Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಸಾಧನೆ ಏನು?: ಡಿಕೆ ಶಿವಕುಮಾರ ಪ್ರಶ್ನೆ

Facebook
Twitter
Telegram
WhatsApp

 

ಹಾನಗಲ್: ರಾಜ್ಯದಿಂದ 25 ಸಂಸದರು ಆಯ್ಕೆಯಾಗಿದ್ದಾರೆ. ಅವರು ರಾಜ್ಯದ ಜನರ ಹಿತಕಾಯಲು ಕೃಷ್ಣ, ಮಹದಾಯಿ, ಮೇಕೆದಾಟು ಯೋಜನೆ ವಿಚಾರವಾಗಿ ಏನಾದರೂ ಮನವಿ ಪತ್ರ ನೀಡಿದ್ದಾರಾ? ಹಾಗಾದ್ರೆ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಸಾಧನೆ ಏನು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಪ್ರಶ್ನೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, ನಿಮ್ಮ ಸ್ವಾರ್ಥಕ್ಕಾಗಿ ರಾಜ್ಯದ ಧ್ವನಿ ಅಡಗಿಸಿದ್ದೀರಿ. ಮೊನ್ನೆ ಬಿಜೆಪಿ ಶಾಸಕ ರಾಯಚೂರಿನ ಭಾಗವನ್ನು ತೆಲಂಗಾಣಕ್ಕೆ ಸೇರಿಸಬೇಕು ಅಂದಿದ್ದಾರೆ. ಬಿಜೆಪಿಯ ಮತ್ತೊಬ್ಬ ಮಂತ್ರಿ ಹಿಂದೆ ಬೆಳಗಾವಿಯನ್ನು ಪ್ರತ್ಯೇಕ ರಾಜ್ಯ ಮಾಡಬೇಕು ಎಂದು ಹೇಳಿದ್ದರು. ಆದರೂ ಬಿಜೆಪಿಯವರು ಅಖಂಡ ಕರ್ನಾಟಕದ ಬಗ್ಗೆ ಮಾತನಾಡಿಲ್ಲ. ಈ ರೀತಿ ಮಾತನಾಡುತ್ತಿರುವುದು ತಪ್ಪು ಎಂದು ಮುಖ್ಯಮಂತ್ರಿಗಳೂ ಹೇಳುತ್ತಿಲ್ಲ ಎಂದರು.

ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೇವೆ ಎಂದರು. ಯಾರಿಗಾದರೂ ಸರ್ಕಾರಿ ಕೆಲಸ ಅಲ್ಲ ಖಾಸಗಿ ಕೆಲಸ ಸಿಕ್ಕಿತಾ? ಯುವಕರು ತಮ್ಮ ಪದವಿ ಪ್ರಮಾಣಪತ್ರವನ್ನು ಬೊಮ್ಮಾಯಿ ಅವರಿಗೆ ಕಳುಹಿಸಿ ಕೊಡಿ. ಕಳೆದ 7 ವರ್ಷಗಳಲ್ಲಿ 14 ಕೋಟಿ ಉದ್ಯೋಗ ನೀಡುವುದಿರಲಿ, ಇದ್ದ 4 ಕೋಟಿ ಕೆಲಸ ಕೂಡ ನಾಶವಾಗಿದೆ. ಇನ್ಯಾವ ಕಾರಣಕ್ಕೆ ನೀವು ಅವರಿಗೆ ಮತ ಹಾಕಬೇಕು. ಇಲ್ಲಿ ಕೇವಲ ಶ್ರೀನಿವಾಸ ಮಾನೆ ಮಾತ್ರ ಅಭ್ಯರ್ಥಿಯಲ್ಲ. ಇಲ್ಲಿರುವ ಪ್ರತಿಯೊಬ್ಬ ಮತದಾರನೂ ಅಭ್ಯರ್ಥಿಯೇ. ಕೇವಲ ನೀವು ಮಾತ್ರ ಮಾನೆ ಅವರಿಗೆ ಮತ ಹಾಕಿದರೆ ಸಾಲದು. ನಿಮ್ಮ ಜತೆ ಇನ್ನೂ ಐದು ಜನ ಮತಹಾಕುವಂತೆ ಮಾಡಬೇಕು. ಆಗ ಮಾನೆ ಅವರು 25 ಸಾವಿರ ಮತಗಳ ಅಂತರದಲ್ಲಿ ಗೆಲ್ಲಲು ಸಾಧ್ಯ.

ಬಿಜೆಪಿ ಸರ್ಕಾರ ಏನಾದರೂ ಸಾಧನೆ ಮಾಡಿದೆಯಾ? ಬಡವರಿಗೆ, ರೈತರಿಗೆ ಸಹಾಯ ಮಾಡಲು ಆಗಲಿಲ್ಲ. ಉದ್ಯೋಗ ನೀಡಲಿಲ್ಲ. ಆದರೂ ಅಚ್ಛೇದಿನ್ ಬಂತು ಅಂತಾರೆ? ಯಾರಿಗೆ ಬಂತು ಅಚ್ಛೇ ದಿನ? ನಿಮಗೇನಾದರೂ ಅಚ್ಛೇದಿನ ಬಂತಾ? ನಿಮ್ಮ ಖಾತೆಗೆ ಹಣ ಬಂತಾ? ಖಾತೆಗೆ ಹಣ ಹಾಕುತ್ತೇವೆ ಎಂದರಲ್ಲ ಎಲ್ಲಿ ಅಂತಾ ಬೊಮ್ಮಾಯಿ ಅವರನ್ನು ಕೇಳಬೇಕು. ಈ ರೀತಿ ಕೇಳಲು ಇದೇ 30ರಂದು ನಿಮಗೆ ಅವಕಾಶ, ಅಧಿಕಾರ ಕೊಟ್ಟಿದ್ದಾರೆ.

ಈ ಚುನಾವಣೆಯನ್ನು ಇಡೀ ರಾಷ್ಟ್ರ ನೋಡುತ್ತಿದೆ. ಇತ್ತೀಚೆಗೆ ನಡೆದ ಮಸ್ಕಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ 31 ಸಾವಿರ ಮತಗಳ ಅಂತರದಲ್ಲಿ ಗೆದ್ದರು. ಎಲ್ಲರೂ ಇದನ್ನು ಮೆಚ್ಚಿದರು. ಬೆಳಗಾವಿಯಲ್ಲಿ ಸ್ವಲ್ಪ ಅಂತರದಲ್ಲಿ ಸೋತೆವು. ಹೀಗಾಗಿ ನಮಗೆ ಒಂದೊಂದು ವೋಟೂ ಮುಖ್ಯ. ನಿಮ್ಮ ಪರಿಸ್ಥಿತಿ, ನಿಮ್ಮ ಬ್ಯಾಂಕ್ ಖಾತೆಯನ್ನು ನೋಡಿ ನಿರ್ಧಾರ ಮಾಡಿ. ನೀವು ಮಾತ್ರವಲ್ಲ, ನಿಮ್ಮ ಜತೆ ಇನ್ನು ಐದು ಜನ ಹಸ್ತದ ಗುರುತಿಗೆ ಮತ ಹಾಕುವಂತೆ ಮಾಡಿ. ನೀವು ಮತಯಂತ್ರದಲ್ಲಿ ಮತ ಚಲಾಯಿಸಿದಾಗ ಬರುವ ಶಬ್ಧ ಮೋದಿ ಹಾಗೂ ಬೊಮ್ಮಾಯಿ ಅವರಿಗೆ ಕೇಳಬೇಕು. ಆ ರೀತಿ ನೀವು ಮತದಾನ ಮಾಡಬೇಕು ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!