Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಾಟ್ಸಾಪ್ ಗೂ ಬಡಿದಿದೆ ಗ್ರಹಣ : ಮೆಸೇಜ್ ಕಳಿಸಲಾಗದೇ ಬಳಕೆದಾರರ ಪರದಾಟ…!

Facebook
Twitter
Telegram
WhatsApp

ಸುದ್ದಿಒನ್ ವೆಬ್ ಡೆಸ್ಕ್

ಇಂದು ಗ್ರಹಣವಿದೆ. ಆದರೆ ಇದೀಗ ವಾಟ್ಸಾಪ್ ಗೂ ಗ್ರಹಣ ಬಡಿದಿದೆ.
ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ಸೇವೆಗಳು ಮಂಗಳವಾರ ವ್ಯತ್ಯಯಗೊಂಡಿವೆ. ಕೆಲವು ತಾಂತ್ರಿಕ ಸಮಸ್ಯೆಗಳಿಂದ ವಾಟ್ಸಾಪ್ ಬಳಕೆದಾರರು ತೊಂದರೆ ಎದುರಿಸುತ್ತಿದ್ದಾರೆ.

ಮಾಹಿತಿಯ ಪ್ರಕಾರ, ಅಕ್ಟೋಬರ್ 25 ರಂದು ಮಧ್ಯಾಹ್ನ 12:30 ರಿಂದ ದೇಶಾದ್ಯಂತ ವಾಟ್ಸಾಪ್ ಸೇವೆಗಳು ಸ್ಥಗಿತಗೊಂಡಿವೆ. ವಾಟ್ಸಾಪ್ ಸಂದೇಶ ಕಳುಹಿಸಲು ಆಗಿಲ್ಲ, ವಿಡಿಯೋ ಕಾಲ್, ವಾಟ್ಸಾಪ್ ಸ್ಟೇಟಸ್ ಕೂಡ ನೋಡಲು ಆಗದಷ್ಟು ಸಮಸ್ಯೆ ಉಂಟು ಮಾಡಿದೆ.
ಬಳಕೆದಾರರು ಕಳುಹಿಸಿದ ಸಂದೇಶಗಳು ತಲುಪಿದ ಸ್ಥಿತಿಯನ್ನು WhatsApp ತೋರಿಸುತ್ತಿಲ್ಲ.  WhatsApp ನಲ್ಲಿ ಡಬಲ್ ಟಿಕ್ ಮತ್ತು ನೀಲಿ ಟಿಕ್ ಗುರುತುಗಳು ಕಾಣಿಸುತ್ತಿಲ್ಲ.

ಸಂದೇಶವನ್ನು ಕಳುಹಿಸಲಾಗಿದೆಯೇ ಅಥವಾ ಇಲ್ಲವೇ ಎಂದು ಬಳಕೆದಾರರು ಗೊಂದಲಕ್ಕೊಳಗಾಗಿದ್ದಾರೆ. ವೆಬ್‌ಸೈಟ್‌ನಲ್ಲಿ ಈ ಸಮಸ್ಯೆಯ ಬಗ್ಗೆ ಸಾವಿರಾರು ಬಳಕೆದಾರರು ಈಗಾಗಲೇ ದೂರು ನೀಡಿದ್ದಾರೆ. ದೂರಿನಲ್ಲಿ, ಕೆಲವು ಬಳಕೆದಾರರು ಸಂದೇಶಗಳನ್ನು ಕಳುಹಿಸುವಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದರೆ ಇತರರು ಸರ್ವರ್ ಸಂಪರ್ಕಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ನೀಲಿ ಟಿಕ್ ಗೋಚರಿಸುವುದಿಲ್ಲ.
ಮತ್ತೊಂದೆಡೆ, WhatsApp ಬಳಕೆದಾರರು ಟ್ವಿಟರ್‌ನಲ್ಲಿ ‘Whatsapp Down’ (#Whatsapp Down) ಎಂಬ ಹ್ಯಾಶ್‌ಟ್ಯಾಗ್ ಅನ್ನು ಟ್ರೆಂಡ್ ಮಾಡಿದ್ದಾರೆ.

ಮೆಟಾ ಕಂಪನಿ ವಕ್ತಾರರು ಟ್ವೀಟ್ ಮಾಡಿದ್ದು, ಕೆಲವು ಮಂದಿ ವಾಟ್ಸಪ್‌ನಲ್ಲಿ ಸಂದೇಶ ಕಳುಹಿಸಲು ಸಾಧ್ಯವಾಗದೇ ಸಮಸ್ಯೆ ಎದುರಿಸುತ್ತಿರುವ ವಿಚಾರ ತಿಳಿದುಬಂದಿದೆ. ಸಾಧ್ಯವಾದಷ್ಟು ಬೇಗ ವಾಟ್ಸಾಪ್‌ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೇನುತುಪ್ಪ ಬಳಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ಜೇನುತುಪ್ಪದ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಜೇನುತುಪ್ಪದಿಂದ ಅನೇಕ ಪ್ರಯೋಜನಗಳಿವೆ. ಜೇನು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಎಲ್ಲಾ ಔಷಧೀಯ ಗುಣಗಳನ್ನು ಹೊಂದಿದೆ.  ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರಿಗೂ ಜೇನು ತುಂಬಾ ಆರೋಗ್ಯಕಾರಿ.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು. ಈ ರಾಶಿಯವರು ಬಯಸಿದ್ದೆಲ್ಲಾ ಪಡೆಯುವ ಆಶಾವಾದಿಗಳು.   ಸೋಮವಾರ ರಾಶಿ ಭವಿಷ್ಯ -ಮೇ-13,2024 ಸೂರ್ಯೋದಯ: 05:48, ಸೂರ್ಯಾಸ್ತ : 06:36 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

error: Content is protected !!