Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಎದುರು  ಪ್ರತಿಭಟನೆ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿಗೆ ಕಾರಣವೇನು ?

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.20: ಪ್ರಜಾಪ್ರಭುತ್ವ ಸಾಮಾನ್ಯ ನಾಗರೀಕರ ಹೋರಾಟ ಸಮಿತಿಯವರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಕೆಲವು ನಿಮಿಷಗಳ ಕಾಲ ಮಾತಿನ ಜಟಾಪಟಿ ನಡೆಯಿತು.

ಕಾಲಿಲ್ಲದೆ ನೆಲದಲ್ಲಿ ತೆವಳುವವರು, ತ್ರಿಚಕ್ರ ವಾಹನದಲ್ಲಿ ಬಂದವರು, ಅಂಧರನ್ನು ಜಿಲ್ಲಾಧಿಕಾರಿ ಕಚೇರಿ ಆವರಣದೊಳಗೆ ಬಿಡದೆ ಬ್ಯಾರಿಕೇಡ್‍ಗಳನ್ನು ಅಡ್ಡವಿಟ್ಟು ಪೊಲೀಸರು ತಡೆದಾಗ ಪ್ರತಿಭಟನಾಕಾರರಿಗೆ ಬೆಂಬಲವಾಗಿ ಬಂದಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ವಿಕಲಚೇತನರಿಗೆ ವಿಶೇಷ ಆದ್ಯತೆ ನೀಡಿ ಅವರ ಕಷ್ಟ-ಸಮಸ್ಯೆಗಳನ್ನು ಆಲಿಸಬೇಕಾಗಿರುವ ನೀವುಗಳೆ ಈ ರೀತಿ ಹೀನಾಯವಾಗಿ ನಡೆಸಿಕೊಂಡರೆ ಇನ್ನು ಯಾರ ಬಳಿ ಹೋಗಿ ಅವರು ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕು. ಮನುಷ್ಯತ್ವವಿರುವ ಯಾರು ಈ ರೀತಿ ನಡೆದುಕೊಳ್ಳುವುದಿಲ್ಲ ಎಂದು ಏರುಧ್ವನಿಯಲ್ಲಿ ಪ್ರಶ್ನಿಸಿದರು?

ಜಿಲ್ಲಾಡಳಿತ ಅಂಗವಿಕಲರನ್ನು ನಿರ್ಲಕ್ಷೆಯಿಂದ ಕಾಣಬಾರದು. ಕನಿಷ್ಟಪಕ್ಷ ನೆರಳಿನಲ್ಲಾದರೂ ಕೂರಲು ಅವಕಾಶಮಾಡಿಕೊಡಬೇಕು. ವಿಕಲಚೇತನರೆಂದರೆ ಉಗ್ರಗಾಮಿಗಳು, ಭಯೋತ್ಪಾದಕರಲ್ಲ. ಮೊದಲು ಮಾನವೀಯತೆಯಿಂದ ನಡೆದುಕೊಳ್ಳುವುದನ್ನು ಕಲಿಯಿರಿ ಎಂದು ತಾಕೀತು ಮಾಡಿದರು.

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರ ಖಾಸಗಿರಕರಣವನ್ನು ರದ್ದುಗೊಳಿಸಿ ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಅಕ್ಕಪಕ್ಕ ರಾಜ್ಯಗಳಲ್ಲಿ ಗೃಹರಕ್ಷಕ ದಳದವರನ್ನು ಸರ್ಕಾರಿ ನೌಕರರನ್ನಾಗಿ ನೇಮಕ ಮಾಡಿಕೊಂಡಿರುವಂತೆ ನಮ್ಮ ರಾಜ್ಯದಲ್ಲಿಯೂ ಹೋಂಗಾರ್ಡ್‍ಗಳನ್ನು ಖಾಯಂಗೊಳಿಸಬೇಕು.

ಸರ್ಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿರುವವರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಒಟ್ಟು ಒಂಬತ್ತು ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ನೀಡಿದರು.

ಕರುನಾಡ ವಿಜಯಸೇನೆ ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ, ವಿಶ್ವನಾರಾಯಣಮೂರ್ತಿ, ಅಂಗವಿಕಲ ಜೈಪ್ರಕಾಶ್, ಅನೇಕ ಅಂಧರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...