Categories: Home

ದಾವಣಗೆರೆಯಲ್ಲಿ ಕ್ವಿಂಟಾಲ್ ಅಡಿಕೆಯ ಬೆಲೆ ಇಂದು ಎಷ್ಟಿದೆ..?

 

ದಾವಣಗೆರೆ; ಅಡಿಕೆ ಬೆಲೆ ಕೂಡ ಒಂದೊಮದು ಮಾರುಕಟ್ಟೆಯಲ್ಲಿ ಒಂದೊಂದು ರೀತಿ ಇರಲಿದೆ. ದಾವಣಗೆರೆಯಲ್ಲಿ ಮೆಕ್ಕೆಜೋಳ ಮತ್ತು ಭತ್ತವನ್ನ ಪ್ರಮುಖ ಬೆಳೆಯಾಗಿ ಬೆಳೆಯುತ್ತಾರೆ. ಆದರೆ ಅಡಿಕೆ ಬೆಳೆಗಾರರು ಸಹ ಹೆಚ್ಚಿನ ಸಂಖ್ಯೆಯಲ್ಲಿಯೇ ಇದ್ದಾರೆ. ಹೀಗಾಗಿ ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ ಎಷ್ಟಕ್ಕೆ ಹೋಯ್ತು ಎಂಬ ಕುತೂಹಲ ಇದ್ದೆ ಇರುತ್ತದೆ. ಆ ಮಾಹಿತಿ ಇಲ್ಲಿದೆ ನೋಡಿ.

ಕ್ವಿಂಟಾಲ್ ಅಡಿಕೆಯ ಗರಿಷ್ಠ ದರ 52,279 ರೂಪಾಯಿ ಇದೆ. ಕಳೆದ ದಿನದ ಮಾರುಕಟ್ಟೆಯ ದರಕ್ಕೆ ಹೋಲಿಕೆ ಮಾಡಿದರೆ ಸುಮಾರು 179 ರೂಪಾಯಿ ಏರಿಕೆಯಾಗಿದೆ. ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ, ಜಗಳೂರು ತಾಲೂಕಿನಲ್ಲಿ ಅಡಿಕೆ ಪ್ರಮುಖ ಬೆಳೆಯಾಗಿದೆ. ಬೇಸಿಗೆ ಆಗಿರೋ ಕಾರಣ ಬಿಸಿಲು ಜಾಸ್ತಿ, ಈ ಬಿರು ಬೇಸಿಗೆಯಲ್ಲಿ ಅಡಿಕೆ ಗಿಡಗಳನ್ನ ಕಾಪಾಡಿಕೊಳ್ಳುವುದೇ ರೈತನಿಗೆ ಒಂದು ದೊಡ್ಡ ಟಾಸ್ಕ್ ಆಗಿದೆ. ಹೀಗಾಗಿ ಅಡಿಕೆ ಬೆಲೆ ಜಾಸ್ತಿಯಾಗಿರೋದಕ್ಕೆ ರೈತನ ಮೊಗದಲ್ಲಿ ಕೊಂಚ ನೆಮ್ಮದಿಯ ನಗು ಕಾಣಿಸುತ್ತಿದೆ.

ಚನ್ನಗಿರಿ ಅಡಿಕೆ ಧಾರಣೆ ಗರಿಷ್ಠ 52,279 ರೂಪಾಯಿ ಆಗಿದೆ. ಹಾಗೇ ಕನಿಷ್ಠ 43,000 ರೂಪಾಯಿ ಇತ್ತು. ಬೆಟ್ಟೆ ಅಡಿಕೆ ಗರಿಷ್ಠ 24,786 ರೂಪಾಯಿ ಇದೆ. ಗರಿಷ್ಠ ದರ 17,659 ರೂಪಾಯಿ ಇತ್ತು. ಇನ್ನು ಜನವರಿಯಲ್ಲಿ 52 ಸಾವಿರದ ಒಳಗಿದ್ದ ಅಡಿಕೆ, ಫೆಬ್ರವರಿಯಲ್ಲಿ 53 ಸಾವಿರದ ಗಡಿ ದಾಟಿತ್ತು. ಮಾರ್ಚ್ ಮೊದಲ ವಾರದಲ್ಲಿಯೇ ಅಡಿಕೆ ಬೆಳೆಗಾರರಿಗೆ ಕೊಂಚ ಸಮಾಧಾನವಾಗುವಂತ ದರ ಕಂಡು ಬಂದಿದೆ. ಅಡಿಕೆ ದರ ಹೀಗೆ ಏರಿಕೆಯಾದರೆ ರೈತರಿಗೂ ಒಂದು ನೆಮ್ಮದಿ. ಯಾಕಂದ್ರೆ ಅಡಿಕೆ ಬೆಳೆಗೆ ನೀರನ್ನ ಒದಗಿಸೋದು ಒಂದೇ ಸವಾಲಿನ ಕೆಲಸವಲ್ಲ, ಜೊತೆಗೆ ರೋಗಗಳಿಂದಾನು ಅಡಿಕೆ ಬೆಳೆಯನ್ನ ಕಾಪಾಡಿಕೊಳ್ಳಬೇಕಾಗಿದೆ.

suddionenews

Recent Posts

ಹುಬ್ಬಳ್ಳಿಯಲ್ಲಿ ಕಣ್ಣೀರುಡುತ್ತಾ ಜೈನ ಮುನಿ ಸರ್ಕಾರಕ್ಕೆ ಹೇಳಿದ್ದೇನು..?

ಹುಬ್ಬಳ್ಳಿ; ಜೈನ ಸಮುದಾಯದವರು ಸರ್ಕಾರಕ್ಕೆ ಒಂದಷ್ಟು ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಅದರಲ್ಲೂ ಜೈನ ನಿಗಮ ಸ್ಥಾಪನೆ ಮಾಡುವ ಬಗ್ಗೆ ಹೆಚ್ಚು ಒತ್ತು…

9 hours ago

ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್ ; ಅಶ್ವಿನಿ ಅವರಿಂದ ವಿಶೇಷ ಕಾರ್ಯಕ್ಕೆ ಚಾಲನೆ

ಬೆಂಗಳೂರು; ಇಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ 50ನೇ ಹುಟ್ಟುಹಬ್ಬ. ಕುಟುಂಬಸ್ಥರು, ಆಪ್ತರು, ಅಭಿಮಾನಿಗಳೆಲ್ಲಾ ಸಮಾಧಿ ಬಳಿ ಹೋಗಿ…

10 hours ago

ಲಸಿಕೆಗಳು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸುತ್ತವೆ : ಎನ್.ಎಸ್.ಮಂಜುನಾಥ

  ಚಿತ್ರದುರ್ಗ. ಮಾರ್ಚ್17: ಲಸಿಕೆಗಳು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸುತ್ತವೆ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಹೇಳಿದರು. ನಗರದ…

11 hours ago

ಅಗ್ನವೀರ್ ನೇಮಕಾತಿ ಅರ್ಜಿ ಆಹ್ವಾನ

ಚಿತ್ರದುರ್ಗ.ಮಾರ್ಚ್.17:ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ…

11 hours ago

ಚಿತ್ರದುರ್ಗ : ಮಾರ್ಚ್ 18 ರಿಂದ 21 ರವರೆಗೆ ಕಣಿವೆಮಾರಮ್ಮನ ಜಾತ್ರಾ ಮಹೋತ್ಸವ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

12 hours ago

ನೋಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೆ ತುರುವನೂರಿನ ವಿರಾಟ್ ಆಂಜನೇಯ ಸ್ವಾಮಿ ರೇಖಾಚಿತ್ರ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

12 hours ago