Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೆಡಿಎಸ್ ನವರಿಗೆ ಯಾವ ಸಿದ್ದಾಂತ ಇದೆ: ಸಿದ್ದರಾಮಯ್ಯ ಪ್ರಶ್ನೆ

Facebook
Twitter
Telegram
WhatsApp

ಬೆಂಗಳೂರು: ಜೆಡಿಎಸ್ನವರು ಏನೇ ಮಾಡಲಿ, ಅವರು ಬಿಜೆಪಿ ಜೊತೆಗೇ ಸೇರಿಕೊಂಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಈ ವೇಳೆ ಮಾಧ್ಯ,ಮಗಳ ಜೊತೆಗೆ ಮಾತನಾಡಿದ ಅವರು, ಇವರಿಗೆ ಯಾವ ಸಿದ್ಧಾಂತವಿದೆ. ಅಲ್ಪಸಂಖ್ಯಾತರು ಬಹಳ ಬುದ್ಧಿವಂತರಿದ್ದಾರೆ. ಜೆಡಿಎಸ್ ನವರಿಗೆ ಅಷ್ಟು ಈಸಿಯಾಗಿ ಒಲಿಯಲ್ಲ. ಬಿಜೆಪಿ ಜೊತೆ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ ಎಂದರು.

ಇನ್ನೂ ಬಿಜೆಪಿ ಜೊತೆ ಸೇರಿದ ಮೇಲೆ ಸೆಕ್ಯೂಲರ್ ಆಗ್ತಾರಾ? ಜೆಡಿಎಸ್ ಜಾತ್ಯಾತೀತ ಪಾರ್ಟಿಯಲ್ಲ. ಪ್ರಾದೇಶಿಕ ಪಾರ್ಟಿ ನಿಜ. ಆದರೆ, ಸೆಕ್ಯೂಲರ್ ಅಲ್ಲ. ಹೆಸರು ಮಾತ್ರ ಜಾತ್ಯಾತೀತ. ನಡವಳಿಕೆ ಮಾತ್ರ ಕೋಮುವಾದಿ ಎಂದು ಹರಿಹಾಯ್ದಿದ್ದಾರೆ.ಸಿಎಂ ಇಬ್ರಾಹಿಂ ಜೆಡಿಎಸ್ ಸೇರುವ ವಿಚಾರ ಕುರಿತು ಮಾತನಾಡಿ, ನಾನು ಸಿಎಂ ಇಬ್ರಾಹಿಂ ಬಗ್ಗೆ ಮಾತನಾಡಲ್ಲ. ಅವರು ಕಾಂಗ್ರೆಸ್ ಎಂಎಲ್ ಸಿ ಅಷ್ಟೇ ಎಂದರು.
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಜೈಲಿಗೆ ಕಳಿಸ್ತೇನೆಂಬ ಸಚಿವ ಕೆ. ಸುಧಾಕರ್ ಹೇಳಿಕೆ ವಿಚಾರವಾಗಿ ಮಾತನಾಡಿ, ಅಧಿಕಾರದ ಮದ ಅವರಿಗಿದೆ. ಅಧಿಕಾರ ಶಾಶ್ವತ ಅಂತ ತಿಳಿದುಕೊಂಡಿದ್ದಾರೆ. 2023 ಕ್ಕೆ ಮನೆಗೆ ಹೋಗ್ತಾರೆ. ಯಾರನ್ನ ಯಾರು ಜೈಲಿಗೆ ಕಳಿಸ್ತಾರೆ ಗೊತ್ತಾಗುತ್ತೆ. ಅಪರಾಧ ಮಾಡಿದ್ರೆ ಮಾತ್ರ ಜೈಲಿಗೆ ಹಾಕಬಹುದು ಎಂದರು.ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆಯನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ.

ಈ ಬಾರಿ ಎರಡು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಪರವಾದ ಅಲೆ ಇದೆ. ನಾವು ಸೀರಿಯಸ್ ಆಗಿಲ್ಲ ಅಂದರೆ ಹೇಗೆ ಎಂದು ಹೇಳಿದ್ದಾರೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿಚಾರ ಮಾತನಾಡಿ, ಜನ ಸರ್ಕಾರದ ವಿರುದ್ಧ ತಿರುಗಿಬೀಳಬೇಕು. ಜನ ಎಲ್ಲವನ್ನ‌ ಸಹಿಸಿಕೊಂಡ್ರೆ ಹೇಗೆ? ಅದನ್ನ ಅವರು ಎನ್ ಕ್ಯಾಶ್ ಮಾಡಿಕೊಳ್ತಾರೆ. ಜನ ಇವತ್ತು ಕಷ್ಟದಲ್ಲಿದ್ದಾರೆ. ಜನರೇ ಇದರ ಬಗ್ಗೆ ಧ್ವನಿ ಎತ್ತಬೇಕು. ಅಕ್ಟೋಬರ್ ಒಳಗೆ ಮೀಸಲಾತಿ ವರದಿ ಪಡೆಯಬೇಕು. ಇಲ್ಲವಾದರೆ ಪಾಠ ಕಲಿಸ್ತೇವೆಂಬ ಜಯಮೃತ್ಯುಂಜಯ ಶ್ರೀಗಳ ಹೇಳಿಕೆ ಕೇಳಿದ್ದೇನೆ. ಪಂಚಮಸಾಲಿಗೆ ಬದ್ಧ ಆಗಿದ್ದಾರೆ. ಸರ್ಕಾರ ಮೀಸಲಾತಿ ಬಗ್ಗೆ ಕಮಿಟ್ ಆಗಿದೆ. ಹಾಗಾಗಿ ಅದನ್ನ ಮಾಡಬೇಕಾಗುತ್ತದೆ. ಶ್ರೀಗಳು ಸರ್ಕಾರಕ್ಕೆ ಪಾಠ ಕಲಿಸಲಿ ಬೇಕಾದ್ರೆ ಎಂದು ಶ್ರೀಗಳ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿಂಗಾಲೇಶ್ವರ ಶ್ರೀಗಳ ಸ್ಪರ್ಧೆಯಿಂದ ವಾಪಸ್ ಆದರೂ, ಧಾರವಾಡದಲ್ಲಿದ್ದಾರೆ 17 ಸ್ಪರ್ಧಿಗಳು..!

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ವಾಪಸ್ ತೆಗೆದುಕೊಳ್ಳುವುದಕ್ಕೆ ನಿನ್ನೆಯೇ ಕೊನೆ ದಿನವಾಗಿತ್ತು. ಪ್ರಹ್ಲಾದ್ ಜೋಶಿ ವಿರುದ್ಧ ಸ್ಪರ್ಧೆಗೆ ಇಳಿದಿದ್ದರು. ಆದರೆ ಕೊನೆ ಗಳಿಗೆಯಲ್ಲಿ ನಾಮಪತ್ರ ವಾಪಾಸ್ ಪಡೆದಿದ್ದಾರೆ. ಆದರೂ ಧಾರವಾಢ ಲೋಕಸಭಾ ಕ್ಷೇತ್ರದಲ್ಲಿ

ಚಿತ್ರದುರ್ಗಕ್ಕೆ ಪ್ರಿಯಾಂಕ ಗಾಂಧಿ ಭೇಟಿ..ಅಭ್ಯರ್ಥಿ ಚಂದ್ರಪ್ಪಗೆ ಅನುಕೂಲವೆಂದ ಮಾಜಿ ಸಚಿವ ಆಂಜನೇಯ

ಲೋಕಸಭಾ ಚುನಾವಣೆಯ ಹಿನ್ನೆಲೆ ಪ್ರಿಯಾಂಕ ಗಾಂಧಿ ತಮ್ಮ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಇಂದು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದು, ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಲಿದ್ದಾರೆ. ಈ ಬಗ್ಗೆ ಮಾಜಿ ಸಚಿವ

ಬರ ಪರಿಹಾರ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ನೀಡದಿರುವುದಕ್ಕೆ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಭಾಗಿಯಾಗಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ,

error: Content is protected !!