ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಸಿದ್ದರಾಮಯ್ಯ ಯಾವ ಕ್ಷೇತ್ರದಲ್ಲಿ ನಿಲ್ಲುತ್ತಾರೋ ಆ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಟ್ರಾಂಗ್ ಕ್ಯಾಂಡಿಡೇಟ್ ಹಾಕುವುದಕ್ಕೆ ಬಿಜೆಪಿ ನಿರ್ಧಾರ ಮಾಡಿದೆ ಎನ್ನಲಾಗಿದೆ. ಅದರಲ್ಲೂ ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಅವರನ್ನೇ ನಿಲ್ಲಿಸಬೇಕೆಂಬ ಚರ್ಚೆ ನಡೆದಿದೆ ಎನ್ನಲಾಗಿದೆ. ಅದಕ್ಕೆ ಪುಷ್ಟಿ ನೀಡುವಂತ ಸನ್ನಿವೇಶಗಳು ಸೃಷ್ಟಿಯಾಗಿವೆ. ಈಗ ಈ ವಿಚಾರದಲ್ಲಿ ಶೋಭಾ ಕರಂದ್ಲಾಜೆ ವಿಷಯ ಬಂದಿದೆ. ಕಾಂಗ್ರೆಸ್ ಮುಖಂಡ ಈ ಸಂಬಂಧ ಹೊಸ ಬಾಂಬ್ ಹಾಕಿದ್ದಾರೆ.
ರಮೇಶದ ಬಾಬು ಈ ಬಗ್ಗೆ ಮಾತನಾಡಿದ್ದು, ವಿಜಯೇಂದ್ರ ಅವರನ್ನು ವರುಣಾ ಕ್ಷೇತ್ರದಿಂದ ಕಣಕ್ಕಿಳಿಸಲು, ಶೋಭಾ ಕರಂದ್ಲಾಜೆ ಅವರಿಂದ ಒತ್ತಡ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರು, ಬಿಎಸ್ವೈಗೆ ಕಣ್ಣೀರು ಹಾಕಿಸಿದರು ಎಂದಿದ್ದಾರೆ.
ಪುತ್ರನಿಗೆ ಎಂಎಲ್ಸಿ ಮಾಡಿ, ಮಂತ್ರಿ ಮಾಡಬೇಕು ಎಂದುಕೊಂಡರು. ಆದರೆ ಅದು ಆಗಲಿಲ್ಲ. ಈಗ ಯಡಿಯೂರಪ್ಪ ಅವರಿಗೆ ಮತ್ತೆ ಆತಂಕ ಶುರುವಾಗಿದೆ. ಶಿಕಾರಿಪುರದ ಟಿಕೆಟ್ ಸಿಗುತ್ತೋ ಸಿಗಲ್ವೋ ಎಂಬ ಅನುಮಾನ ಅವರನ್ನು ಕಾಡುತ್ತಿದೆ. ಶಿಕಾರಿಪುರದಿಂದ ಸ್ಪರ್ಧೆ ಮಾಡುತ್ತಾರೆ, ವಿಜಯೇಂದ್ರ ಅವರಿಗೆ ಆಶೀರ್ವಾದ ಮಾಡಿ ಎಂದು ಹೇಳಿದ್ದರು.
ಈಗ ವರುಣಾದಿಂದ ಸ್ಪರ್ಧೆ ಮಾಡುವುದಕ್ಕೆ ಒತ್ತಡ ಹಾಕುತ್ತಿದ್ದಾರೆ. ವಿಜಯೇಂದ್ರ ಮೇಲೆ ಹಲವು ಪ್ರಕರಣಗಳಿವೆ. ಆ ಪ್ರಕರಣಗಳನ್ನು ಕ್ಲಿಯರ್ ಮಾಡಿಕೊಡುತ್ತೇವೆ. ಈ ಎಲೆಕ್ಷನ್ ಮುಗಿಸಿಕೊಡಿ ಎಂದು ಕೇಳಿದ್ದಾರೆ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್