ ನಿಂದ ಕೂಡ ಅದಾಗಲೇ ಬುಲಾವ್ ಬಂದಿತ್ತು. ಹಾಗಾದ್ರೆ ನಿಜವಾಗಲೂ ಕೇಂದ್ರ ಸಚಿವರಾಗುತ್ತಾರಾ ಎಂಬ ವಿಚಾರಕ್ಕೆ ನಿಖಿಲ್ ಕುಮಾರಸ್ವಾಮಿ ಮಾತನಾಡಿದ್ದಾರೆ.

 

ಹೆಚ್.ಡಿ.ದೇವೇಗೌಡ ಅವರು ಹಾಗೂ ಕುಮಾರಸ್ವಾಮಿ ಅವರು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಾಗ ಯಾವುದೇ ಷರತ್ತನ್ನು ಅವರ ಮುಂದೆ ಇಟ್ಟಿರಲಿಲ್ಲ. ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅಮೋಘವಾದ ಸಾಧನೆಯನ್ನು ಮಾಡಿದ್ದಾರೆ. ಇಡೀ ವಿಶ್ವವೇ ಭಾರತದ ಅಭಿವೃದ್ಧಿಯತ್ತ ನೋಡುವಂತೆ ಮಾಡಿರುವ ಅಭಿವೃದ್ಧಿಯ ಹರಿಕಾರ ಮೋದಿ ಅವರು‌ ಅವರ ಸಾಧನೆಗಳ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜೊತೆಗೆ ಮೈತ್ರಿ ಬೆಳೆಸಿದ್ದು, ಬೇಷರತ್ತಾಗಿ ಜೆಡಿಎಸ್ ಎನ್‌ಡಿಎ ಮೈತ್ರಿಕೂಟದ ಸದಸ್ಯ ಪಕ್ಷವಾಗಿ ಸೇರಿದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಇದೇ ವೇಳೆ ತಂದೆಯ ಕೇಂದ್ರ ಸಚಿವ ಸ್ಥಾನದ ಬಗ್ಗೆಯೂ ಮಾತನಾಡಿ, ಕೇಂದ್ರದ ನಾಯಕರು ಕುಮಾರಸ್ವಾಮಿ ಅವರುಗೆ ಯಾವುದಾದರೂ ಸ್ಥಾನಮಾನ ಕೊಟ್ಟರೆ ಸಂತೋಷದಿಂದ ಸ್ವೀಕರಿಸುತ್ತೇವೆ. ಕೊಡದೇ ಹೋದರೂ ಯಾವುದರೆ ಬಗೆಯ ಅಸಮಾಧಾನ ತಳೆಯುವುದಿಲ್ಲ ಎಂದಿದ್ದಾರೆ.

ಇನ್ನು ನಿಖಿಲ್ ಕುಮಾರಸ್ವಾಮಿ ಇನ್ನು ಮುಂದೆ ಸಿನಿಮಾ ಮಾಡುವುದಿಲ್ಲ, ಫುಲ್ ಟೈಮ್ ರಾಜಕಾರಣ ಮಾಡುತ್ತೀನಿ ಎಂದಿದ್ದಾರೆ. ಜೆಡಿಎಸ್ ಉತ್ತರಾಧಿಕಾರಿಯಾಗಿದ್ದ ಪ್ರಜ್ವಲ್ ರೇವಣ್ಣ ಸದ್ಯ ಎಸ್ಐಟಿ ವಶದಲ್ಲಿದ್ದಾರೆ. ಆ ಸ್ಥಾನಕ್ಕೆ ಅಧಿಕೃತವಾಗಿ ನಿಖಿಲ್ ಕುಮಾರಸ್ವಾಮಿ ಬರಬಹುದು ಎನ್ನಲಾಗುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment