ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು..? ಇಲ್ಲಿದೆ ಹೈಲೇಟ್ಸ್ ಪಾಯಿಂಟ್

ಬೆಂಗಳೂರು; ಸಿಎಂ ಸಿದ್ದರಾಮಯ್ಯ ಅವರ ಇಂದಿ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನ ಘೋಷಿಸಿದ್ದಾರೆ.

* ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಅಭಿಯಾನ ರೂಪದಲ್ಲಿ ಕ್ರಮ. ಅದಕ್ಕಾಗಿ 320 ಕೋಟಿ ರೂ. ಅನುದಾನ.

* ರಾಜ್ಯದಲ್ಲಿ 50 ಹಾಸಿಗೆ ಸಾಮರ್ಥ್ಯದ 14 Critical Care Block ಹಾಗೂ ಬೆಂಗಳೂರು ನಗರದಲ್ಲಿ 100 ಹಾಸಿಗೆ ಸಾಮರ್ಥ್ಯದ ಒಂದು Critical Care Block ಕಟ್ಟಡವನ್ನು ನಿರ್ಮಾಣ.

* ಅಥಣಿ, ಹುನಗುಂದ ಮತ್ತು ಮುಧೋಳದಲ್ಲಿ 50 ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ಸ್ಥಾಪನೆ ಮಾಡಲು ಅನುಮೋದನೆ ನೀಡಲಾಗಿದೆ.

* ಆಶಾಕಿರಣ ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದಡಿ 1.4 ಕೋಟಿ ಜನರಿಗೆ ಕಣ್ಣಿನ ತಪಾಸಣೆ; 3.3 ಲಕ್ಷ ಜನರಿಗೆ ಉಚಿತ ಕನ್ನಡಕ ವಿತರಣೆ ಮತ್ತು 93,800 ಜನರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗಿದೆ.

* ನರವೈಜ್ಞಾನಿಕ ಖಾಯಿಲೆಗಳಿಗೆ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದಡಿ (KaBHI) ನಿಮ್ಹಾನ್ಸ್‌ ಸಹಯೋಗದೊಂದಿಗೆ ಒಟ್ಟು 2.61 ಲಕ್ಷ ತಪಾಸಣೆ ಮಾಡಿ  32,630 ನರರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಈ ಯೋಜನೆಯನ್ನು ಈ ವರ್ಷ ಎಲ್ಲಾ ಹಂತದ ಆರೋಗ್ಯ ಕೇಂದ್ರಗಳಿಗೆ ವಿಸ್ತರಿಸಲು 20 ಕೋಟಿ ರೂ. ಒದಗಿಸಲಾಗಿದೆ. ಅಲ್ಲದೇ, ಮಾನಸಿಕ ಅಸ್ವಸ್ಥರ ಆರೈಕೆಗೆ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಸರ್ಕಾರೇತರ ಸಂಸ್ಥೆಗಳ ಸಹಯೋಗದೊಂದಿಗೆ ಆರೈಕೆ ಕೇಂದ್ರಗಳ ಸ್ಥಾಪನೆ

* 2025-26 ನೇ ಸಾಲಿನಲ್ಲಿ ಈ ಕೆಳಗಿನಂತೆ ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯ ಯೋಜನೆಗಳ ಅನುಷ್ಠಾನ

* ಬೆಂಗಳೂರು ಉತ್ತರ ತಾಲ್ಲೂಕಿನ ವ್ಯಾಪ್ತಿಯಲ್ಲಿ 200 ಹಾಸಿಗೆಯ ಅತ್ಯಾಧುನಿಕ ಮತ್ತು ಸುಸಜ್ಜಿತ ಆಸ್ಪತ್ರೆಯನ್ನು 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ

* ಮಾಲೂರು, ಮಾಗಡಿ, ಕುಶಾಲನಗರ, ಕೊರಟಗೆರೆ, ಜಗಳೂರು, ಸವಣೂರು, ರಾಮದುರ್ಗ ಮತ್ತು ಸವದತ್ತಿ ತಾಲ್ಲೂಕು ಮಟ್ಟದ ಆಸ್ಪತ್ರೆಗಳನ್ನು ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗಳನ್ನು ಒಟ್ಟು 650 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಮಾಡಲಾಗುವುದು.

* ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು.

* ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ 200 ಹಾಸಿಗೆ ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ಸ್ಥಾಪನೆ.

* 20 ತಾಲ್ಲೂಕುಗಳಲ್ಲಿ 9 ಕೋಟಿ ರೂ. ವೆಚ್ಚದಲ್ಲಿ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆಯನ್ನು ನೀಡಲಾಗುವುದು.

suddionenews

Recent Posts

ಈ ರಾಶಿಯವರಿಗೆ ಕೊನೆ ಘಳಿಗೆಯಲ್ಲಿ ಪ್ರಮೋಷನ್ ಭಾಗ್ಯ

ಈ ರಾಶಿಯವರಿಗೆ ಕೊನೆ ಘಳಿಗೆಯಲ್ಲಿ ಪ್ರಮೋಷನ್ ಭಾಗ್ಯ, ಈ ರಾಶಿಯವರಿಗೆ ಆದಾಯ ಕುಂಠಿತ, ಸೋಮವಾರದ ರಾಶಿ ಭವಿಷ್ಯ 17 ಮಾರ್ಚ್…

27 minutes ago

ಅದ್ದೂರಿಯಾಗಿ ನೆರವೇರಿದ ಅಂಬಿ‌ ಮೊಮ್ಮಗನ ನಾಮಕರಣ ; ತಾತನ ಹೆಸರು, ಗಣ್ಯರ ಹಾರೈಕೆ, ಯಾರೆಲ್ಲಾ ಬಂದಿದ್ರು..?

ಬೆಂಗಳೂರು; ರೆಬಲ್ ಸ್ಟಾರ್ ಅಂಬರೀಶ್ ಪುತ್ರನ ನಾಮಕರಣ ಇಂದು ಅದ್ದೂರಿಯಾಗಿ ನೆರವೇರಿದೆ. ಬೆಂಗಳೂರಿನ ಖಾಸಗಿ ಹೊಟೇಲ್ ನೆರವೇರಿದ್ದು, ಮೊಮ್ಮಗನಿಗೆ ತಾತನ…

10 hours ago

ನಮ್ಮದು ಸಾಮರಸ್ಯವನ್ನು ಎತ್ತಿಹಿಡಿಯುವ ಶಾಂತಿಪ್ರಿಯ ದೇಶ : ಲೆಕ್ಸ್ ಫ್ರೀಡ್ಮನ್ ಜೊತೆ ಪ್ರಧಾನಿ ಮೋದಿ ಪಾಡ್‌ಕ್ಯಾಸ್ಟ್

ಸುದ್ದಿಒನ್ : ಪ್ರಧಾನಿ ಮೋದಿ ಮತ್ತು AI ಸಂಶೋಧಕ ಲೆಕ್ಸ್ ಫ್ರೀಡ್ಮನ್ ನಡುವೆ ಆಸಕ್ತಿದಾಯಕ ಪಾಡ್‌ಕ್ಯಾಸ್ಟ್ ನಡೆಯಿತು. ಸ್ವಲ್ಪ ಸಮಯದ…

11 hours ago

ಕುಡಿಯುವ ನೀರಿಗಾಗಿ ಜಗಳ : ಮುರಿದು ಬಿದ್ದ ಮದುವೆ

ಸುದ್ದಿಒನ್, ಹಿರಿಯೂರು, ಮಾರ್ಚ್. 16  : ಆರತಕ್ಷತೆಯ ನಂತರ ಏರ್ಪಡಿಸಿದ್ದ ಭೋಜನದಲ್ಲಿ ಕೊನೆಗೆ ಬಂದ ಕೆಲವರಿಗೆ ಕುಡಿಯುವ ನೀರು ಸಿಗಲಿಲ್ಲ…

11 hours ago

ಸುನೀತಾ ವಿಲಿಯಮ್ಸ್ ಭೂಮಿಗೆ ಬಂದ ಮೇಲೆ ಎದುರಾಗಲಿವೆ ಈ ಆರೋಗ್ಯ ಸಮಸ್ಯೆ..!

    ಬೆಂಗಳೂರು; ಕಡೆಗೂ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಭೂಮಿಗೆ ಬರುವ ಸಮಯ ಹತ್ತಿರವಾಗಿದೆ. ಆದರೆ ಕಳೆದ…

11 hours ago

ನಾಯಕನಹಟ್ಟಿ ಜಾತ್ರೆ : ಬಾರಿ ಮೊತ್ತಕ್ಕೆ ಹರಾಜಾದ ಮುಕ್ತಿ ಬಾವುಟ

ಸುದ್ದಿಒನ್, ಚಳ್ಳಕೆರೆ, ಮಾರ್ಚ್. 16 : ಮಧ್ಯ ಕರ್ನಾಟಕದ ಪವಾಡ ಪುರುಷ, ಕಾಯಕಯೋಗಿ ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವದ ಅದ್ದೂರಿಯಾಗಿ…

12 hours ago