Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್ ಮಾಡಿರುವ ಪ್ಲ್ಯಾನ್ ಏನು..? ಒಂದು ದಿನ ಮುಂಚೆ ಆಗುವ ಕಾರ್ಯಕ್ರಮಗಳೇನು..?

ಡಿಕೆ ಶಿವಕುಮಾರ್
---Advertisement---

 

ಬೆಂಗಳೂರು: ಮೂಡಾ ಹಗರಣ ವಿರೋಧಿಸಿ ಬಿಜೆಪಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದೆ. ಈ ವೇಳೆ ಪಾದಯಾತ್ರೆಯಲ್ಲಿ ನೂರಾರು ಜನ ಸೇರಬಹುದು. ಹೀಗಾಗಿ ಕಾಂಗ್ರೆಸ್ ಟಕ್ಕರ್ ಕೊಡಲು ಬೇರೆಯದ್ದೇ ಪ್ಲ್ಯಾನ್ ಮಾಡಿದೆ. ಕಾಂಗ್ರೆಸ್ ನಿಂದ ಕಾರ್ಯಕ್ರಮ ನಡೆಯಲಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ ಇಂದಿನಿಂದ ಬಿಜೆಪಿ ನಾಯಕರ ನೈತಿಕತೆ ಪ್ರಶ್ನಿಸುವ ಸಭೆ‌ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ಕಾಲದಲ್ಲಿ ಆಗಿರುವ ಅಕ್ರಮ, ಕೇಂದ್ರದಿಂದ ರಾಜ್ಯಕ್ಕೆ ಆದ ಅನ್ಯಾಯ, ಸಂವಿಧಾನ ಸಂಸ್ಥೆಗಳ ದುರ್ಬಳಕೆ ಬಗ್ಗೆ ಪ್ರಶ್ನೆ ಮಾಡಲಾಗುತ್ತದೆ. ಇಂದಿನಿಂದ ಬಿಡದಿಯಲ್ಲಿ ಸಭೆ ನಡೆಸಲಾಗುತ್ತದೆ. ಬಿಜೆಪಿ ಅವಧಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ ಪ್ರಶ್ನೆ ಮಾಡಿ ಜನರಿಗೆ ತಿಳಿಸುತ್ತೇವೆ.

ಬಿಜೆಪಿ ನಾಯಕರು ಎಲ್ಲೆಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೋ ಅಲ್ಲೆಲ್ಲಾ ಒಂದು ದಿನ ಮುಂಚಿತವಾಗಿ ಈ ಕಾರ್ಯಕ್ರಮ ಮಾಡುತ್ತೇವೆ. ಬಿಜೆಪಿ ನಾಯಕರು ನಮ್ಮ ಪ್ರಶ್ನೆಗಳಿಗೆಲ್ಲ ಉತ್ತರ ನೀಡಬೇಕು. ಬಿಜೆಪಿ ನಾಯಕರು ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಯಾವ ರೀತಿ ಪ್ರಯತ್ನ ಮಾಡುತ್ತಿದ್ದಾರೆಂದು ಜನರಿಗೆ ತಿಳಿಸುತ್ತೇವೆ.

ಸಚಿವರು ಪ್ರತಿನಿತ್ಯ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಶಾಸಕರು ಹಾಗೂ ಕಾರ್ಯಕರ್ತರು ಕೂಡ ಭಾಗವಹಿಸಬೇಕೆಂದು ಮನವಿ ಮಾಡುತ್ತಿದ್ದೇವೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪಾದಯಾತ್ರೆ ಘೋಷಣೆ ಮಾಡಿದ್ದಾರೆ. ಇಷ್ಟು ದಿನ ಜೆಡಿಎಸ್ ನಾಯಕರು ಈ ವಿಚಾರದಲ್ಲಿ ಅತಂತ್ರರಾಗಿದ್ದರು. ಜೆಡಿಎಸ್ ನವರು ಈ ಪಾದಯಾತ್ರೆಯಲ್ಲಿ ಭಾಗವಹಿಸುವುದಿಲ್ಲ ಎಂದಿದ್ದರು. ಬಿಜೆಪಿಯವರು ಪಾದಯಾತ್ರೆಯ ವಿಚಾರದಲ್ಲಿ ಗೊಂದಲದಲ್ಲಿದ್ದರು ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment