Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ – ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಸುಮಲತಾ ಸ್ಪರ್ಧೆ ಕಥೆ ಏನು..? ಈ ಬಗ್ಗೆ ಸಂಸದೆಯ ರಿಯಾಕ್ಷನ್ ಇಲ್ಲಿದೆ..!

---Advertisement---

ಮಂಡ್ಯ: ಒಂದು ಕಡೆ ವಿಪಕ್ಷಗಳೆಲ್ಲಾ ಒಗ್ಗಟ್ಟಾಗಿ ಈ ಬಾರಿ ಬಿಜೆಪಿಯನ್ನು ಸೋಲಿಸಲೇ ಬೇಕೆಂದು ಪಣ ತೊಟ್ಟಿವೆ. ಇದೀಗ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಹಾಕಲು ಹೊರಟಿದೆ. ಈ ಎಲ್ಲಾ ಬೆಳವಣಿಗೆ ನೋಡುತ್ತಿದ್ದರೆ, ಈ ಬಾರಿಯ ಲೋಕಸಭಾ ಚುನಾವಣೆಯ ಕಾವು ಜೋರಾಗಿರುತ್ತದೆ. ಸದ್ಯಕ್ಕೆ ರಾಜ್ಯ ರಾಜಕಾರಣದಲ್ಲಿ ಜೆಡಿಎಸ್ ಮತ್ತು ಬಿಜೆಪಿಯ ಮೈತ್ರಿ ವಿಚಾರ ಬಾರಿ ಚರ್ಚೆಗೆ ಗ್ರಾಸವಾಗಿದೆ.

ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿ ಹಾಗೂ ದೇವೇಗೌಡರ ನಡುವಿನ ಮಾತುಕತೆ ಮೈತ್ರಿ ಮಾಡಿಕೊಳ್ಳುವುದು ಖಚಿತ ಎಂದೇ ಹೇಳುತ್ತಿದೆ ಮೂಲಗಳು. ಅಧಿಕೃತವಾಗಿ ಮತ್ತೊಂದು ಸಭೆಯ ಬಳಿಕ ಘೋಷಣೆ ಮಾಡಬಹುದು. ಒಂದು ವೇಳೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾದರೆ ಸಂಸದೆ ಸುಮಲತಾಗೆ ಸಂಕಷ್ಟ ತಪ್ಪಿದ್ದಲ್ಲ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಸ್ವಾಭಿಮಾನದ ಮತಗಳಿಂದ ಗೆಲುವು ಸಾಧಿಸಿದ್ದರು. ಅದಷ್ಟೇ ಅಲ್ಲ, ಜೆಡಿಎಸ್ ಮತ್ತು ಸುಮಲತಾ ನಡುವೆ ದೊಡ್ಡ ಯುದ್ಧವೇ ನಡೆದು ಕಡೆಗೆ ಸುಮಲತಾ ಗೆಲುವು ಸಾಧಿಸಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ಸಂಸದೆಯಾಗಿದ್ದರು. ಇತ್ತಿಚೆಗೆ ಸುಮಲತಾ ಬಿಜೆಪಿ ಪಕ್ಷ ಬೇರೆ ಸೇರಿದ್ದಾರೆ. ಈಗ ಮೈತ್ರಿ ಎಂದರೆ, ಜೆಡಿಎಸ್ ಅದು ಮಂಡ್ಯ ಕ್ಷೇತ್ರ ಬಿಟ್ಟು ಕೊಡುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ಸುಮಲತಾ ಅವರಿಗೆ ಈ ಬಾರಿಯ ಲೋಕಾಭಾ ಚುನಾವಣೆಯ ಟಿಕೆಟ್ ಕಷ್ಟ ಸಾಧ್ಯವಾಗಲೂ ಬಹುದು.

ಈ ಮೈತ್ರಿ ಬಗ್ಗೆ ಮಾತನಾಡಿರುವ ಸಂಸದೆ ಸುಮಲತಾ, ಬಿಜೆಪಿ – ಜೆಡಿಎಸ್ ಮೈತ್ರಿ ಬಗ್ಗೆ ಅಧಿಕೃತ ಮಾಹಿತಿ ಬರಬೇಕು. ಕ್ಷೇತ್ರ ಹಂಚಿಕೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಅಧಿಕೃತವಾಗಿ ಮಾತನಾಡಿಲಿ. ಸದ್ಯಕ್ಕೆ ನಾನು ಆ ಟಾಪಿಕ್ ಬಗ್ಗೆ ಮಾತನಾಡಲ್ಲ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment