Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಯಾವತಿ ಮುಗಿಸಿದ ಬಿಜೆಪಿಗೆ ಹೆಚ್ಡಿಕೆ ಯಾವ ಲೆಕ್ಕ : ಕಾಂಗ್ರೆಸ್ ಶಾಸಕ ಬಾಲಕೃಷ್ಣ

Facebook
Twitter
Telegram
WhatsApp

ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲು ಸಜ್ಜಾಗಿವೆ. ಬಿಜೆಪಿ ಬಗ್ಗೆ ಇದೀಗ ಕಾಂಗ್ರೆಸ್ ಶಾಸಕ ಹೆಚ್ ಸಿ ಬಾಲಕೃಷ್ಣ ಕಿಡಿಕಾರಿದ್ದಾರೆ. ಮಾಯಾವತಿ ಮುಗಿಸಿದ ಬಿಜೆಪಿಗೆ ಹೆಚ್ ಡಿ ಕುಮಾರಸ್ವಾಮಿ ಯಾವ ಲೆಕ್ಕ ಎಂದಿದ್ದಾರೆ.

ಮಾಗಡಿ ತಾಲೂಕಿನ ತೂಬಿನಕೆರೆಯಲ್ಲಿ ಮಾತನಾಡಿದ ಬಾಲಕೃಷ್ಣ ಅವರು, ಬಿಜೆಪಿಯವರು ಒಂಥರಾ ಬ್ರಿಟಿಷರು ಇದ್ದ ಹಾಗೇ. ಯಾರು ಪ್ರಬಲರಾಗಿರುತ್ತಾರೋ ಅವರ ಮಧ್ಯೆ ಗುಂಪು ಕಟ್ಟಿ, ಎತ್ತಿಕಟ್ಟಿ ಒಡೆದಾಳುವಂತೆ ಮಾಡುತ್ತಾರೆ. ಒಡೆದಾಳೋ ನೀತಿಯನ್ನು ಬಿಜೆಪಿ ನಾಯಕರು ಅನುಸರಿಸುತ್ತಿದ್ದಾರೆ. ಉತ್ತರ ಪ್ರದೇಶದ ಬಿಎಸ್ಪಿ ರೀತಿ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷವನ್ನು ಅವರು ಮಾಡದಿದ್ದರೆ ನಾನು ನನ್ನ ಹೆಸರನ್ನು ಬದಲಾಯಿಸಿಕೊಳ್ಳುತ್ತೇನೆ. ಜೆಡಿಎಸ್ ನಾಯಕರು ಈಗಲೇ ಎಚ್ಚೆತ್ತುಕೊಳ್ಳಬೇಕು. ಇಲ್ಲವಾದರೆ ಅವರ ಅಸ್ತಿತ್ವವನ್ನು ಸಂಪೂರ್ಣವಾಗಿ ಮುಗಿಸುವ ಕೀರ್ತಿ ಬಿಜೆಪಿಯವರಿಗೆ ಸಲ್ಲುತ್ತದೆ ಎಂದಿದ್ದಾರೆ.

ಮಾಯಾವತಿಯೇ ಮುಂದಿನ ಪ್ರಧಾನಿ ಎಂಬಂತೆ ಹೊರಹೊಮ್ಮಿದ್ದರು. ಆದರೆ ಅಂಥವರನ್ನೇ ಉತ್ತರಪ್ರದೇಶದಲ್ಲಿ ಹೆಸರಿಲ್ಲದಂತೆ ಬಿಜೆಪಿ ಮಾಡಿ, ಅಧಿಕಾರ ಮಾಡುತ್ತಿದ್ದಾರೆ. ಇನ್ನೂ ಕರ್ನಾಟಕದ ಕುಮಾರಣ್ಣ ಯಾವ ಲೆಕ್ಕ. ಕುಮಾರಣ್ಣನಿಗೆ ನಾವೇ ಕಾಣುತ್ತೇವೆ. ನಮ್ಮನ್ನು ನೋಡಿದ ತಕ್ಷಣ ಬಿಜೆಪಿಯವರನ್ನ ತಬ್ಬಿಕೊಳ್ಳುತ್ತಾರೆ. ಅನೇಕ ವರ್ಷಗಳಿಂದ ನಾವು ಜಾತ್ಯಾತೀತ ಎಂದು ಹೇಳಿ ಮಾಜಿ ಪ್ರಧಾನಿ ದೇವೇಗೌಡರನ್ನು ಇಳಿವಯಸ್ಸಿನಲ್ಲಿ ಕೋಮುವಾದಿ ಮಾಡಿಬಿಟ್ಟರು ಎಂದು ಶಾಸಕರು ಆರೋಪ ಮಾಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

error: Content is protected !!