Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ಟಾರ್ ಸಿನಿಮಾಗಳಿಲ್ಲದೆ ಥಿಯೇಟರ್ ಬಂದ್ ಮಾಡಲು ಹೊರಟಿದ್ದ ಫಿಲ್ಮ್ ಚೆಂಬರ್ ನಿರ್ಧಾರವೇನು..?

Facebook
Twitter
Telegram
WhatsApp

ಬೆಂಗಳೂರು: ಐಪಿಎಲ್ ಫೀವರ್, ಲೋಕಸಭಾ ಚುನಾವಣೆಯ ಹಿನ್ನೆಲೆ ಯಾವುದೇ ಬಿಗ್ ಸ್ಟಾರ್ ಗಳ ಸಿನಿಮಾಗಳು ರಿಲೀಸ್ ಆಗದ ಕಾರಣ ತಮಿಳುನಾಡಿನಲ್ಲಿ ಒಂದು ತಿಂಗಳುಗಳ ಕಾಲ ಥಿಯೇಟರ್ ಬಂದ್ ಮಾಡಲು ನಿರ್ಧಾರ ಮಾಡಲಾಗಿದೆ. ಕನ್ನಡ ಫಿಲ್ಮ್ ಇಂಡಸ್ಟ್ರಿ ಬಗ್ಗೆಯೂ ನಿರ್ಧಾರ ಮಾಡುವುದಕ್ಕೆ ಇಂದು ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ ನಡೆದಿತ್ತು. ಆ ಸಭೆಯಲ್ಲಿ ಥಿಯೇಟರ್ ಮುಚ್ಚುವುದರಿಂದ ಯಾವುದೇ ಪದರಯೋಜನವಿಲ್ಲ, ಸ್ಟಾರ್ ನಟರ ಬಳಿ ಮನವಿ ಮಾಡಿಕೊಳ್ಳಬೇಕೆಂಬ ನಿರ್ಧಾರಕ್ಕೆ ಬಂದಿದ್ದಾರೆ.

ಈ ಬಗ್ಗೆ ಮಾತನಾಡಿದ ಫಿಲಂ ಚೇಂಬರ್‌ ಅಧ್ಯಕ್ಷ ಎನ್‌.ಎಂ.ಸುರೇಶ್‌ ನೇತೃತ್ವದಲ್ಲಿ ಹೈವೋಲ್ಟೇಜ್ ಸಭೆ ನಡೆದಿದೆ. “ಕನ್ನಡ ಚಿತ್ರರಂಗದ ಕುರಿತು ಇಷ್ಟು ದಿನಗಳಲ್ಲಿ ಈಗ ಸಭೆಯಾಗುತ್ತಿರುವುದು ಒಳ್ಳೆಯ ವಿಚಾರ. ತೆಲಂಗಾಣದ ಪರಿಸ್ಥಿತಿ ನಮ್ಮ ಗಮನಕ್ಕಿದೆ. ಆದರೆ, ಕರ್ನಾಟಕದಲ್ಲಿ ಚಿತ್ರಮಂದಿರಗಳನ್ನು ಬಂದ್‌ ಮಾಡುವುದು ಸರಿಯಲ್ಲ. ತಾತ್ಕಾಲಿಕವಾಗಿ ಸಿಂಗ್‌ ಸ್ಕ್ರೀನ್‌ ಥಿಯೇಟರ್‌ಗಳನ್ನು ಬಂದ್‌ ಮಾಡಿದರೆ ಕನ್ನಡ ಚಿತ್ರರಂಗದ ಮೇಲೆ ಪರಿಣಾಮ ಬೀರುತ್ತದೆ. ಪ್ರದರ್ಶಕರು, ವಿತರಕರು ಹಾಗೂ ನಿರ್ಮಾಪಕರು ಸದ್ಯಕ್ಕೆ ಯಾವ ನಿರ್ಧಾರವನ್ನೂ ತೆಗೆದುಕೊಳ್ಳುವ ಪರಿಸ್ಥಿತಿಯಲ್ಲಿಲ್ಲ.

 

ಸುಮಾರು 80ಕ್ಕೂ ಹೆಚ್ಚು ಸಿನಿಮಾಗಳಿಗೆ ರಿಲೀಸ್ ಪ್ಲಾನ್ ಮಾಡಲು ಆಗುತ್ತಿಲ್ಲ. ಸ್ಟಾರ್ ಚಿತ್ರಗಳು ಹೆಚ್ಚಾಗುವುದು ಮುಂದೆಯೂ ಅಸಾಧ್ಯ ಎಂಬಂತಿದೆ. ಥಿಯೇಟರ್‌ಗಳನ್ನು ಮುಚ್ಚಿದರೆ ಮುಂದಾಗುವ ಪರಿಣಾಮಗಳ ಬಗ್ಗೆಯೂ ಗಮನ ಇರಬೇಕು. ಹಾಗಾಗಿ, ಚಿತ್ರಮಂದಿರಗಳನ್ನು ಮುಚ್ಚಬಾರದು. ಕನ್ನಡ ಚಿತ್ರರಂಗದ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುತ್ತೇವೆ. ಟಿಕೆಟ್ ರೇಟ್ ಕಡಿಮೆ ಮಾಡುವುದು, ಯುಎಫ್ಒ, ಕ್ಯೂಬ್ ರೇಟ್ ಕಡಿಮೆ ಮಾಡುವ ಕುರಿತು ಸರ್ಕಾರಕ್ಕೆ ಕೋರಿಕೆ ಸಲ್ಲಿಸುತ್ತೇವೆ. ಕೇರಳದಲ್ಲಿ ಸರ್ಕಾರದ್ದೇ ಸ್ವಂತ ಒಟಿಟಿ ವ್ಯವಸ್ಥೆ ಇದೆ. ಇದು ಕರ್ನಾಟಕದಲ್ಲೂ ಜಾರಿಗೆ ಬರಬೇಕು. ಕಲಾವಿದರು ಕೂಡ ಸಹಕಾರ ನೀಡಬೇಕು. ಮೂರ್ನಾಲ್ಕು ದಿನದಲ್ಲಿ ಸ್ಟಾರ್‌ ನಟರ ಜತೆ ಸಭೆ ನಡೆಸಲಾಗುತ್ತದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವೀರೇಶನ್ ನಿಧನ : ಕಣ್ಣು ಮತ್ತು ದೇಹದಾನ

ಸುದ್ದಿಒನ್, ಚಿತ್ರದುರ್ಗ, ಜೂ.16 : ನೆಹರು ನಗರ ನಿವಾಸಿ, ಕಂದಾಯ ಇಲಾಖೆ ನಿವೃತ್ತ ರಾಜಸ್ವ ನಿರೀಕ್ಷಕ ವೀರೇಶನ್ ಎಂ.ಎನ್ (82) ಭಾನುವಾರ ಬೆಳಗ್ಗೆ 6 ಗಂಟೆಗೆ ನಿಧನರಾದರು. ಪತ್ನಿ ನಿವೃತ್ತ ಶಿಕ್ಷಕಿ ಅನ್ನಪೂರ್ಣಮ್ಮ, ಪುತ್ರರಾದ

ರೇಣುಕಾ ಸ್ವಾಮಿ ಮನೆಗೆ ಬಾಳೆಹೊನ್ನೂರು ರಂಭಾಪುರಿ ಶ್ರೀಗಳು ಭೇಟಿ : ಸಾಂತ್ವನ

ಸುದ್ದಿಒನ್, ಚಿತ್ರದುರ್ಗ, ಜೂನ್. 26 : ಇತ್ತೀಚೆಗೆ ಭೀಕರವಾಗಿ ಹತ್ಯೆ ಆಗಿರುವ ರೇಣುಕಸ್ವಾಮಿ ಅವರ ಮನೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಭೇಟಿಯಾದ

ಬ್ರಾಹ್ಮಣರಿಂದ ಹಿಡಿದು ದಲಿತರವರೆಗೆ ಎಲ್ಲರಿಗೂ ಸಮಾಜವನ್ನು ಪರಿವರ್ತಿಸುವ ಹೊಣೆಗಾರಿಕೆಯಿದೆ : ಪ್ರೊ.ಕಾಳೇಗೌಡ ನಾಗವಾರ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜೂ.16 : ಆರೋಗ್ಯಪೂರ್ಣ ಸಮಾಜವನ್ನು ಕಟ್ಟುವ ಜವಾಬ್ದಾರಿ ಬರಹಗಾರನ ಮೇಲಿದೆ ಎಂದು ಖ್ಯಾತ ಸಾಹಿತಿ ಹಾಗೂ

error: Content is protected !!