Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಲೋಕಸಭಾ ಆಫರ್ ಗೆ ನಟ ಶಿವರಾಜ್ ಕುಮಾರ್ ಏನಂದ್ರು..?

Facebook
Twitter
Telegram
WhatsApp

ಬೆಂಗಳೂರು: ಇಂದು ನಗರದ ಅರಮನೆ ಮೈದಾನದಲ್ಲಿ ಬೃಹತ್ ಮಟ್ಟದ ಈಡಿಗ ಸಮುದಾಯದ ಸಮಾವೇಶ ನಡೆದಿದೆ. ಈ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಮಧು ಬಂಗಾರಪ್ಪ ಸೇರಿದಂತೆ ರಾಜಕಾರಣಿಗಳು ಭಾಗಿಯಾಗಿದ್ದರು. ನಟ ಶಿವರಾಜ್ಕುಮಾರ್ ಕೂಡ ಸಮಾವೇಶಕ್ಕೆ ಆಗಮಿಸಿದ್ದರು. ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಶಿವಣ್ಣನಿಗೆ ಲೋಕಸಭಾ ಚುನಾವಣೆಯ ಆಫರ್ ನೀಡಿದ್ದರು.

 

ತುಂಬಿದ ವೇದಿಕೆಯಲ್ಲಿ ಡಿಸಿಎಂ ಓಪನ್ ಆಫರ್ ನೀಡಿದಾಗ ಶಿವಣ್ಣ ಅಭಿಮಾನಿಗಳಲ್ಲಿ ಹಲವು ಪ್ರಶ್ನೆಗಳು ಮೂಡಿದ್ದವು. ಈಗಾಗಲೇ ಶಿವಣ್ಣ ಪತ್ನಿ ಗೀತಾ, ಭಾಮೈದ ಮಧು ಬಂಗಾರಪ್ಪ ರಾಜಕೀಯದಲ್ಲಿ ಸಕ್ರೀಯರಾಗಿದ್ದಾರೆ. ಶಿವಣ್ಣ ಏನಾದರೂ ರಾಜಕೀಯಕ್ಕೆ ಬರಬಹುದಾ ಎಂಬ ಪ್ರಶ್ನೆ ಉದ್ಭವಿಸಿತ್ತು. ಇದೀಗ ಆ ಆಫರ್ ಗೆ ಶಿವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

 

‘ನಮ್ಮ ತಂದೆ ಕೊಟ್ಟ ಬಳುವಳಿ ಬಣ್ಣ ಹಚ್ಚೋದು ಮಾತ್ರ. ಗೀತಾ ಶಿವರಾಜ್ ಕುಮಾರ್ ನಿಲ್ಲುತ್ತಾರೆ. ಹೆಂಡತಿ ಆಸೆ ಪಟ್ಟಾಗ ಗಂಡ ನೆರವೇರಿಸುವುದು ಕರ್ತವ್ಯ. ಚುನಾವಣೆಗೆ ನಾನು ನಿಲ್ಲಲ್ಲ’ ಎಂದು ಡಿಸಿಎಂ ಕೊಟ್ಟ ಆಫರ್ ಅನ್ನು ನಯವಾಗಿ ತಿರಸ್ಕರಿಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಇಂದು ನಡೆದ ಸಮಾವೇಶದ ವೇದಿಕೆಯಲ್ಲಿ ಶಿವಣ್ಣನುಗೆ ಟಿಕೆಟ್ ಆಫರ್ ಮಾಡಿದ್ದರು. ಲೋಕಸಭೆಗೆ ರೆಡಿಯಾಗಪ್ಪ ಎಂದು ಹೇಳಿದ್ದೆನೆ. ಯಾವ ಕ್ಷೇತ್ರ ಕೇಳಿದರೂ ಆ ಕ್ಷೇತ್ರದಿಂದ ಟಿಕೆಟ್ ನೀಡುತ್ತೇನೆ. ಸಿನಿಮಾ ಯಾವಾಗ ಬೇಕಾದರೂ ಮಾಡಬಹುದು.‌ಆದರೆ ಪಾರ್ಲಿಮೆಂಟ್ ಗೆ ಹೋಗುವ ಅವಕಾಶ ಎಲ್ಲರಿಗೂ ಸಿಗಲ್ಲ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕೇಳಿದ್ದರು. ಆದರೆ ಡಿಸಿಎಂ ಆಫರ್ ಅನ್ನು ಶಿವಣ್ಣ ತಿರಸ್ಕರಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!