Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಬಗ್ಗೆ ಅನಂತ್ ಕುಮಾರ್ ಹೆಗಡೆ ಆಡಿದ ಮಾತಿಗೆ ವಿ ಸೋಮಣ್ಣ ಏನಂದ್ರು..?

Facebook
Twitter
Telegram
WhatsApp

ಬೆಂಗಳೂರು: ಅಯೋಧ್ಯೆ142 ಕೋಟಿ ಭಾರತೀಯರದ್ದಲ್ಲ. ವಿಶ್ವದ ಭೂಪಟದಲ್ಲಿ, ಇಂಥ ದೊಡ್ಡ ಸಮಸ್ಯೆಯನ್ನು, ಈ ದೇಶದ ಇತಿಹಾಸವನ್ನು, ಈ ದೇಶದ ಸಂಸ್ಕೃತಿಯನ್ನು, ಈ ದೇಶದ ನೆಲೆಯಲ್ಲಿ, ಶ್ರೀರಾಮಚಂದ್ರನ ಇತಿಹಾಸವನ್ನು ವಿಶ್ವಕ್ಕೆ ಪರಿಚಯಿಸುವಂತ ಜಾಗದಲ್ಲಿ ಮಾಡುತ್ತಾ ಇದ್ದಾರೆ. ನಾನು, ಇನ್ನೊಬ್ಬರು ಹೋಗಬೇಕೆಂಬ ವಿಚಾರಕ್ಕಿಂತ ಹೆಚ್ಚಾಗಿ, ಎಲ್ಲಾ ಭಾರತೀಯರಿಗೂ ಸಲ್ಲುತ್ತದೆ. ಶ್ರೀರಾಮಚಂದ್ರ ಒಬ್ಬ ದೇವರು. ನಂಬಿಕೆ ಎಂಬುದನ್ನು ಇಟ್ಟುಕೊಂಡು ಮಾಡಿದ್ದಕ್ಕೇನೆ ಪ್ರಧಾನಿ ಮೋದಿಯವರು ಯಶಸ್ಸು ಕಂಡಿದ್ದಾರೆ ಎಂದಿದ್ದಾರೆ.

 

ಇದೆ ವೇಳೆ ದೆಹಲಿ ಪ್ರವಾಸದ ಬಗ್ಗೆ ಮಾತನಾಡಿ, ದೆಹಲಿಗೆ ಹೋಗಿದ್ದೆ. ನಾಯಕರನ್ನು ಭೇಟಿ ಮಾಡುವುದರ ಜೊತೆಗೆ ದೇವಸ್ತಾನಗಳಿಗೂ ಓಡಾಡಿಕೊಂಡು ಬಂದಿದ್ದೀನಿ. ಸಾಮಾನ್ಯ ಜನರ ಬಗ್ಗೆ ಕಾಳಜಿ ಇಟ್ಟುಕೊಂಡು, ಬಡವರು ಬಡವರಾಗಿಯೇ ಉಳಿಯಬಾರದು ಎಂಬ ಒಳ್ಳೆಯ ಭಾವನೆ ಇಟ್ಟುಕೊಂಡು ಕೆಲಸ ಮಾಡಿದರೆ, ಒಳ್ಳೆಯದ್ದೆ ಆಗುತ್ತೆ ಎಂಬಂತೆ ಈ ಸಲದ ದೆಹಲಿಯ ಯಾತ್ರೆ ನನಗೆ ದೊಡ್ಡ ಅನುಭವವನ್ನೇ ಕೊಟ್ಟರು‌. ಜೆಪಿ ನಡ್ಡಾ ಅವರು, ಸಂತೋಷ್ ಜೀ ಅವರು, ಅಮಿತ್ ಶಾ ಜೀ ಅವರು ಸಿಕ್ಕಿದ್ರು. ಅವರು ಕೊಟ್ಟಂತ ಸಲಹೆ ಸೂಚನೆ, ಅವರ ನಡವಳಿಕೆ, ಅವರ ಅಂತರಾಳದ ಮಾತುಗಳನ್ನು ಕೇಳಿದಾಗ ಒಬ್ಬ ರಾಜಕಾರಣಿ ಆದವರು, ದೊಡ್ಡವರ ಮಾತು ಕೇಳಿದಾಗ ಆಗುವ ತೊಂದರೆಗೆ ಎಲ್ಲೋ ಒಂದು ಕಡೆ ಯಾವ ರೀತಿ ನೋವು ಕೊಡುತ್ತದೆ ಎಂಬುದು ಇದರಿಂದ ಅರ್ಥವಾಗಿದೆ. ರಾಷ್ಟ್ರಕ್ಕೆ ಮೋದಿಯವರ ಅಗತ್ಯವಿದೆ ಎಂದಿದ್ದಾರೆ.

 

ಅನಂತ್ ಕುಮಾರ್ ಹೆಗಡೆ ಅವರ ಸ್ಟೇಟ್ಮಂಟ್ ಕೂಡ ಗಮನಿಸಿದ್ದೀನಿ. ಅವರು ಒಬ್ಬ ಹಿರಿಯ ನಾಯಕ. ನಾನು ಅವರ ನಿಶ್ಕಲ್ಮಶ ಭಾವನೆಯನ್ನು ನೋಡಿದ್ದೀನಿ. ಏನು ಬಾಯಿಗೆ ಬರುತ್ತೆ, ಅದನ್ನೇ ಹೇಳುತ್ತಾರೆ ನನ್ನ ಥರ. ಹಿಂದೆ ಮುಂದೆ ನೋಡಲ್ಲ. ಆದರೆ ಅವರು ಸಿದ್ದರಾಮಯ್ಯ ಅಲ್ಲ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು. ಸಿದ್ದರಾಮಯ್ಯ ಅವರು ಎಷ್ಟರಮಟ್ಟಿಗೆ ಮಾತನಾಡುತ್ತಾರೆ ಎಂಬುದು ಅವರಿಗೆ ಬಿಟ್ಟಿದ್ದು. ಅನಂತ್ ಕುಮಾರ್ ಹೆಗಡೆ ಅವರು ಸುಸಂಸ್ಕೃತ ಕುಟುಂಬದಿಂದ ಬಂದವರು. ನಮ್ಮ ಭಾಷೆಯನ್ನು ನಾವೇ ಹಿಡಿತದಲ್ಲಿ ಇಡದೆ ಹೋದರೆ, ನಂಗೆ ವೈಯಕ್ತಿಕವಾಗಿ ಇಷ್ಟವಾಗಲಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!