Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜುಲೈ 26 ರಂದು ಪದವಿ ನಂತರ ಮುಂದೇನು ? ವೃತ್ತಿ ಮಾರ್ಗದರ್ಶನ ಕುರಿತು ಡಾ. ಡಿ.ವಿ. ಗುರುಪ್ರಸಾದ್ ಅವರಿಂದ ಉಪನ್ಯಾಸ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜುಲೈ. 23 : ನಗರದ ಚಳ್ಳಕೆರೆ ರಸ್ತೆಯಲ್ಲಿರುವ ಎಸ್‌. ಆರ್. ಬಿ. ಎಂ. ಎಸ್. ರೋಟರಿ ಸೇವಾ ಭವನದಲ್ಲಿ ಇದೇ ಜುಲೈ 26 ರಂದು ಪದವಿ ನಂತರ ಮುಂದೇನು ? ವೃತ್ತಿ ಮಾರ್ಗದರ್ಶನ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.

ಚಿತ್ರದುರ್ಗ ರೋಟರಿ ಟ್ರಸ್ಟ್, ರೋಟರಿ ಕ್ಲಬ್ ಚಿತ್ರದುರ್ಗ, ಆಶಾಕಿರಣ ಟ್ರಸ್ಟ್ ಚಿತ್ರದುರ್ಗ, ಯುವಜಯ ಫೌಂಡೇಶನ್ ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ 2022-23, 2023-24 & 2024-25 ನೇ ಸಾಲಿನಲ್ಲಿ ಪದವೀಧರರಾದವರಿಗೆ ” CAREER GUIDANCE ( ವೃತ್ತಿ ಮಾರ್ಗದರ್ಶನ ), WHAT AFTER GRADUATION “- ವಿಷಯದ ಬಗ್ಗೆ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ ವನ್ನು ಅಯೋಗಜಿಸಲಾಗಿದೆ.

ಈ ಕಾರ್ಯಕ್ರಮವನ್ನು ಖ್ಯಾತ ಲೇಖಕರೂ, ಪತ್ರಿಕಾ ಅಂಕಣಕಾರರೂ, ಉಪನ್ಯಾಸಕರೂ, ನುರಿತ ವಾಗ್ರಿಗಳೂ ಹಾಗೂ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರೂ ಆದ ಡಾ. D. V. ಗುರುಪ್ರಸಾದ್, ಬೆಂಗಳೂರು ಇವರು ನಡೆಸಿಕೊಡಲಿದ್ದಾರೆ. ವಿಶೇಷವಾಗಿ ಪದವೀಧರರಿಗೆ ಅತ್ಯಂತ ಉಪಯುಕ್ತ ಮಾಹಿತಿ ಯಾಗಿದ್ದು ವೃತ್ತಿ ಪರ ಭವಿಷ್ಯಕ್ಕೆ ಪೂರಕವಾಗಿದ್ದುದರಿಂದ ನೂತನ ಪದವೀಧರರು ತಮ್ಮ ಪೋಷಕರೊಂದಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡಿಸಿಕೊಳ್ಳಲು ಆಯೋಜಕರು ಮನವಿ ಮಾಡಿರುತ್ತಾರೆ.

ಆಗಸ್ಟ್ 5 ರ ಮಂಗಳವಾರ ದಿಂದ ಇದೇ ಸ್ಥಳದಲ್ಲಿ ಆರಂಭವಾಗಲಿರುವ ಹತ್ತು ವಾರಗಳ ” CAREER CONNECT (corporate readiness training)” ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಆಸಕ್ತ ವಿದ್ಯಾರ್ಥಿ- ಪದವೀಧರರು ಕಾರ್ಯಾಗಾರಕ್ಕೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು
ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಚೆಲುವರಾಯ ಗುಪ್ತ ಮೊ : 9902372619

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment