Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿನ್ನೆ CLP ಸಭೆಯಲ್ಲಿ ಏನಾಯ್ತು..? ಸಿಎಂ ಕೊಟ್ಟ ಉತ್ತರವೇನು..?

---Advertisement---

ಬೆಳಗಾವಿ: ಕಾಂಗ್ರೆಸ್ ನಲ್ಲಿ ನಿನ್ನೆಯಷ್ಟೇ CLP ಸಭೆ ನಡೆದಿದೆ. ಈ ಸಭೆ ನಡೆದಿದೆ. ಈ ಸಭೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ ನಡೆದಿಲ್ಲ ಎಂದಿದ್ದಾರೆ. ಇದೆ ವೇಳೆ ಧರ್ಮಸ್ಥಳದ ಕೇಸ್ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಉತ್ತರಿಸಿದ ಸಿದ್ದರಾಮಯ್ಯ ಅವರು, ನಾನು ಚಾರ್ಜ್ ಶೀಟ್ ನೋಡಿಲ್ಲ ಎಂದಿದ್ದಾರೆ.

ಸಿಎಲ್ಪಿನಲ್ಲಿ ಏನು ಚರ್ಚೆ ನಡಿತು ಅಂತ ನಿಮಗೆಲ್ಲಾ ಹೇಳುವುದಕ್ಕೆ ಆಗುತ್ತಾ..? ಹೈಕಮಾಂಡ್ ಏನು ಹೇಳುತ್ತೋ ಅದೇ ಫೈನಲ್ ಎಂದಿದ್ದಾರೆ. ಕಾಂಗ್ರೆಸ್ ನಾಯಕರಲ್ಲಿ ಈ ಸಿಎಂ ಕುರ್ಚಿ ಬದಲಾವಣೆ ವಿಚಾರ ಬೂದಿ ಮುಚ್ಚಿದ ಕೆಂಡದಂತೆ ಇದೆ. ಹೀಗಾಗಿಯೇ ಈ ವಿಚಾರ ಆಗಾಗ ಚರ್ಚೆಗೆ ಬರ್ತಾನೆ ಇರುತ್ತೆ.

ಸಿಎಂ ಕುರ್ಚಿ ಕದನ ಬೇರೆ ಹಂತಕ್ಕೆ ಹೋಗಬಾರದು ಹೈಕಮಾಂಡ್ ನಾಯಕರು ಮಧ್ಯಪ್ರವೇಶ ಮಾಡಿ, ಸಿಎಂ ಹಾಗೂ ಡಿಸಿಎಂ ಕೂತು ಸಮಸ್ಯೆಯನ್ನ ಬಗೆಹರಿಸಿಕೊಳ್ಳಿ ಎಂಬ ಮಾತನ್ನ ಹೇಳಿದ್ದರು. ಹೀಗಾಗಿಯೇ ಸಿಎಂ ಹಾಗೂ ಡಿಸಿಎಂ ನಡುವೆ ಬ್ರೇಕ್ ಫಾಸ್ಟ್ ಮೀಟಿಂಗ್ ಗಳು ನಡೆದವು. ಇದೆಲ್ಲ ಆದ್ಮೇಲೆ ಸಿಎಂ ಹಾಗೂ ಡಿಸಿಎಂ ಇಬ್ಬರು ಸೇರಿ ಒಗ್ಗಟ್ಟಿನ ಮಂತ್ರವನ್ನು ಜಪಿಸಿದರು. ಆದರೆ ಬೆಳಗಾವಿ ಅಧಿವೇಶನದಲ್ಲಿ ಈ ಸಿಎಂ ಮಂತ್ರ ಮತ್ತೆ ಜೋರಾಯ್ತು. ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರು ಹೇಳಿದ ಒಂದೇ ಒಂದು ಹೇಳಿಕೆ ಡಿಕೆಶಿ ಬಣವನ್ನ ಕೆರಳಿಸಿತ್ತು. ತಣ್ಣಗಾಗಿದ್ದ ಸಿಎಂ ಕುರ್ಚಿ ಕದನ ಮತ್ತೆ ಪ್ರಶ್ನೆ ಕೇಳುವಂತೆ ಮಾಡಿದ್ದೇ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ. ಇದೀಗ ಹೈಕಮಾಂಡ್ ನಾಯಕರ ನಿರ್ಧಾರವೇ ಅಂತಿಮ ಅಂತ ಸಿದ್ದರಾಮಯ್ಯ ಅವರು ಮತ್ತೆ ಪಠಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now