Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಳೆ, ಬೆಳೆ, ರಾಜಕೀಯದಲ್ಲಿ ಏನಾಗಲಿದೆ ಬದಲಾವಣೆ : ಯುಗಾದಿಯಂದು ಧಾರವಾಡದಲ್ಲಿ ಬೊಂಬೆಗಳು ನುಡಿದ ಭವಿಷ್ಯವೇನು..?

---Advertisement---

ಧಾರವಾಡ: ಕೆಲವೊಂದು ಕಡೆ ವಿಶೇಷತೆಯೂ ಹಲವು ವರ್ಷಗಳಿಂದ ನಡೆದುಕೊಂಡು ಬಂದಿರುತ್ತದೆ. ರಾಜ್ಯದ ಭವಿಷ್ಯವನ್ನು ನುಡಿಯಲಾಗುತ್ತದೆ. ಇದೀಗ ಯುಗಾದಿಯಂದು ಧಾರವಾಡ ತಾಲೂಕಿನ ಹನುಮಕೊಪ್ಪದಲ್ಲಿ ಬೊಂಬೆಗಳು ಭವಿಷ್ಯ ನುಡಿಯಲಿವೆ. ಆ ಭವಿಷ್ಯದ ಮೇಲೆ ಎಲ್ಲರ ಗಮನವಿರುತ್ತದೆ. ಈ ಬಾರಿಯ ಯುಗಾದಿಯಂದು ಭವಿಷ್ಯ ನುಡಿಯಲಾಗಿದೆ. ರಾಜಕೀಯ, ಮಳೆ, ಬೆಳೆ ಬಗ್ಗೆ ಭವಿಷ್ಯ ನುಡಿಯಲಾಗಿದೆ.

 

ಈ ಬಾರಿಯೂ ಮುಂಗಾರು ಮಳೆ ಅಲ್ಪ ಪ್ರಮಾಣದಲ್ಲಿಯೇ ಆಗಲಿದೆ. ಹಿಂಗಾರು ಮಳೆ ಕೂಡ ಕೈ ಕೊಡಲಿದೆ ಎಂದಿವೆ. ಇದನ್ನು ಕೇಳಿದ ರೈತರಿಗೆ ಬೇಸರವಾಗಿದೆ. ಯಾಕಂದ್ರೆ ಈ ಬಾರಿಯಾದರೂ ಒಳ್ಳೆಯ ಮಳೆ ಬೆಳೆ ಆಗುತ್ತದೆ ಎಂದೇ ನಂಬಲಾಗಿತ್ತು. ಇದೀಗ ಬೊಂಬೆಗಳ ಭವಿಷ್ಯ ಆತಂಕಕ್ಕರ ದೂಡಿದೆ. ಇದೇ ವೇಳೆ ರಾಜಕೀಯದ ವಿಚಾರವಾಗಿಯೂ ಭವಿಷ್ಯ ನುಡಿದಿದ್ದು, ಮೋದಿ ಅವರೇ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. ರಾಜ್ಯ ಹಾಗೂ ಕೇಂದ್ರದಲ್ಲಿ ಯಾವುದೇ ರೀತಿಯ ಬದಲಾವಣೆಯಾಗುವುದಿಲ್ಲ ಎಂಬ ಭವಿಷ್ಯ ನುಡಿದಿದೆ.

ಹನುಮಕೊಪ್ಪ ಗ್ರಾಮದಲ್ಲಿ ಯುಗಾದಿಯ ಅಮಾವಾಸ್ಯೆಯಂದು ಹಳ್ಳದಲ್ಲಿ ಗೊಂಬೆಗಳನ್ನು ಕಟ್ಟಲಾಗುತ್ತದೆ. ನಾಲ್ಕು ದಿಕ್ಕುಗಳಿಗೂ ನಾಲ್ಕು ಗೊಂಬೆಗಳನ್ನು ಕಟ್ಟಲಾಗುತ್ತದೆ. ಬಲಿಪಾಡ್ಯಮಿಯ ದಿನ ಹಿರಿಯರು ಬಂದು ಆ ಗೊಂಬೆಗಳನ್ನು ಅವಲೋಕಿಸುತ್ತಾರೆ. ಆ ಗೊಂಬೆಗಳನ್ನು ನೋಡಿದಾಗ ರೈತರ ಜೀವನ, ಮಳೆ ಬೆಳೆ ಬಗ್ಗೆ, ರಾಜಕೀಯದ ಬಗ್ಗೆ ಭವಿಷ್ಯವನ್ನು ತಿಳಿಯುತ್ತಾರೆ. ಈ ಬಾರಿ ರಾಜಕೀಯ ಗೊಂಬೆ ಯಾವುದೇ ರೀತಿಯಲ್ಲೂ ಬದಲಾವಣೆಯಾಗಿರಲಿಲ್ಲ. ಗೊಂಬೆಗಳ ಅಂಗಾಗಕ್ಕೆ ಧಕ್ಕೆಯಾದರೆ ನಾಯಕತ್ವ ಹೋಗುತ್ತದೆ ಎಂಬುದು ಅರ್ಥ. ಆದರೆ ಈ ಬಾರಿ ಯಾವುದೇ ವ್ಯತ್ಯಾಸವಾಗಿಲ್ಲದ ಕಾರಣ ರಾಜಕೀಯದಲ್ಲಿ ಬದಲಾವಣೆ ಇಲ್ಲ ಎಂದೇ ನಂಬಲಾಗಿದೆ. 1936ರಿಂದಾನೂ ಈ ಸಂಪ್ರದಾಯ ನಡೆದುಕೊಂಡು ಬಂದಿದೆ. ಹಾಗೇ ಎಷ್ಟೋ ಘಟನೆಗಳು ಸತ್ಯವಾಗಿದೆ ಅಂತೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment