Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ವಾತಂತ್ರ್ಯ ಹೋರಾಟದಲ್ಲಿ ಹೆಡ್ಗೆವಾರ್ ಪಾತ್ರವೇನು..? : ಸಿದ್ದರಾಮಯ್ಯ ಪ್ರಶ್ನೆ

Facebook
Twitter
Telegram
WhatsApp

ಕಲಬುರಗಿ: ಈ ಬಾರಿಯ ಪಠ್ಯ ಪುಸ್ತಕ ಪರಿಷ್ಕರಣೆಯಾಗಿದ್ದು, ಈ ಬಾರಿ ಆರ್ಎಸ್ಎಸ್ ನ ಹೆಡ್ಗೇವಾರ್ ಪಠ್ಯವನ್ನು ಪಾಠದಲ್ಲಿ ಸೇರಿಸಲಾಗಿದೆ. ಇದಕ್ಕೆ ಹಲವರು ವಿರೋಧ ಕೂಡ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯ ಅವರು ಮಾತನಾಡಿದ್ದು, ಪಠ್ಯದಲ್ಲಿ ಹೆಡ್ಗೇವಾರ್ ವಿಚಾರ ಬೇಡ ಎಂದಿದ್ದಕ್ಕೆ ಸ್ಪಷ್ಟನೆ ನೀಡಿದ್ದಾರೆ.

ಗೋಡ್ಸೆ ಯಾರು..? ಅವರು ಆರ್ ಎಸ್ ಎಸ್ ನವರೇ ಅಲ್ವಾ. ಇದರ ಸಂಸ್ಥಾಪಕ ಯಾರು 1925 ನೇ ಇಸವಿಯಲ್ಲಿ ಆರ್ ಎಸ್ ಎಸ್ ಹುಟ್ಟಿತ್ತು. ಆಗ ಸ್ವತಂತ್ರ್ಯ ಹೋರಾಟ ನಡೆಯುತ್ತಿತ್ತಲ್ಲ ಹೆಡ್ಗೇವಾರ್ ದು ಅದರಲ್ಲಿ ಏನು ಪಾತ್ರ..? ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಟ ಮಾಡಿ ಜೈಲಿಗೇನಾದರೂ ಹೋಗಿದ್ದರಾ..? ಅದಕ್ಕೆ ಬೇಡ ಎಂದೆ ನಾನು ಎಂದಿದ್ದಾರೆ.

ಪಠ್ಯ ಆಯ್ಕೆ ಮಾಡುವ ವಿಚಾರದಲ್ಲಿ RSS ನವರು ಇರಬಾರದು ಎಂದು ಹೇಳಲಿಲ್ಲ. ನಮ್ಮ ಮಕ್ಕಳಿಗೆ ಸಂವಿಧಾನದ ಆಶಯಗಳಿದ್ದಾವಲ್ಲ ಅದನ್ನು ಹೇಳಿಕೊಡಬೇಕು. ಸಂತರು, ಸಮಾಜಸುಧಾರಕರು, ಸ್ವಾತಂತ್ರ್ಯ ಹೋರಾಟಗಾರರಿದ್ದಾರೆ ಅವರ ಬಗ್ಗೆ ತಿಳಿಸಿ. ದೇಶಕ್ಕೋಸ್ಕರ ಹೋರಾಟ ಮಾಡಿದವರ ಬಗ್ಗೆ ಹೇಳಿ. ದೇಶಕ್ಕೋಸ್ಕರ ತ್ಯಾಗ, ಬಲಿದಾನ ಮಾಡಿದ್ದಾರೆ, ಸಮಾಜಕ್ಕೋಸ್ಕರ ಜೀವನವೆಲ್ಲಾ ಹೋರಾಟ ಮಾಡಿದ ಬುದ್ಧ, ಬಸವ, ಅಂಬೇಡ್ಕರ್, ಗಾಂಧಿ ಇಂಥವರನ್ನೆಲ್ಲಾ ಮಾಡಿ. ಮಕ್ಕಳಿಗೆ ದೇಶದ ಬಗ್ಗೆ ಪ್ರೀತಿ ಬರಬೇಕು. ಜನರ ಬಗ್ಗೆ ಪ್ರೀತಿ ಬರಬೇಕು. ಮಕ್ಕಳಿಗೆ ದೇಶದ ಬಗ್ಗೆ ಪ್ರೀತಿ ಬರುವಂತೆ ಮಾಡಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

error: Content is protected !!