Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುಮಾರಸ್ವಾಮಿಗೂ ಗ್ಯಾರಂಟಿಗೂ ಏನು ಸಂಬಂಧ : ಡಿಕೆಶಿ ಪ್ರಶ್ನೆ

---Advertisement---

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೂ ಕುಮಾರಸ್ವಾಮಿಗೂ ಏನು ಸಂಬಂಧ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಇಂದು ಬೆಳಗ್ಗೆನೆ ಸುದ್ದಿಗೋಷ್ಟಿ ನಡೆಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ, ಕಾಂಗ್ರೆಸ್ ನ ಗ್ಯಾರಂಟಿಗಳ ಬಗ್ಗೆ ಹರಿಹಾಯ್ದಿದ್ದರು. ಗ್ಯಾರಂಟಿಗಳಿಗೆ ಮರುಳಾಗಬೇಡಿ ಎಂದು ಹೇಳಿದ್ದರು.

ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್, ಗ್ಯಾರಂಟಿ ಯೋಜನೆಗಳು ತಲುಪಿವೆಯೇ ಎಂಬುದನ್ನು ಜನರ ಬಳಿ ಕೇಳಿ ತಿಳಿದುಕೊಳ್ಳಬೇಕು. ಕುಮಾರಸ್ವಾಮಿಗೆ ಏನು ಗೊತ್ತಿದೆ..? ಅವರೇನು ಫಲಾನುಭವಿಯೆ..? ಅವರ ಪಂಚರತ್ನ ಯೋಜನೆ ಇಂಪ್ಲಿಮೆಂಟ್ ಮಾಡುವುದಕ್ಕೆ ಆಗಲಿಲ್ಲ. ಚನ್ನಪಟ್ಟಣ ಮತದಾರರ ಬಳಿ ನಾನೇ ಮಾತನಾಡಿದ್ದೀನಿ. ಅವರ ಬಳಿಯೇ ಕೇಳಿದ್ದರೆ, ಕುಮಾರಸ್ವಾಮಿಗೆ ತಿಳಿಯುತ್ತಾ ಇತ್ತು.

ಗೃಹಲಕ್ಷ್ಮೀ ಯೋಜನೆಯಲ್ಲಿ ಶೇಕಡ 5ರಷ್ಟು ಮಾತ್ರ ತೊಂದರೆಯಾಗಿದೆ. ಪಾಪ ಅವರು ಮಾತನಾಡುತ್ತಿದ್ದಾರೆ ಮಾತನಾಡಲಿ. ಬಡವರ, ಹೆಣ್ಣುಮಕ್ಕಳ ಕಷ್ಟ ಅವರಿಗೆ ಗೊತ್ತಾಗಲ್ಲ. ದಸರಾಗೆ ಬಂದಿದ್ದ ಜನ ನೋಡಿದರೇನೆ ಗೊತ್ತಾಗುತ್ತದೆ. ಗ್ಯಾರಂಟಿ ಯೋಜನೆಗಳಿಂದ ಜನ ಹಬ್ಬ ಆಚರಿಸುತ್ತಿದ್ದಾರೆ. ಕುಮಾರಸ್ವಾಮಿ ಬಹಳ ಅರ್ಜೆಂಟ್ ನಲ್ಲಿ ಇದ್ದಾರೆ. ಅಷ್ಟಕ್ಕೂ ಕಾಂಗ್ರೆಸ್ ಗೂ ಕುಮಾರಸ್ವಾಮಿಗೂ ಏನು ಸಂಬಂಧ. ರಾಜ್ಯದ ಜನತೆ ಕಾಂಗ್ರೆಸ್ ಸರ್ಕಾರಕ್ಕೆ ಆಶೀರ್ವಾದ ಮಾಡಿದ್ದಾರೆ. ಹೈಕಮಾಂಡ್ ಸಿಎಂ ಸ್ಥಾನ ನೀಡಿದೆ. ಹೈಕಮಾಂಡ್ ಹೇಳಿದ್ದನ್ನು ನಾವೂ ಪಾಲಿಸುತ್ತೇವೆ ಎಂದು ಕುಮಾರಸ್ವಾಮಿ ಅವರ, ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ನೋಟೀಸ್ ಮೇಲೆ ಇಟ್ಟಿದೆ ಎಂಬ ಮಾತಿಗೆ ತಿರುಗೇಟು ನೀಡಿದ್ದಾರೆ.

 

ಇದೆ ವೇಳೆ ಬಿಜೆಪಿಯಲ್ಲಿ ಬಿವೈ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿರುವ ಬಗ್ಗೆ ಮಾತನಾಡಿ, ವಿಜಯೇಂದ್ರಗೆ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ. ಇದರ ಜೊತೆಗೆ ಕುಮಾರಸ್ವಾಮಿ ಅವರಿಗೂ ಒಳ್ಳೆಯದಾಗಲಿ ಎಂದು ಬಯಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment