Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯದುವೀರ್ ಅವರ ಚುನಾವಣಾ ಸ್ಪರ್ಧೆಗೆ ರಾಜಮಾತೆ ಪ್ರಮೋದಾ ದೇವಿ ಏನಂದ್ರು..?

Facebook
Twitter
Telegram
WhatsApp

ಮೈಸೂರು: ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೇ ಮೈಸೂರು ಕ್ಷೇತ್ರ ಮುನ್ನೆಲೆಗೆ ಬಂದಿದೆ. ಬಿಜೆಪಿಯಿಂದ ಸ್ಪರ್ಧಿಗಳ ವಿಚಾರವೇ ಸಿಕ್ಕಾಪಟ್ಟೆ ಸುದ್ದಿಯಾಗುತ್ತಿದೆ. ಹಾಲಿ ಸಂಸದ ಪ್ರತಾಪ್ ಸಿಂಹ, ಮೈಸೂರು ಹಾಗೂ ಕೊಡಗು ಭಾಗದಲ್ಲಿ ಗುರುತಿಸಿಕೊಂಡವರು. ತಮ್ಮದೇ ಚಾರ್ಮ್ ಹೊಂದಿರುವವರು. ಆದರೆ ಈ ಬಾರಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯ ಆಯ್ಕೆ ಬದಲಾವಣೆಯಾಗುತ್ತಿದೆ. ಬಿಜೆಪಿಯಿಂದ ಪ್ರತಾಪ್ ಸಿಂಹ ಬದಲಿಗೆ, ಯದುವೀರ್ ಅವರಿಗೆ ಟಿಕೆಟ್ ಕೊಡಲು ಪಕ್ಷ ನಿರ್ಧಾರ ಮಾಡಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಸಂಬಂಧ ರಾಜಮಾತೆ ಪ್ರಮೋದಾ ದೇವಿ ಕಡೆಯಿಂದಾನೂ ಗ್ರೀನ್ ಸಿಗ್ನಲ್ ಸಿಕ್ಕಿದೆ.

 

ಲೋಕಸಭಾ ಚುನಾವಣೆಯ ಸಂಬಂಧ ಯದುವೀರ್ ಅವರಿಗೆ ಡಬ್ಬಲ್ ಗ್ರೀನ್ ಸಿಗ್ನಲ್ ಸಿಕ್ಕಿದೆ. ರಾಜಮಾತೆ ಪ್ರಮೋದಾ ದೇವಿಯವರು ಕೂಡ ಚುನಾವಣೆಗೆ ನಿಲ್ಲುವುದಕ್ಕೆ ಅಸ್ತು ಎಂದಿದ್ದಾರೆ. ಬಿಜೆಪಿ ಕೂಡ ಯದುವೀರ್ ಅವರಿಗೆ ಟಿಕೆಟ್ ನೀಡುವುದಕ್ಕೆ ಉತ್ಸುಕರಾಗಿದೆ.

 

ಪ್ರಸಕ್ತ ರಾಜಕೀಯ ಬೆಳವಣಿಗೆಯ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಸಭೆ ಬಳಿಕ ಮಗನಿಗೆ ಚುನಾವಣೆಯ ಬಗ್ಗೆ ಸ್ಪರ್ಧಿಸುವಂತೆ ತಿಳಿಸಿದ್ದಾರೆ. ಈ ಬಗ್ಗೆ ಕಾಶಿಯಿಂದ ಬಂದ ರಾಜಮಾತೆ ಮಾತನಾಡಿದ್ದು, ಮೈಸೂರು ಲೋಕಸಭಾ ಚುನಾವಣೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪರ್ಧಿಸುವ ಸುದ್ದಿ ಸಾಕಷ್ಟು ಚರ್ಚೆಯಾಗುತ್ತಿದೆ. ಮೈಸೂರು ಮಹಾರಾಜರು ಚುನಾವಣೆಯಲ್ಲಿ ಸ್ಪರ್ಧಿಸುತ್ತಾ ಇರೋದು ಇದೇ ಮೊದಲಲ್ಲ. ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಆರು ಬಾರಿ ಚುನಾವಣೆಗೆ ನಿಂತಿದ್ದರು. 1984, 1989, 1996, 1999 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಲೋಕಸಭೆಗೆ ಆಯ್ಕೆಯಾಗಿದ್ದರು ಎಂದು ತಿಳಿಸಿದ್ದಾರೆ. ಈ ಮೂಲಕ ಯದುವೀರ್ ಅವರ ಸ್ಪರ್ಧೆಗೆ ಅಸ್ತು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!